ಮೆಂತೆ ಕಾಳು ಕೇವಲ ಅಡುಗೆಗೆ ಮಾತ್ರವಲ್ಲ…ಇದರಲ್ಲಿದೆ ಹಲವಾರು ಔಷಧೀಯ ಗುಣ

ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ.

Team Udayavani, Aug 14, 2022, 10:45 AM IST

ಮೆಂತೆ ಕಾಳು ಕೇವಲ ಅಡುಗೆಗೆ ಮಾತ್ರವಲ್ಲ…ಇದರಲ್ಲಿದೆ ಹಲವಾರು ಔಷಧೀಯ ಗುಣ

ಭಾರತೀಯ ಆಯುರ್ವೇದ ಔಷಧಿಯಲ್ಲಿ ಹಿಂದಿನಿಂದಲೂ ತನ್ನದೇ ಆದ ಸ್ಥಾನ ಪಡೆದುಕೊಂಡು ಬಂದಿರುವಂತಹ ಮೆಂತೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇವೆ. ಇದು ಕಾಯಿಲೆಗಳನ್ನು ನಿವಾರಿಸುವುದು ಮಾತ್ರವಲ್ಲದೆ ಕೆಲವೊಂದು ರೋಗಗಳು ಬಾರದಂತೆ ತಡೆಯುವುದು. ಮೆಂತೆ ಕಾಳುಗಳನ್ನು ತಿಂದರೆ ಅದು ತುಂಬಾ ಕಹಿ ಎನ್ನುವ ಕಾರಣಕ್ಕಾಗಿ ಹೆಚ್ಚಿನವರು ಇದನ್ನು ಕಡೆಗಣಿಸುವರು. ಆದರೆ ಇದರಲ್ಲಿ ಹಲವಾರು ರೀತಿಯ ಆರೋಗ್ಯ ಲಾಭಗಳು ಇವೆ.

ಮೊಡವೆ ನಿವಾರಣೆ
ಮೆಂತೆ ಕಾಳುಗಳು ಮೊಡವೆಯಿಂದ ಆಗುವ ಬ್ಲ್ಯಾಕ್ ಹೆಡ್(ಕಪ್ಪು ಕಲೆ)ಅನ್ನು ಬಾರದಂತೆ ಪರಿಣಾಮಕಾರಿಯಾಗಿ ತಡೆಯುವುದು ಮತ್ತು ನಿವಾರಣೆ ಮಾಡುವುದು. ಚರ್ಮದ ಕೆಳಭಾಗದಲ್ಲಿ ಇರುವಂತಹ ವಿಷಕಾರಿ ಅಂಶವನ್ನು ಹೊರಗೆ ಹಾಕುವುದು ಮತ್ತು ಚರ್ಮದ ಅಸಾಮಾನ್ಯತೆ ನಿವಾರಿಸುವುದು. ಮೆಂತೆ ಕಾಳಿನ ಪೇಸ್ಟ್ ಬಳಸಿಕೊಂಡು ಸುಟ್ಟ ಗಾಯ ನಿವಾರಣೆ ಮಾಡಬಹುದು. ಮೆಂತೆ ಪೇಸ್ಟ್ ಮಾಡಿ ಮತ್ತು ಅದಕ್ಕೆ ಜೇನುತುಪ್ಪ ಹಾಕಿಕೊಂಡು ಮಿಶ್ರಣ ಮಾಡಿ. ಇದನ್ನು ರಾತ್ರಿ ವೇಳೆ ಮೊಡವೆ ಇರುವ ಜಾಗಕ್ಕೆ ಹಚ್ಚಿಕೊಳ್ಳಿ ಮತ್ತು ಬೆಳಗ್ಗೆ ಎದ್ದ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ಕೆಲವೇ ದಿನಗಳಲ್ಲಿ ನಿಮಗೆ ಫಲಿತಾಂಶ ಕಂಡುಬರುವುದು

ಜ್ವರ ನಿವಾರಣೆ
ಒಂದು ಚಮಚ ಜೇನುತುಪ್ಪ ಮತ್ತು ಲಿಂಬೆಯೊಂದಿಗೆ ಮೆಂತೆ ಕಾಳಿನ ಸೇವನೆ ಮಾಡಿದರೆ ಆಗ ಖಂಡಿತವಾಗಿಯೂ ಜ್ವರ ನಿವಾರಣೆ ಮಾಡಬಹುದು. ಇದು ಗಂಟಲಿನ ಕಿರಿಕಿರಿ ನಿವಾರಣೆ ಮಾಡುವುದು. ಜ್ವರವಿದ್ದರೆ ದಿನದಲ್ಲಿ 2 3 ಸಲ ಸೇವಿಸಿ.

ದೇಹದ ಉಷ್ಣತೆ ತಗ್ಗಿಸುವುದು
ಮೆಂತೆ ಕಾಳು ದೇಹದಲ್ಲಿನ ಉಷ್ಣತೆ ಕಡಿಮೆ ಮಾಡುವುದು. ಒಂದು ಚಮಚ ಮೆಂತೆ ಕಾಳು ತೆಗೆದುಕೊಂಡು ಅದನ್ನು ರಾತ್ರಿ ವೇಳೆ ನೀರಿನಲ್ಲಿ ನೆನೆಯಲು ಹಾಕಿ. ಬೆಳಗ್ಗೆ ಇದರ ನೀರನ್ನು ಕುಡಿಯಿರಿ. ಇದರ ಪೇಸ್ಟ್ ಮಾಡಿ ತಲೆಗೆ ಹಚ್ಚಿಕೊಳ್ಬಹುದು.

