ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡುತ್ತೆ…ಮೀನಿನಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ ಗೊತ್ತಾ!


Team Udayavani, Oct 8, 2020, 7:11 PM IST

Fish

ಪ್ರಕೃತಿ ನಮಗೆ ನೀಡಿರುವಂತಹ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು. ಮೀನು ಮಾಂಸಹಾರಿಗಳಿಗೆ ತುಂಬಾ ಪ್ರಿಯ ಆಹಾರ. ಮೀನು ತುಂಬಾ ಆರೋಗ್ಯಕರ ಆಹಾರ ಮತ್ತು ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು ದೇಹಕ್ಕೆ ಲಭ್ಯವಾಗುವುದು. ಮೀನಿನಲ್ಲಿ ಪ್ರೋಟೀನ್, ವಿಟಮಿನ್ ಡಿ, ಕ್ಯಾಲ್ಸಿಯಂ, ಫೋಸ್ಫರಸ್ ಲಭ್ಯವಿದೆ. ಮೀನಿನಲ್ಲಿ ಕಬ್ಬಿಣ, ಸತು, ಮೆಗ್ನಿಶಿಯಂ, ಅಯೋಡಿನ್ ಮತ್ತು ಪೊಟಾಶಿಯಂನಂತಹ ಖನಿಜಾಂಶಗಳಿವೆ. ಮೀನಿನಿಂದ ಆರೋಗ್ಯಕ್ಕೆ ಹಲವು ರೀತಿಯ ಲಾಭಗಳಿವೆ.

ಹೃದಯ ಕಾಯಿಲೆ ಸಮಸ್ಯೆ ಕಡಿಮೆ ಮಾಡುವುದು:
ಮೀನುಗಳಲ್ಲಿ ಸ್ಯಾಚುರೇಟೆಡ್ ಫ್ಯಾಟ್‌ಗಳು ಇಲ್ಲದಿರುವ ಕಾರಣ ಇವುಗಳ ಸೇವನೆಯಿಂದ ಮನುಷ್ಯನ ಹೃದಯಕ್ಕೆ ಯಾವುದೇ ಬಗೆಯ ತೊಂದರೆಗಳು ಉಂಟಾಗುವುದಿಲ್ಲ. ಬದಲಿಗೆ ಹೃದಯದ ಆರೋಗ್ಯಕ್ಕೆ ಒಳ್ಳೆಯದೇ ಆಗುತ್ತದೆ. ಇದಕ್ಕೆ ಕಾರಣ ಮನುಷ್ಯನ ಹೃದಯದ ಆರೋಗ್ಯವನ್ನು ಹಾಳು ಮಾಡುವ ಕೊಲೆಸ್ಟ್ರಾಲ್ ಅಂಶವನ್ನು ಮೀನುಗಳ ದಿನ ನಿತ್ಯ ಸೇವನೆಯಿಂದ ದೂರ ಇಡಬಹುದು.

ವಿಟಮಿನ್ ಡಿ ಮೂಲ:
ಮೀನಿನಲ್ಲಿ ವಿಟಮಿನ್ ಡಿ ಸಮೃದ್ಧವಾಗಿದೆ ಮತ್ತು ಇದು ದೇಹಕ್ಕೆ ಬೇಕಾಗುವ ಪ್ರಮುಖ ಪೋಷಕಾಂಶಗಳಲ್ಲಿ ಒಂದಾಗಿದೆ. ಮೂಳೆಗಳ ಆರೋಗ್ಯ ಮತ್ತು ಬೆಳವಣಿಗೆಗೆ ಕ್ಯಾಲ್ಸಿಯಂ ಹೀರಿಕೊಳ್ಳಲು ವಿಟಮಿನ್ ಡಿ ಅತೀ ಅಗತ್ಯ.

ಸ್ಮರಣಶಕ್ತಿ ವೃದ್ಧಿ:
ಮೀನುಗಳ ಸೇವನೆಯಿಂದ ಮಿದುಳಿನ ಬೆಳವಣಿಗೆಯಾಗಿ ಸ್ಮರಣಶಕ್ತಿ ವೃದ್ಧಿಗೆ ಸಹಕಾರಿಯಾಗಿದೆ. ಇದು ಮಕ್ಕಳಿಗೆ ಬಹಳ ಉಪಯುಕ್ತ.

