ಯೂಟರ್ನ್…ಲಬುಶೇನ್ ಕ್ರಿಕೆಟ್ ಅಂಗಳಕ್ಕೆ ಕಾಲಿಡುವಂತೆ ಮಾಡಿದ್ದು ಬದಲಿ ಆಟಗಾರನ ಸ್ಥಾನ!


Team Udayavani, Dec 23, 2019, 5:30 PM IST

maer

ಕ್ರಿಡಾ ಕ್ಷೇತ್ರದಲ್ಲಿ ಸಿಕ್ಕ ಒಂದು ಅವಕಾಶದಿಂದ ಆಗಸದೆತ್ತರಕ್ಕೆ ಬೆಳೆದ ಅದೆಷ್ಟೋ ಕ್ರೀಡಾಪಟುಗಳನ್ನು ನಾವು ಕಂಡಿದ್ದೇವೆ. ಅಂಥವರ ಪಟ್ಟಿಗೆ ಮತ್ತೊಂದು ಹೆಸರು ಸೇರ್ಪಡೆಗೊಂಡಿದೆ. ಅದು ಯಾರೆಂದರೆ ಆಸ್ಟ್ರೇಲಿಯಾದ ಮಾರ್ನಸ್‌ ಲಬುಶೇನ್‌.

ಅದು ಪ್ರತಿಷ್ಠಿತ ಆ್ಯಷಸ್‌ ಸರಣಿಯ ಎರಡನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದ ಆಟ. ಇಂಗ್ಲೆಂಡ್‌ನ‌ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಹಣಾಹಣಿ. ಆಸ್ಟ್ರೇಲಿಯಾ ತಂಡಕ್ಕೆ ಇಂಗ್ಲೆಂಡ್‌ 267 ರನ್‌ಗಳ ಗೆಲುವಿನ ಗುರಿ ನೀಡಿತ್ತು. ಅದಾಗಲೇ 19 ರನ್‌ಗಳಿಗೆ ಎರಡು ವಿಕೆಟ್‌ ಕಳೆದುಕೊಂಡಿದ್ದ ಕಾಂಗರೂ ಪಡೆಗೆ ಗಾಯದ ಮೇಲೆ ಬರೆ ಎಂಬಂತೆ ಜೋಫ್ರಾ ಆರ್ಚರ್‌ 77ನೇ ಓವರ್‌ನಲ್ಲಿ ಎಸೆದ ಬೌನ್ಸರ್‌  ಸ್ಮಿತ್‌ ಅವರ ಕುತ್ತಿಗೆಗೆ ಬಡಿದು ಸ್ಮಿತ್‌ ಕ್ರೀಸ್‌ನಲ್ಲಿಯೇ  ಕುಸಿದು ಬಿದ್ದಿದ್ದರು. ಈ ವೇಳೆ ಬದಲಿಯಾಗಿ ಕಣಕ್ಕಿಳಿದವರೇ 25 ವರ್ಷದ ಮಾರ್ನಸ್‌ ಲಬುಶೇನ್‌. ಟೆಸ್ಟ್‌ ಕ್ರಿಕೆಟ್‌ನಲ್ಲಿ 142 ವರ್ಷಗಳ ಇತಿಹಾಸದಲ್ಲಿ ಕಂಕಷನ್‌ (ಗಾಯಗೊಂಡವರ ಬದಲಿಗೆ ಆಟಗಾರ ಕಣಕ್ಕೆ ಇಳಿಯುವ ನಿಯಮ) ಕಾರಣದಿಂದ ಆದ ಮೊದಲ ಪರ್ಯಾಯ ನಿದರ್ಶನ ಇದಾಗಿದೆ.

