ಬಹುಪಯೋಗಿ ಜೀವಾಮೃತವಿದು ಸೀಯಾಳ; ಎಳನೀರು ಐಸ್‌ಕ್ರೀಮ್‌, ಜ್ಯೂಸ್!


Team Udayavani, Apr 17, 2019, 12:30 PM IST

Coconut

ವಿದ್ಯಾನಗರ: ಕಲ್ಪವೃಕ್ಷ ಎಂದು ಹೆಸರುಪಡೆದಿರುವ ತೆಂಗಿನ ಮರದ ಉಪಯೋಗವನ್ನು ಅರಿತ ನಮ್ಮ ಹಿರಿಯರು ಪ್ರತಿ ಮನೆ ಮನೆಯಲ್ಲೂ ತೆಂಗಿನ ಮರ ನೆಟ್ಟ ಕಾರಣ ಇಂದು ಭಾರತದಾದ್ಯಂತ ಎಲ್ಲಾ ಕಾಲದಲ್ಲೂ ಜನರ ಅಗತ್ಯವನ್ನು ಪೂರೈಸುವ ಅಕ್ಷಯಪಾತ್ರೆಯಾಗಿ ಇವುಗಳು ಆವರಿಸಿಕೊಂಡಿವೆ. ಬಹಳ ಉಪಯೋಗಪ್ರದವಾದ ತೆಂಗಿನ ಮರದ  ತೆಂಗಿನ ಹೂವು, ಕಾಯಿ, ಗರಿ, ಕಾಂಡಗಳು ಸೇರಿದಂತೆ ಪ್ರತಿಯೊಂದು ಭಾಗವೂ ಅಮೂಲ್ಯ. ಅದರಲ್ಲೂ ಪೂರ್ಣ ಬಲಿತಿಲ್ಲದ, ಹೆಚ್ಚು ನೀರನ್ನೇ ಹೊಂದಿರುವ ಎಳನೀರು ಒಂದು ನೈಸರ್ಗಿಕ ಪಾನೀಯವಾಗಿ ಸರ್ವರೋಗವನ್ನೂ ನಿವಾರಿಸುವ ಪನ್ನೀರಾಗಿ ಮನೆಮಾತಾಗಿದೆ.

ಪೋಷಕಾಂಶಗಳ ಆಗರವಾಗಿರುವ ಸೀಯಾಳ ವರ್ಷ ಪೂರ್ತಿ ದೊರಕುವ ಏಕೈಕ ಫಲ. ನವಿರಾದ ಸಿಹಿ ಹಾಗೂ ಬಹಳಷ್ಟು ಪೋಷಕಾಂಶಗಳ ಮೂಲಕ ದೇಹದ ದಣಿವನ್ನು ಶೀಘ್ರವಾಗಿ ನಿವಾರಿಸಿ ಪೂರ್ಣ ಕ್ಷಮತೆಯನ್ನು ನೀಡಿ ದೇಹವನ್ನು ಬಲಗೊಳಿಸುತ್ತದೆ.

ದೇಹಕ್ಕೆ ಅಗತ್ಯವಾದ ಖನಿಜ, ಲವಣ, ಸಕ್ಕರೆಯ ಅಂಶಗಳು ನಮ್ಮ ದೇಹಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇರುವ ಸೀಯಾಳ ಅಮೃತ ಸಮಾನವಾದ ಪಾನೀಯ. ಜೀವಕೋಶಗಳ ಸಮರ್ಪಕ ಬೆಳವಣಿಗೆ, ನಿಯಂತ್ರಣ ಮಾತ್ರವಲ್ಲದೆ ದೇಹವನ್ನು ಕ್ಯಾನ್ಸರ್‌ನಿಂದ ತಡೆಯಬಲ್ಲ ಎಳನೀರು ಜೀವರಾಸಾಯನಿಕ ಕ್ರಿಯೆಗಳನ್ನೂ ಹೆಚ್ಚಿಸುತ್ತದೆ.

