ಸರಳ ವಿಧಾನ… ನೀವೇ ಮನೆಯಲ್ಲೇ ತಯಾರಿಸಿ; ಸ್ಪೆಷಲ್ ಎಗ್ ಕರ್ರಿ ರೆಸಿಪಿ

ಮಕ್ಕಳ ಎಲುಬು, ಮೆದುಳು, ಕಣ್ಣಿನ ದೃಷ್ಟಿಶಕ್ತಿ ಮೊದಲಾದವುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ

Team Udayavani, Nov 5, 2020, 6:20 PM IST

egg-curry-750

ಮೊಟ್ಟೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ದಿನಕ್ಕೊಂದು ಮೊಟ್ಟೆ ತಿಂದರೆ ಬಾಯಿ ರುಚಿಯೂ ತೀರಿತು,ದೇಹಕ್ಕೆ ಶಕ್ತಿ ಪೂರಕೈಯೂ ಆಯಿತು. ಮೊಟ್ಟೆಯಲ್ಲಿ ಏನೆಲ್ಲಾ ಇದೆ ಎನ್ನುವುದಕ್ಕಿಂತ, ಏನಿಲ್ಲ ಎಂದು ಕೇಳುವುದು ಹೆಚ್ಚು ಸರಿ. ಮಿಟಮಿನ್‌ ಎ, ಬಿ, ಡಿ, ಇ ಗಳ ಜತೆಗೆ ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಷಿಯಂ ಉತ್ತಮ ಮಟ್ಟದ ಪ್ರೊಟೀನ್‌ ಅಂಶಗಳನ್ನು ಮತ್ತಿತರ ಹಲವು ಆರೋಗ್ಯ ಸಂಬಂಧ ಅಗತ್ಯಗಳನ್ನು ಸುಲಭವಾಗಿ ಪೂರೈಸುತ್ತದೆ. ಮಕ್ಕಳ ಎಲುಬು, ಮೆದುಳು, ಕಣ್ಣಿನ ದೃಷ್ಟಿಶಕ್ತಿ ಮೊದಲಾದವುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಮಾತ್ರವಲ್ಲ, ಏಕಾಗ್ರತೆ, ಬುದ್ಧಿಮತ್ತೆ ಬೆಳವಣೆಗೂ ಸಹಾಯ ಮಾಡುತ್ತದೆ.

ಮೊಟ್ಟೆಯಿಂದ ಏನು ತಯಾರಿಸಿದರೂ ರುಚಿಯೇ ಅದರಲ್ಲೂ ಎಗ್‌ ಕರ್ರಿ ಎಲ್ಲರ ಬಾಯಿಯಲ್ಲಿ ನೀರೂರಿಸುತ್ತದೆ. ಹಾಗಾದರೆ ಇನ್ನೇಕೆ ತಡ ಸ್ವಾಧಿಷ್ಟಕರವಾಗಿ ಸ್ಪೆಷಲ್‌ಎಗ್‌ ಕರ್ರಿ ಮಾಡಿ ಸ್ವಾಧಿಷ್ಟವಾಗಿ ಸವಿಯಿರಿ…

ಸ್ಪೆಷಲ್‌ ಎಗ್‌ ಕರ್ರಿ;ಬೇಕಾಗುವ ಪದಾರ್ಥಗಳು
ಮೊಟ್ಟೆ 4, ಈರುಳ್ಳಿ 2ರಿಂದ 3, ಶುಂಠಿ ಸ್ವಲ್ಪ, ಕೊತ್ತಂಬರಿ ಸೊಪ್ಪು ಸ್ವಲ್ಪ, ಧನಿಯಾ ಪುಡಿ ಅರ್ಧಚಮಚ, ಟೊಮೆಟೋ 3, ಅಚ್ಚ ಖಾರದ ಪುಡಿ 1 ಚಮಚ, ಬೆಳ್ಳುಳ್ಳಿ 8 ಎಸಳು, ಜೀರಿಗೆ 1 ಚಮಚ, ಹಸಿ ಮೆಣಸಿನ ಕಾಯಿ 2ರಿಂದ 4, ಗರಂ ಮಸಾಲೆ ಸ್ವಲ್ಪ, ರುಚಿಗೆ ತಕ್ಕಷ್ಟು ಉಪ್ಪು.