ಜೀರ್ಣಕ್ರಿಯೆಗೆ ಸಹಕಾರಿ
ಮೆಂತೆ ಸೇವನೆ ಮಾಡಿದರೆ ಕರುಳಿನ ಕ್ರಿಯೆ ಸುಧಾರಣೆ ಆಗುವುದು ಮತ್ತು ಇದು ಜೀರ್ಣಕ್ರಿಯೆ ಮತ್ತು ಎದೆ ಉರಿ ಸಮಸ್ಯೆಗಳಿಗೆ ಒಳ್ಳೆಯ ಪರಿಹಾರವಾಗಿದೆ. ಜೀರ್ಣಕ್ರಿಯೆ ಸಮಸ್ಯೆಗೆ ಮೆಂತೆ ಕಾಳಿನ ಪೇಸ್ಟ್ ಗೆ ತುರಿದ ಶುಂಠಿ ಹಾಕಿಕೊಳ್ಳಿ ಮತ್ತು ಊಟಕ್ಕೆ ಮೊದಲು ಇದರ ಒಂದು ಚಮಚ ಸೇವಿಸಿ.

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವುದು
ಮೆಂತೆಯು ಹೆಚ್ಚಿರುವ ಕೊಲೆಸ್ಟ್ರಾಲ್ ಅಂಶವನ್ನು ತೆಗೆದುಹಾಕುವುದು ಎಂದು ಹಲವಾರು ಅಧ್ಯಯನಗಳು ಹೇಳಿವೆ. ಇದರೊಂದಿಗೆ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಇದು ಕಾಪಾಡುವುದು.

ಸಂಧಿವಾತ
ಆ್ಯಂಟಿ ಆಕ್ಸಿಡೆಂಟ್ ಹಾಗೂ ಉರಿಯೂತ ಶಮನಕಾರಿ ಗುಣವನ್ನು ಹೊಂದಿರುವ ಮೆಂತೆಯು ಸಂಧಿವಾತದ ನೋವನ್ನು ನಿವಾರಿಸುವುದು.

ಕಿಡ್ನಿಯ ಕಲ್ಲು
ಖಾಲಿ ಹೊಟ್ಟೆಯಲ್ಲಿ ಒಂದು ತಿಂಗಳ ಕಾಲ ಮೆಂತೆ ನೆನೆಸಿದ ನೀರನ್ನು ಕುಡಿಯಿರಿ. ಇದು ಕಿಡ್ನಿಯಲ್ಲಿ ಕಲ್ಲನ್ನು ಹೊರಹಾಕಲು ನೆರವಾಗುವುದು.

ಸುಂದರ ಚರ್ಮಕ್ಕಾಗಿ
ಸುಂದರ ಚರ್ಮವು ಪ್ರತಿಯೊಬ್ಬರಿಗೂ ಬೇಕು. ಇದಕ್ಕಾಗಿ ಸ್ವಲ್ಪ ಕಹಿಯಾಗಿರುವಂತಹ ಮೆಂತೆ ನೀರನ್ನು ಕುಡಿಯಿರಿ. ಇದು ಜೀರ್ಣಕ್ರಿಯೆಗೆ ಸಹಕರಿಸುವುದು ಮತ್ತು ವಿಷಕಾರಿ ಅಂಶವನ್ನು ಹೊರಹಾಕುವ ಮೂಲಕ ಕಾಂತಿಯುತ, ಆರೋಗ್ಯಕಾರಿ ಮತ್ತು ಕಲೆಯಿಲ್ಲದೆ ಇರುವ ಚರ್ಮವನ್ನು ನೀಡುವುದು.

ತೂಕ ಇಳಿಸಿಕೊಳ್ಳಿ
ದೇಹದಲ್ಲಿ ನೀರು ನಿಲ್ಲುವಂತಹ ಸಮಸ್ಯೆಯನ್ನು ನಿವಾರಣೆ ಮಾಡಲು ಎರಡು ಲೋಟ ಮೆಂತೆ ಕಾಳಿನ ಬಿಸಿ ನೀರನ್ನು ಕುಡಿಯಬೇಕು. ಇದರಿಂದ ಹೊಟ್ಟೆ ಉಬ್ಬರ ಉಂಟಾಗದು,

ಹೃದಯದ ಆರೋಗ್ಯ ಕಾಪಾಡುವುದು
ಮೆಂತೆ ನೀರನ್ನು ಕುಡಿಯುವ ಜತೆಗೆ ಅದನ್ನು ಬಾಯಿಗೆ ಹಾಕಿಕೊಂಡು ಜಗಿದು ತಿನ್ನಬೇಕು. ಇದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಿ ಹೃದಯದ ಕಾಯಿಲೆಗಳು ದೂರವಿರುವಂತೆ ಮಾಡುವುದು.

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.