ಅಪ್ಪನ ಕರೆ ಲೆಕ್ಕಿಸದೇ ಪಿಯು ಪರೀಕ್ಷೆ ಬರೆಯೋದು ಬಿಟ್ಟು ಕ್ರಿಕೆಟ್ ನಲ್ಲಿ ಮಿಂಚಿದ ಬಿಶ್ನೋಯ್!


Team Udayavani, Feb 14, 2020, 6:00 PM IST

ravci

ಅದು 2018ರ ಮಾರ್ಚ್ ತಿಂಗಳು. ಜೈಪುರ ಅಂಗಳದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರರು ನೆಟ್ ನಲ್ಲಿ ಬೆವರು ಹರಿಸುತ್ತಿದ್ದರು. ಅಲ್ಲಿ 17 ರ ಹರೆಯದ ಹುಡುಗನೋರ್ವನನ್ನು ನೆಟ್ಸ್ ನಲ್ಲಿ ಬಾಲ್ ಹಾಕಲು ಕರೆಸಲಾಗಿತ್ತು.  ಮೊದಲ ಎರಡು ದಿನಗಳ ಅಭ್ಯಾಸ ಮುಗಿದಿತ್ತು. ಆದರೆ ಆ ಹುಡುಗನಿಗೆ ಇನ್ನೂ ಅವಕಾಶ ದೊರೆತಿರಲಿಲ್ಲ. ನಿರಾಶನಾಗಿ ಕುಳಿತಿದ್ದವನಿಗೆ ಮನೆಯಿಂದ ಫೋನ್ ಬಂದಿತ್ತು. ಆ ಕಡೆಯಿಂದ ಅಪ್ಪ ಒಂದೇ ಉಸಿರಲ್ಲಿ ಹೇಳಿದ್ದರು,

ಕ್ರಿಕೆಟ್ ಆಡಿದ್ದು ಸಾಕು, ಮನೆಗೆ ಬಾ…!

ಇನ್ನು ಕೆಲವೇ ದಿನಗಳಲ್ಲಿ ಆತನ 12ನೇ ತರಗತಿ ಪಬ್ಲಿಕ್ ಪರೀಕ್ಷೆ ಇತ್ತು. ಅದಕ್ಕಾಗಿ ಬಂದಿತ್ತು ಅಪ್ಪನ ಬುಲಾವ್. ಇತ್ತ ನೆಟ್ಸ್ ನಲ್ಲಿ ಬಾಲ್ ಹಾಕಲೂ ಅವಕಾಶವಿಲ್ಲ. ಭವಿಷ್ಯದ ದೃಷ್ಟಿಯಿಂದ ಪರೀಕ್ಷೆಯಾದರೂ ಬರೆದು ಬರುವ ಎಂದು ಹುಡುಗ ಹೊರಟಿದ್ದ. ಆದರೆ ಕೋಚ್ ತಡೆದಿದ್ದರು.

ಕ್ರಿಕೆಟ್ ಈಗ  ಇಲ್ಲವೇ ಮತ್ತೆಂದೂ ಇಲ್ಲ..!

ನಿಂತ. ಆಡಿದ. ತನ್ನ ಸ್ಪಿನ್‌ ಜಾಲದಿಂದ ಎಲ್ಲರನ್ನೂ ಮೋಡಿ ಮಾಡಿದ. ಅಂಡರ್‌ 19 ವಿಶ್ವ ಕಪ್ ನಲ್ಲಿ ಅತೀ ಹೆಚ್ಚು ವಿಕೆಟ್ ಕಿತ್ತು ದಾಖಲೆ ಬರೆದ. ಆತನೇ ವಿಶ್ವ ಕಪ್ ಫೈನಲ್ ಪಂದ್ಯದಲ್ಲಿ ನಾಲ್ಕು ವಿಕೆಟ್ ಕಿತ್ತು ಭಾರತಕ್ಕೆ ಗೆಲುವಿನ ಆಸೆ ಚಿಗುರಿಸಿದ್ದ ರವಿ ಬಿಶ್ನೋಯ್.

ರವಿ ರಾಜಸ್ಥಾನದ ಜೋಧ್ ಪುರದವನು. ಕ್ರಿಕೆಟ್ ಅಂದರೆ ಪಂಚಪ್ರಾಣ. ತಂದೆ ಪ್ರಾಥಮಿಕ ಶಾಲೆಯ ಹೆಡ್ ಮಾಸ್ಟರ್. ಸಹಜವೆಂಬಂತೆ ಶಿಸ್ತಿನ ಮನುಷ್ಯ. ಆಟಕ್ಕಿಂತ ಪಾಠಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದವರು. ಅಪ್ಪನಿಗೆ ಗೊತ್ತಿಲ್ಲದ ಹಾಗೆ ಆಡಿದ್ದೇ ಜಾಸ್ತಿ. ಆದರೆ ರವಿಯ ಆಟಕ್ಕೆ ಹೆಚ್ಚಿನ ಬೆಂಬಲ ಸಿಕ್ಕದ್ದು ಅಮ್ಮನಿಂದ. ಅಪ್ಪನಿಲ್ಲದ ಸಮಯದಲ್ಲಿ ಅಮ್ಮನ ಜೊತೆ ಟಿವಿಯಲ್ಲಿ ಕ್ರಿಕೆಟ್ ನೋಡುತ್ತಿದ್ದ.

