ದಿನದಲ್ಲಿ ಎರಡು ಬಾರಿ ಮಾಯವಾಗುವ ಶಿವಾಲಯ! ಏನಿದರ ವಿಶೇಷತೆ?


Team Udayavani, Oct 15, 2021, 3:08 PM IST

10

ಇದು ಶಿವನ ಮಹಿಮೆಯೋ.. ಸಾಗರದ ಮಾಯೆಯೋ.. ಇದು ವಿಸ್ಮಯದ ತಾಣ.. ಭಕ್ತಿಯ ಕೇಂದ್ರ.. ಇಲ್ಲಿನ ಸ್ಥಳಮಹಿಮೆಗೆ ಪರವಶವಾಗದವರಿಲ್ಲ.. ಇಲ್ಲಿನ ಶಿವಲೀಲೆಗೆ ಮನಸೋಲದೇ ಹೋದವರಿಲ್ಲ.. ಇದು ಪರಶಿವನ ಭಕ್ತಿಯ ಜೊತೆ ಪ್ರಕೃತಿಯ ಕೌತುಕವೂ ಸೇರಿರುವ ಅಪರೂಪದಲ್ಲಿ ಅಪರೂಪವಾಗಿರುವ  ದೇವಾಲಯ.

ಇದುವೇ ಸ್ತಂಭೇಶ್ವರ ದೇಗುಲ. ಇಂದಿಗೂ ಈ ದೇವಾಲಯ ದಿನದಲ್ಲಿ ಎರಡು ಬಾರಿ ಮಾಯವಾಗುತ್ತದೆ. ನಿಮ್ಮ ಕಣ್ಣಿಗೆ ಈ ದೇಗುಲ ಕಾಣಿಸುವುದೇ ಇಲ್ಲ. ಮಾಯವಾಗಿ ಕೆಲ ಹೊತ್ತಿನ ಬಳಿಕ ಮತ್ತೆ ದೇಗುಲ ಪ್ರತ್ಯಕ್ಷವಾಗುತ್ತದೆ. ಅಚ್ಚರಿಯಾದರೂ ಇದು ಸತ್ಯ.

ಗುಜರಾತ್ ರಾಜ್ಯದ ವಡೋದರದಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ ಬರೂಚ್ ಜಿಲ್ಲೆಯ ಒಂದು ಸಣ್ಣ ಗ್ರಾಮ ಕವಿ ಕಾಂಬೋಯಿಯಲ್ಲಿರುವ ಈ ಶಿವಾಲಯ ಎಲ್ಲಾ ದೇವಾಲಯಗಳಂತಲ್ಲ. ಈ ಸ್ತಂಭೇಶ್ವರ ನೆಲೆಯಾಗಿರುವುದು ಸಮುದ್ರದ ತಟದಲ್ಲಿ. ಇಲ್ಲಿಗೆ ಭಕ್ತರು ಯಾವ ಸಮಯದಲ್ಲಿ ಬೇಕಾದರೂ ಹೋಗಬಹುದು. ತಮ್ಮ ಪ್ರೀತಿಯ ಶಿವನನ್ನು ಆರಾಧಿಸಬಹುದು. ಆದರೆ, ನೋಡ ನೋಡುತ್ತಿದ್ದಂತೆ ಈ ದೇಗುಲ ದಿಢೀರ್ ಮಾಯವಾಗುತ್ತದೆ. ಅದು ದಿನಕ್ಕೆ ಎರಡು ಬಾರಿ ಈ ದೇವಾಲಯದ ಅರ್ಧಭಾಗ ಕಾಣಿಸುವುದೇ ಇಲ್ಲ. ಹಾಗೆಂದು ದಿನವಿಡೀ ಈ ದೇಗುಲ ಕಣ್ಮರೆಯಾಗುವುದಿಲ್ಲ. ಮಾಯವಾದ ಕೆಲಹೊತ್ತಲ್ಲೇ ಮತ್ತೆ ಭಕ್ತರಿಗೆ ದರ್ಶನ ಕೊಡಲು ಯಥಾಸ್ಥಿತಿಗೆ ಬರುತ್ತದೆ.

ಸಮುದ್ರ ತಟದಲ್ಲಿರುವ ಈ ದೇವಾಲಯ ದಿನಕ್ಕೆರಡು ಬಾರಿ ಸಮುದ್ರದ ನೀರಿನಲ್ಲಿ ಮುಳುಗುತ್ತದೆ. ಸಮುದ್ರರಾಜನೇ ಬಂದು ಶಿವನ ಅಭಿಷೇಕ ಮಾಡುತ್ತಾನೆ. ಹೀಗಾಗಿಯೇ ಸಮುದ್ರದ ನೀರಿನಲ್ಲಿ ಶಿವಲಿಂಗ ಮುಳುಗುತ್ತದೆ. ಇಲ್ಲಿ ಸಮುದ್ರದ ಅಲೆಗಳಲ್ಲಿ ನಡೆಯುವ ವಿಪರೀತ ಉಬ್ಬರವೇ ದೇಗುಲ ಮುಳುಗಲು ಕಾರಣ. ಪ್ರತಿದಿನ ಬೆಳಗ್ಗೆ ಮತ್ತು ಸಂಜೆಯ ಸಮಯದಲ್ಲಿ ಶಿವದೇವಾಲಯ ಮುಳುಗುತ್ತದೆ. ಪ್ರಕೃತಿಯ ಈ ಸೋಜಿಗವನ್ನು ಅದೆಷ್ಟೋ ಭಕ್ತರು ಇಂದಿಗೂ ಕಣ್ತುಂಬಿಕೊಳ್ಳುತ್ತಿದ್ದಾರೆ. ಶಿವಲಿಂಗದ ಅಭಿಷೇಕ ಸ್ವತಃ ಸಮುದ್ರದೇವತೆಯಿಂದಲೇ ನೆರವೇರುತ್ತದೆ ಎನ್ನುವುದು ಭಕ್ತರ ನಂಬಿಕೆ.