ಖಿನ್ನತೆ ಕಡಿಮೆ ಮಾಡುವುದು:
ಮೀನು ಮತ್ತು ಮೀನಿನ ಎಣ್ಣೆಯು ಖಿನ್ನತೆ ದೂರ ಮಾಡುವುದು. ಇದು ಖಿನ್ನತೆಯ ಲಕ್ಷಣವನ್ನು ಕಡಿಮೆ ಮಾಡಿ ಮಾನಸಿಕ ಆರೋಗ್ಯ ಸುಧಾರಿಸುವುದು.

ದೃಷ್ಟಿ ಸುಧಾರಣೆ:
ಮೀನಿನಲ್ಲಿ ಇರುವ ಕೊಬ್ಬಿನಾಮ್ಲವು ಕಣ್ಣಿನ ದೃಷ್ಟಿ ಮತ್ತು ಆರೋಗ್ಯ ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಯಾಕೆಂದರೆ ಮೆದುಳು ಮತ್ತು ಕಣ್ಣುಗಳು ಒಮೆಗಾ 3 ಕೊಬ್ಬಿನಾಮ್ಲಗಳ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿವೆ ಮತ್ತು ಅವುಗಳ ಆರೋಗ್ಯ ಮತ್ತು ಚಟುವಟಿಕೆಗೆ ಈ ಪೋಷಕಾಂಶಗಳು ಅತೀ ಅಗತ್ಯ.

ಸರಿಯಾದ ನಿದ್ರೆ:
ಸರಿಯಾಗಿ ನಿದ್ರೆ ಪೂರ್ತಿಯಾಗದಿದ್ದರೆ ನಿಯಮಿತವಾಗಿ ಮೀನು ಸೇವಿಸಿ. ಮೀನಿನಲ್ಲಿರುವಂತಹ ಉನ್ನತ ಮಟ್ಟದ ವಿಟಮಿನ್ ಡಿ ನಿದ್ರೆ ಸರಾಗವಾಗಿ ಆಗುವಂತೆ ಮಾಡುವುದು.

ಉತ್ತಮ ಚರ್ಮ ಮತ್ತು ಕೂದಲು ಬೆಳೆಯಲು ಸಹಕಾರಿ:
ಮೀನು ಸೇವನೆಯಿಂದ ನಿಮ್ಮ ಕೂದಲು ಉದ್ದವಾಗಿ ಬೆಳೆಯಲು ಸಹಕಾರಿ. ಇದರಲ್ಲಿರುವ ಕಡಿಮೆ ಕೊಬ್ಬಿನ ಅಂಶಗಳು ಮತ್ತು ಉತ್ತಮ ಕೊಬ್ಬಿನಾಮ್ಲಗಳು ಕೂದಲು ಉದುರುವುದನ್ನು ಮತ್ತು ಚರ್ಮ ಸುಕ್ಕುಗಟ್ಟುವುದನ್ನು ತಡೆದು ಹೊಳಪು ನೀಡುತ್ತದೆ.

ಸಂಧಿವಾತ ಕಡಿಮೆ ಮಾಡುವುದು:
ನೀವು ಸಂಧಿವಾತದಿಂದ ಬಳಲುತ್ತಿದ್ದರೆ ದಿನನಿತ್ಯ ಮೀನಿನ ಸೇವನೆ ಮಾಡಿ. ಸಂಧಿವಾತವು ಗಂಟುಗಳ ತೀವ್ರವಾದ ಉರಿಯೂತವಾಗಿದ್ದು, ನಿಯಮಿತವಾಗಿ ಮೀನು ಸೇವಿಸಿದರೆ ಅದರಿಂದ ನೋವು ಮತ್ತು ಊತ ಕಡಿಮೆ ಮಾಡಬಹುದು.

ಕೊಲೆಸ್ಟ್ರಾಲ್ ತಗ್ಗಿಸುವುದು:
ಮೀನು ದೇಹದಲ್ಲಿರುವ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಮೀನಿನಲ್ಲಿ ಇರುವಂತಹ ಒಮೆಗಾ 3 ಕೊಬ್ಬಿನಾಮ್ಲವು ದೇಹದಲ್ಲಿ ಇರುವಂತಹ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು.

ಮಧುಮೇಹ ತಗ್ಗಿಸುವುದು:
ಟೈಪ್ 1 ಮಧುಮೇಹವನ್ನು ಮೀನು ತಗ್ಗಿಸುವುದು. ಮೀನಿನಲ್ಲಿ ಇರುವಂತಹ ಉನ್ನತ ಮಟ್ಟದ ವಿಟಮಿನ್ ಡಿ ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಗ್ಲುಕೋಸ್ ಚಯಾಪಚಯಕ್ಕೆ ನೆರವಾಗುವುದು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.