ಜೊಫ್ರಾ ಆರ್ಚರ್‌ ಬೆಂಕಿಯುಗುಳುವ ಬೌನ್ಸರ್, ಜಾಕ್‌ ಲೀಚ್‌ ಅವರ ಸ್ಪಿನ್‌ ಕೈಚಳಕಗಳಿಗೆ ತಕ್ಕ ಉತ್ತರ ನೀಡತೊಡಗಿದರು ಈ ಯುವ ಆಟಗಾರ. ಲಬುಶೇನ್‌ ಅವರನ್ನೂ ಜೊಫ್ರಾ ಬೌನ್ಸರ್‌ ಎಸೆತವೊಂದರ ಮೂಲಕ ಅಪಾಯಕ್ಕೆ ದೂಡಿದ್ದರು. ಆದರೆ ಎದೆಗುಂದದ ಅವರು ಅರ್ಧಶತಕವನ್ನು ಗಳಿಸಿ ಆಸ್ಟ್ರೇಲಿಯಾದ ಇನ್ನಿಂಗ್ಸ್‌ಗೆ ಜೀವ ತುಂಬಿದರು. ಅಂತಿಮವಾಗಿ 59 ರನ್‌ ಗಳಿಸಿ ಔಟಾದರೂ ಪಂದ್ಯವನ್ನು ಡ್ರಾದತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಆರು ವಿಕೆಟ್‌ ಕಳೆದುಕೊಂಡ ಆಸ್ಟ್ರೇಲಿಯಾ 154 ರನ್‌ ಗಳಿಸಿ ದಿನದಾಟ ಮತ್ತು ಪಂದ್ಯಕ್ಕೆ ಅಂತ್ಯ ಹಾಡಿತ್ತು. ಆ ಇನ್ನಿಂಗ್ಸ್‌ನಲ್ಲಿ  ತಂಡದ ಪರ ಗರಿಷ್ಠ ರನ್‌ ಕಲೆಹಾಕಿದ ಲಬುಶೇನ್‌ ಇಂಗ್ಲೆಂಡ್‌ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯಕ್ಕೆ ಮಹತ್ವದ ತಿರುವು ನೀಡಿದ್ದರು.

ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದಿತ್ತು. ಎರಡನೇ ಪಂದ್ಯ ಗೆದ್ದು ಸಮಬಲ ಸಾಧಿಸುವ ಜೊ ರೂಟ್‌ ಪಡೆಯ ಕನಸು ಕಮರಿತ್ತು. ಸರಣಿಯ ನಾಲ್ಕನೇ ಟೆಸ್ಟ್‌ ಮೊದಲ ನ್ನಿಂಗ್ಸ್‌ನಲ್ಲಿ 67 ರನ್‌ ದಾಖಲಿಸುವ ಮೂಲಕ ಲಬುಶೇನ್‌, ಆ್ಯಷಸ್‌ ಟೆಸ್‌ ಸರಣಿಯಲ್ಲಿ ತಾನಾಡಿದ ನಾಲ್ಕು ನ್ನಿಂಗ್ಸ್‌ಗಳಲ್ಲಿ  ಸತತ ನಾಲ್ಕು ಅರ್ಧಶತಕಗಳನ್ನು ಹೊಡೆದ ನಾಲ್ಕನೇ ಆಟಗಾರ ಎನಿಸಿಕೊಂಡರು.

ಏಕದಿನ ತಂಡದಲ್ಲೂ ಸ್ಥಾನ

ಟೆಸ್ಟ್‌ ನಲ್ಲಿ ಬದಲಿ ಆಟಗಾರನಾಗಿ ಕಣಕ್ಕಿಳಿದು ಸಿಕ್ಕ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡ ಲಬುಶೇನ್‌ಗೆ ಇದೀಗ ಆಸೀಸ್‌ ಏಕದಿನ ತಂಡದಲ್ಲೂ ಸ್ಥಾನ ಲಭಿಸಿದೆ. ಅದರಂತೆ ಮುಂದಿನ ವರ್ಷಾರಂಭದಲ್ಲಿ ಭಾರತ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಲಬುಶೇನ್ ಆಯ್ಕೆಯಾಗಿದ್ದಾರೆ. ಒಟ್ಟಾರೆಯಾಗಿ ಲಬುಶೇನ್‌ ಪಾಲಿಗೆ ಜೋಫ್ರಾ ಆರ್ಚರ್‌ ಎಸೆದ ಒಂದು ಬೌನ್ಸರ್‌ ಕ್ರಿಕೆಟ್‌ ಅಂಗಳಕ್ಕೆ ಕಾಲಿಡುವಂತೆ ಮಾಡಿದ್ದು ಸುಳ್ಳಲ್ಲ.