ಮಾಡುವ ವಿಧಾನ
ಮೊದಲು ಮೊಟ್ಟೆ ಬೇಯಿಸಿಕೊಂಡು ತಣ್ಣಗಾದ ನಂತರ ಮೇಲಿನ ಸಿಪ್ಪೆ ತೆಗೆದು ನಾಲ್ಕು ಭಾಗ ಮಾಡಿದಂತೆ ಬುಡ ಬಿಚ್ಚಿಕೊಳ್ಳದಂತೆ ಕಟ್‌ ಮಾಡಿ ಇಟ್ಟುಕೊಳ್ಳಿ. ಟೊಮೆಟೋ, ಈರುಳ್ಳಿ ಸಣ್ಣಗೆ ಕಟ್‌ ಮಾಡಿ. ಕೊತ್ತಂಬರಿ ಸೊಪ್ಪು ಸಹ ಸಣ್ಣಗೆ ಕಟ್‌ ಮಾಡಿಕೊಳ್ಳಿ. ಶುಂಠಿ-ಬೆಳ್ಳುಳ್ಳಿ ನುಣ್ಣಗೆ ಅರೆದು ಪೇಸ್ಟ್‌ ಮಾಡಿಕೊಳ್ಳಿ. ಒಂದು ಬಾಣಲೆಯನ್ನು ಒಲೆಯ ಮೇಲೆ ಇಟ್ಟು ಎರಡು ಚಮಚ ಎಣ್ಣೆ ಹಾಕಿ ಬಿಸಿಯಾಗಿರುವ ಎಣ್ಣೆಗೆ ಜೀರಿಗೆ ಹಾಕಿ ಒಗ್ಗರಣೆ ಮಾಡಿ.

ಈರುಳ್ಳಿ ಚೂರುಗಳನ್ನು ಹಾಕಿ ಹಸಿಮೆಣಸಿನಕಾಯಿ ಸಹ ಹಾಕಿ ಕೆಂಪಗೆ ಹುರಿದುಕೊಳ್ಳಿ. ಶುಂಠಿ, ಬೆಳ್ಳುಳ್ಳಿ ಪೇಸ್ಟ್‌ ಹಾಕಿ ಹಸಿ ವಾಸನೆ ಹೋಗುವ ತನಕ ಫ್ರೈ ಮಾಡಿ. ಅರಿಶಿನ ಹಾಕಿ ಅಚ್ಚ ಖಾರದ ಪುಡಿ , ಧನಿಯಾ ಪುಡಿ ಹಾಕಿ ಚೆನ್ನಾಗಿ ಕಲೆಸಿ. ಉಪ್ಪು ಹಾಕಿ ಕಲೆಸಿ. ಮಸಾಲೆ ಬೇಯಿಸಲು ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಫ್ರೈ ಮಾಡಿದ ನಂತರ ಮಿಶ್ರಣ ಕೆಳಗೆ ಇಳಿಸಿ ನಾಲ್ಕು ಭಾಗ ಮಾಡಿರುವ ಮೊಟ್ಟೆಯ ನಡುವೆ ಮಸಾಲೆ ತುಂಬಿಸಿ.

ಇನ್ನೊಂದು ಬಾಣಲೆ ಒಲೆಯ ಮೇಲೆ ಇಟ್ಟು ಸ್ವಲ್ಪ ಎಣ್ಣೆ ಹಾಕಿ. ಬಿಸಿಯಾದ ಎಣ್ಣೆಗೆ ಮಸಾಲೆ ತುಂಬಿರುವ ಮೊಟ್ಟೆ ಇಟ್ಟು ಎರಡು ಕಡೆ ಫ್ರೈ ಮಾಡಿ ಉಳಿದ ಮಸಾಲೆಗೆ ನೀರು ಸೇರಿಸಿ ಮೊಟ್ಟೆಯ ಮೇಲೆ ಹಾಕಿ. ನಂತರ ಗರಂ ಮಸಾಲೆ ಯನ್ನು ಹಾಕಿ , ಸಣ್ಣಗೆ ಹೆಚ್ಚಿರುವ ಕೊತ್ತಂಬರಿ ಸೊಪ್ಪು ಹಾಕಿರಿ. ಎರಡು ನಿಮಿಷಗಳ ನಂತರ ಕೆಳಗೆ ಇಳಿಸಿ. ರುಚಿಕರವಾದ ಸ್ವಾಧಿಷ್ಟಕರ ಸ್ಪೆಷಲ್‌ ಎಗ್‌ ಕರ್ರಿ ಸವಿಯಲು ರೆಡಿ. ಅನ್ನ ಹಾಗೂ ಚಪಾತಿ ಜೊತೆ ಈ ಕರ್ರಿ ತುಂಬಾನೇ ರುಚಿಯಾಗಿರುತ್ತದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

ಆಹಾ! ಈ ಕಾಶಿ ಹಲ್ವಾ ಏನ್‌ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….

13

ಗಲ್ಫ್ ಮರುಭೂಮಿಯಲ್ಲಿ 2 ವರ್ಷ ನರಕಯಾತನೆ: ʼಆಡುಜೀವಿತಂʼ ಸಿನಿಮಾದ ನಿಜವಾದ ಹೀರೋ ಇವರೇ…

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಡ್‌ವೈಡ್‌ ?

ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್‌ ಇಂಡಿಯಾ ವರ್ಲ್ಡ್‌ವೈಡ್‌ ?

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.