ಬೇಸಗೆಯಲ್ಲಿ ಭಾರೀ ಡಿಮ್ಯಾಂಡ್‌:

ಬೇಸಗೆ ಕಾಲದಲ್ಲಿ ನಿರ್ಜಲಿಕರಣದಿಂದ ಎದುರಾಗುವ ನಿಶ್ಶಕ್ತಿಗೆ ಸೀಯಾಳ ಬಹಳ ಉಪಯುಕ್ತ ಔಷಧ. ಆದುದರಿಂದಲೇ ಬಿಸಿಲ ಧಗೆ ತಣಿಸುವ ಎಳನೀರಿಗೆ ಬೇಡಿಕೆ ಜಾಸ್ತಿ. ದಿನದಿಂದ ದಿನಕ್ಕೆ ಬಿಸಿಲ ತಾಪಮಾನ ಹೆಚ್ಚಾಗುತ್ತಿದ್ದು ಧಗೆ ತಣಿಸಲು ಜನರು ತಂಪು ಪಾನೀಯಗಳಿಗಿಂತಲೂ ಎಳನೀರಿಗೆ ಮೊರೆ ಹೋಗುತ್ತಾರೆ. ಸುಲಭವಾಗಿ ಸಿಗುವ ಸೀಯಾಳಕ್ಕೆ ಸದ್ಯದ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆಯಿದೆ.

ತೆಂಗಿನ ಮರದೆತ್ತರಕ್ಕೇರಿದ ಬೆಲೆ:

ಸುಡು ಬಿಸಿಲಿನಂತೆ ಎಳೆನೀರಿನ ಬೆಲೆಯೂ ಗಗನಕ್ಕೇರುತ್ತಿದೆ. 20- ‐25 ರೂ. ಇದ್ದ ಸೀಯಾಳಕ್ಕೀಗ 30 ‐-40ರೂ. ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಪೇಟೆ ಪಟ್ಟಣಗಳಲ್ಲಿ ರಸ್ತೆ ಬದಿಯಲ್ಲಿ ಎಳೆನೀರನ್ನು ರಾಶಿ ಹಾಕಿ ಮಾರಾಟ ಮಾಡುವವರ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದೆ. ಮಾತ್ರವಲ್ಲದೆ ವ್ಯಾಪಾರವೂ ಭರ್ಜರಿಯಾಗಿ ನಡೆಯುತ್ತಿದೆ. ಒಂದೆಡೆ ಬೆಲೆ ಏರಿಕೆಯಿಂದ ರೈತರಿಗೆ ಲಾಭವಾಗಿದೆ.

ಕೆಲವು ಕಡೆಗಳಲ್ಲಿ ಕೃಷಿಕರು ನೇರವಾಗಿ ಮಾರುಕಟ್ಟೆಗೆ ಸೀಯಾಳ ತಂದು ಅಂಗಡಿಗಳಿಗೆ ಮಾರಾಟ ಮಾಡಿದರೆ ಇನ್ನು ಕೆಲವೆಡೆಗಳಲ್ಲಿ ತಾವೇ ರಸ್ತೆ ಬದಿಯಲ್ಲಿ ತೆರೆದ ವಾಹನದಲ್ಲೋ, ರಾಶಿ ಹಾಕಿಯೋ ಮಾರಾಟ ಮಾಡುವುದನ್ನು ಕಾಣಬಹುದು. ಆದರೆ ಬೆಲೆಯಲ್ಲಿ ವ್ಯತ್ಯಾಸ ಕಂಡುಬರುವುದು ವಿರಳ.

ಕೆಲವೊಮ್ಮೆ ಮಾರಾಟಗಾರರು ನೇರವಾಗಿ ರೈತರ ತೋಟಗಳಿಗೆ ಹೋಗಿ ಸೀಯಾಳ ಖರೀದಿ ಮಾಡುತ್ತಾರೆ. ಎಳೆನೀರು ಮರದಿಂದ ಇಳಿಸುವ ಕೆಲಸದಾಳುಗಳ ಕೊರತೆಯಿಂದ ಇದರ ಪೂರೈಕೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ ಎನ್ನುವ ಮಾತು ವ್ಯಾಪಾರಿಗಳಿಂದ ಕೇಳಿಬರುತ್ತಿದೆ. ಕರ್ನಾಟಕದಿಂದಲೂ ಹೆಚ್ಚು ಪ್ರಮಾಣದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಗೆ ಎಳನೀರು ಪೂರೈಕೆಯಾಗುತ್ತಿದೆ.