ದಕ್ಷಿಣ ಆಫ್ರಿಕಾದವರು

1994 ಜೂನ್‌ 22ರಂದು ದಕ್ಷಿಣ ಆಫ್ರಿಕಾದಲ್ಲಿ ಜನಿಸಿದ ಲಬುಶೇನ್‌ ಅವರ ಕುಟುಂಬ 2004ರಲ್ಲಿ  ಆಸ್ಟ್ರೇಲಿಯಾಕ್ಕೆ ವಲಸೆ ಬಂದಿತ್ತು. 2014-15ರ ಸಾಲಿನಲ್ಲಿ ಶೆಫೀಲ್ಡ್ ಶೀಲ್ಡ್ ಟೂರ್ನಿಯಲ್ಲಿ ಕ್ವೀನ್‌ ಲ್ಯಾಂಡ್ ಪರ ಆರಂಭಿಕನಾಗಿ ಕಣಕ್ಕಿಳಿದ ಅವರು 83 ರನ್‌ ಗಳಿಸಿ ತಾನಾಡಿದ ಮೊದಲ ಪ್ರಥಮ ದರ್ಜೆ ಪಂದ್ಯವನ್ನು ಸ್ಮರಣೀಯವಾಗಿರಿಸಿದ್ದರು. 2018ರ ಅಕ್ಟೋಬರ್‌ 7ರಂದು ಪಾಕಿಸ್ತಾನ ಎದುರಿನ ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದರು. ಈ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಸೊನ್ನೆ ಸುತ್ತಿದರೂ ಸರಣಿಯಲ್ಲಿ ಏಳು ವಿಕೆಟ್‌ ಕಿತ್ತು ತಮ್ಮ ಆಲ್‌ರೌಂಡರ್‌ ಸಾಮರ್ಥ್ಯ ಪ್ರಚುರಪಡಿಸಿದ್ದರು. ಬಲಗೈ ಲೆಗ್‌ ಬ್ರೇಕ್‌ ಅವರ ಬೌಲಿಂಗ್‌ ಶೈಲಿ. ಈ ವರ್ಷದ ಎಪ್ರಿಲ್‌ನಲ್ಲಿ  ಗ್ಲಾಮರ್ಗನ್‌ ಕಂಟ್ರಿ ಕ್ಲಬ್‌ ಪರ ಸಹಿ ಹಾಕಿದ ಲಬುಶೇನ್‌ ತಾನಾಡಿದ ಪ್ರಥಮ ದರ್ಜೆಯ ಮೊದಲ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಶತಕ ಹೊಡೆದು ಮಿಂಚಿದ್ದಾರೆ. ಜುಲೈ 2ಕ್ಕೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಒಂದು ಸಾವಿರ ರನ್‌ ಪೂರೈಸಿದ ಅವರು 2019ರ ಋತುವಿನಲ್ಲಿ ಆ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೊದಲ ಆಟಗಾರ ಎನಿಸಿಕೊಂಡರು. ಇದೇ ನವೆಂಬರ್‌  23ರಂದು ಪಾಕಿಸ್ತಾನ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ 185 ರನ್‌ ಗಳಿಸಿರುವ ಲಬುಶೇನ್‌ ಟೆಸ್ಟ್‌ನಲ್ಲಿ ಚೊಚ್ಚಲ ಶತಕದ ಬಾರಿಸಿ ಸಂಭ್ರಮ ಆಚರಿಸಿಕೊಂಡರು. ಲಬುಶೇನ್‌ ಇದೇ ಲಯವನ್ನು ಕಾಯ್ದುಕೊಂಡು ಮುನ್ನುಗ್ಗಿದರೆ ವಿಶ್ವ ಕ್ರಿಕೆಟ್ ನಲ್ಲಿ ದಿಗ್ಗಜರ ಪಟ್ಟಿಯಲ್ಲಿ ಗುರುತಿಸಿಕೊಳ್ಳುವ ದಿನಗಳು ದೂರವಿಲ್ಲ.

ಅಭಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.