ಜೋಧ್ ಪುರದಲ್ಲಿ ಕ್ರಿಕೆಟ್ ಗೆ ಬೇಕಾದ ವಾತಾವರಣವಿರಲಿಲ್ಲ. ಅಕಾಡೆಮಿಯೂ ಇರಲಿಲ್ಲ. ಏಳು ವರ್ಷಗಳ ಹಿಂದೆ ನನ್ನ ಹಿರಿಯ ಗೆಳೆಯರು ಸೇರಿ ಅಕಾಡೆಮಿ ಮಾಡಲು ಯೋಚಿಸಿದ್ದರು. ಸರಿಯಾದ ಹಣಕಾಸು ವ್ಯವಸ್ಥೆ ಇರಲಿಲ್ಲ. ಹಾಗಾಗಿ ನಾವೇ ಕೆಲಸಗಳನ್ನು ಮಾಡುತ್ತಿದ್ದೆವು ಎನ್ನುತ್ತಾರೆ ರವಿ. ಹೀಗೆ ಕ್ರಿಕೆಟ್ ಪಟ್ಟುಗಳನ್ನು ಕಲಿತು ಮೊದಲ ಬಾರಿಗೆ ರಾಜಸ್ಥಾನ್ ರಾಯಲ್ಸ್ ನ ನೆಟ್ಸ್ ಬೌಲರ್ ಆದಾಗ ಕ್ರಿಕೆಟ್ ವಲಯದಲ್ಲಿ ರವಿ ಬಿಶ್ನೋಯ್ ಹೆಸರು ಕೇಳಿತ್ತು. ಆದರೆ ಪರೀಕ್ಷೆ ದಿನ ಹತ್ತಿರ ಬಂದಿತ್ತು. ಅಪ್ಪನ ಕರೆ ಬಂದಿತ್ತು. ಕೋಚ್ ಹೇಳಿದ ಮಾತು ಕಿವಿಯಲ್ಲಿತ್ತು. ” ಇಂದು ಇಲ್ಲವೇ ಮತ್ತೆಂದೂ ಇಲ್ಲ” ರವಿ ಅಲ್ಲೇ ನಿಂತ. ಕ್ರಿಕೆಟ್ ನ ಕೈ ಹಿಡಿದ. ಕ್ರಿಕೆಟ್ ಆತನ ಕೈ ಹಿಡಿಯಿತು. ಆತ ಇನ್ನೂ 12ನೇ ತರಗತಿ ಪರೀಕ್ಷೆ ಬರೆದಿಲ್ಲ!

ಐಪಿಎಲ್ ಮುಗಿದ ನಂತರ ವಿನು ಮಂಕಡ್ ಟ್ರೋಫಿಯಲ್ಲಿ ರಾಜಸ್ಥಾನ ರಾಜ್ಯ ತಂಡದ ಪರ ಮೊದಲ ಬಾರಿಗೆ ರವಿ ಆಡಿದ. ಆರು ಲಿಸ್ಟ್ ಎ ಪಂದ್ಯಗಳಿಂದ ಎಂಟು ವಿಕೆಟ್, ಆರು ಟಿ20 ಪಂದ್ಯಗಳಲ್ಲಿ ಆರು ವಿಕೆಟ್ ಪಡೆದ ರವಿ ಮೊದಲ ಬಾರಿಗೆ ಅಂಡರ್‌ 19 ತಂಡಕ್ಕೆ ಆಯ್ಕೆಯಾದ. ಬಾಂಗ್ಲಾದೇಶದ ವಿರುದ್ಧದ ಅದ್ಭುತ ಪ್ರದರ್ಶನದಿಂದ ವಿಶ್ವ ಕಪ್ ತಂಡಕ್ಕೂ ಆಯ್ಕೆಯಾದ. ವಿಶ್ವ ಕಪ್ ನಲ್ಲೂ ಅಭೂತಪೂರ್ವ ಯಶಸ್ಸು ಗಳಿಸಿದ ರವಿ ಒಟ್ಟು 17 ವಿಕೆಟ್ ಪಟೆದ. ಇದು ಅಂಡರ್ 19 ವಿಶ್ವ ಕಪ್ ಇತಿಹಾಸದಲ್ಲಿ ಭಾರತೀಯ ಬೌಲರ್ ಓರ್ವನ ದಾಖಲೆ. ಫೈನಲ್‌ ನಲ್ಲೂ ನಾಲ್ಕು ವಿಕೆಟ್ ಪಡೆದು ಗೆಲುವಿನ ಆಸೆ ಚಿಗುರಿಸಿದ್ದ.

ಐಪಿಎಲ್ ನಲ್ಲಿ ರವಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಆಯ್ಕೆಯಾಗಿದ್ದಾನೆ. 20 ಲಕ್ಷ ಮೂಲ ಬೆಲೆಯ ರವಿ ಪಡೆದಿದ್ದು ಬರೋಬ್ಬರಿ ಎರಡು ಕೋಟಿ. ಸಹಜವಾಗಿ ಖುಷಿಗೊಂಡಿದ್ದರೂ ಇದಕ್ಕಿಂತ ಖುಷಿ ಭಾರತ ತಂಡವನ್ನು ಸೇರುವಾಗ ಆಗುತ್ತದೆ. ಆ ದಿನವನ್ನು ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ.

 

-ಕೀರ್ತನ್ ಶೆಟ್ಟಿ ಬೋಳ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.