ದೇಗುಲದ ಹಿನ್ನೆಲೆ

200 ವರ್ಷಗಳ ಹಿಂದೆ ಉತ್ಖನನ  ನಡೆಸಿದ್ದಾಗ ಈ ದೇವಾಸ್ಥಾನ ಪತ್ತೆಯಾಗಿತ್ತು. ಇನ್ನು ಸ್ಕಂದ ಪುರಾಣದಲ್ಲಿ ಈ ದೇಗುಲದ ಬಗ್ಗೆ ಒಂದು ಕಥೆಯೂ ಬರುತ್ತದೆ. ತರಾಕಾಸುರ ಎನ್ನುವ ಅಸುರ ಶಿವನ ಕುರಿತು ತಪಸ್ಸು ಮಾಡುತ್ತಿದ್ದ. ಈತನ ತಪಸ್ಸಿಗೆ ಒಲಿದ ಈಶ್ವರ ವರ ಕೇಳು ಎಂದು ಹೇಳಿದಾಗ, ತರಾಕಾಸುರ ನನ್ನನ್ನು ಯಾರೂ ಕೊಲ್ಲಬಾರದು ಎಂದು ವರ ಕೇಳುತ್ತಾನೆ.

ಈ ವರ ನೀಡಲು ಈಶ್ವರ ನಿರಾಕರಿಸಿದಾಗ, ಶಿವಪುತ್ರರು ಬಿಟ್ಟು ಉಳಿದವರು ಯಾರೂ ಕೂಡಾ ನನ್ನ ಕೊಲ್ಲಬಾರದು ಎಂದು ವರ ಕೇಳುತ್ತಾನೆ. ಆಗ ಈಶ್ವರ ಕೂಡಾ ವರ ದಯಪಾಲಿಸುತ್ತಾನೆ. ತದನಂತರ ತರಾಕಾಸುರನ ಹಿಂಸೆ ಮಿತಿಮೀರತೊಡಗಿದಾಗ ಕೊನೆಗೂ ಕಾರ್ತಿಕೇಯ ಅಸುರನ ವಧೆ ಮಾಡುತ್ತಾನೆ. ಆದರೆ ಶಿವಭಕ್ತನನ್ನು ಕೊಂದಿದ್ದಕ್ಕೆ ಕಾರ್ತಿಕೇಯನ ಮನಸ್ಸು ನೊಂದುಕೊಳ್ಳುತ್ತದೆ. ಆಗ ತನ್ನಲ್ಲಾದ ತಳಮಳವನ್ನು ಕಾರ್ತಿಕೇಯ ಭಗವಾನ್ ವಿಷ್ಣುವಿನ ಬಳಿ ಹೇಳಿಕೊಳ್ಳುತ್ತಾನೆ. ಆಗ ವಿಷ್ಣು, ತಂಡಕಾಸುರನನ್ನು ಕೊಂದ ಸ್ಥಳದಲ್ಲಿ ಶಿವದೇಗುಲ ನಿರ್ಮಿಸು ಎಂದು ಸೂಚಿಸುತ್ತಾನೆ. ಹೀಗಾಗಿಯೇ ಕಾರ್ತಿಕೇಯ ಸಿಂಧೂ ನದಿ ಹಾಗೂ ಸಾಗರದ ಸಂಗಮ ಸ್ಥಳದಲ್ಲಿ ಈ ದೇಗುಲ ಕಟ್ಟುತ್ತಾನೆ ಎನ್ನುವ ಪ್ರತೀತಿ ಇದೆ.

ಪ್ರತಿದಿನ ದೇವಾಲಯ ಮುಳುಗುವ ಸಮಯವನ್ನು ಹೊರತು ಪಡಿಸಿ ಬೇರೆ ಸಮಯದಲ್ಲಿ ಭಕ್ತರು ಈ ದೇವಾಲಯಕ್ಕೆ ಬರುತ್ತಾರೆ. ಶಿವನನ್ನು ಆರಾಧಿಸುತ್ತಾರೆ. ಸಮುದ್ರದ ಅಲೆಗಳು ಕಡಿಮೆಯಿದ್ದಾಗ ಶ್ವೇತವರ್ಣದಲ್ಲಿ ಗೋಚರಿಸುವ ಶಿವಲಿಂಗದ ದರ್ಶನ ಪಡೆಯುವುದೇ ಭಕ್ತರ ಭಾಗ್ಯ.

ಇತ್ತೀಚೆಗೆ ಈ ದೇವಾಲಯಕ್ಕೆ ಹೊಸ ರೂಪವನ್ನು ನೀಡಲಾಗಿದೆ. ಸಮುದ್ರದ ಉಬ್ಬರ ಇಳಿತದ ಸಮಯ ನೋಡಿ ಇಲ್ಲಿ ದಿನನಿತ್ಯ ಪೂಜೆ ನಿಗದಿಯಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈ ದೇಗುಲಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಗುಜರಾತ್ ಪ್ರವಾಸ ಕೈಗೊಳ್ಳುವವರು ಈ ವಿಸ್ಮಯಕಾರಿ ದೇಗುಲವನ್ನು ನೋಡಲು ಬಿಡುವು ಮಾಡಿಕೊಂಡು ಹೋಗಿ, ಶಿವನ ದರ್ಶನ ಪಡೆಯಬಹುದು.

ಶ್ವೇತಾ ಮುಂಡ್ರುಪ್ಪಾಡಿ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.