ಸೀಯಾಳ ಜ್ಯೂಸ್‌:

ಸೀಯಾಳದಿಂದ ತಯಾರಿಸಿದ ಪಾನೀಯಕ್ಕೆ ಅತ್ಯಂತ ಬೇಡಿಕೆಯಿದ್ದು ಅಲ್ಲಲ್ಲಿ ಎಳನೀರು ಜ್ಯೂಸ್‌ ಸ್ಟಾಲ್‌ಗ‌ಳು ತಲೆಯಿತ್ತಿವೆ. ಯಾವುದೇ ರೀತಿಯ ಬಣ್ಣ ಮುಂತಾದ ರಾಸಾಯನಿಕಗಳಂತಹ ಕಲಬೆರಕೆಯಾಗಲಿ ಇಲ್ಲದ ಎಳನೀರು ಜ್ಯೂಸ್‌ ಅತ್ಯಂತ ರುಚಿಕರ ಹಾಗೂ ಆರೋಗ್ಯದಾಯಕ ಪಾನೀಯ.

ಎಳನೀರು ಐಸ್‌ಕ್ರೀಮ್‌:

ಮಾರುಕಟ್ಟೆಯಲ್ಲಿ ಎಳನೀರು ಐಸ್‌ಕ್ರೀಮ್‌ ಕೂಡಾ ತನ್ನ ಬೇಡಿಕೆಯನ್ನು ಉಳಿಸಿಕೊಂಡಿದೆ. ಅತ್ಯಂತ ಹೆಚ್ಚು ಬೇಡಿಕೆಯಿರುವ ಫ್ಲೆàವರ್‌ಗಳಲ್ಲಿ ಟೆಂಡರ್‌ ಕೋಕೊನಟ್‌ ಐಸ್‌ಕ್ರೀಂ ಕೂಡಾ ಸೇರಿದೆ.

ಎಲ್ಲಾ ಕಾರ್ಯಕ್ಕೂ ಸೀಯಾಳ ಅಗತ್ಯ

ಯಾವುದೇ ಶುಭ ಸಮಾರಂಭವಾಗಲಿ ಅಥವಾ ಇನ್ನಿತರ ಉತ್ಸವ, ಆಚರಣೆಗಳಾಗಲಿ ಎಳನೀರು ಬೇಕೇ ಬೇಕು. ದೇವಸ್ಥಾನ, ದೆ„ವಸ್ಥಾನ, ಮದುವೆ ಹೀಗೆ ಸೀಯಾಳವಿಲ್ಲದೆ ಯಾವುದೇ ಕಾರ್ಯ ನಡೆಯುವುದಿಲ್ಲ. ಪವಿತ್ರವಾದ ಕಲ್ಪವೃಕ್ಷದ ಫಲಕ್ಕಿರುವ ಮಹತ್ವ ಅಪಾರವಾದುದು.

ದರ ಏರಿಕೆಯಿಂದ ಎಳನೀರು ಪೂರೈಕೆಯಲ್ಲಿ ಸಣ್ಣ ವ್ಯತ್ಯಯ ಉಂಟಾಗಿದೆ. ಆದರೆ ಭಿಸಿಲಿನ ಧಗೆಯಿಂದಾಗಿ ಬೇಡಿಕೆಯೂ ಹೆಚ್ಚಾಗಿದೆ. ದಿನವೊಂದಕ್ಕೆ ಕಡಿಮೆಯೆಂದರೂ 200 ಸಿಯಾಳ ಮಾರಾಟವಾಗುತ್ತದೆ ಎನ್ನುತ್ತಾರೆ ವ್ಯಾಪಾರಿಗಳು.

 *ವಿದ್ಯಾಗಣೇಶ್‌ ಆಣಂಗೂರು

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.