ಇವಳು ಬದುಕು ಗೆದ್ದ ಸಾಧಕಿ, ನಮ್ಮೆಗೆಲ್ಲಾ ಛಲದ ಪಾಠ ಹೇಳುವ ಬೋಧಕಿ…

ಇದು ಲತೀಶಾ ಅನ್ಸಾರಿ ಎಂಬ ಕುಬ್ಜೆ ಸಾಧನೆಯ ಶಿಖರವನ್ನೇರಿದ ಕಥೆ!

ಸುಹಾನ್ ಶೇಕ್, Oct 30, 2019, 6:04 PM IST

web-focus-tdy-1

ಸೋಲುಗಳು ಬರುವುದು ಸಾವಿನ ಆಯ್ಕೆಗಾಗಿ ಅಲ್ಲ, ಸಾಧಕನ ಹುಟ್ಟಿಗಾಗಿ.! ಎಂಬ ಮಾತಿಗೆ ಪ್ರತೀಕವಾಗಿ ಈ ಜಗತ್ತಿನಲ್ಲಿ ಕಷ್ಟಕೋಟಲೆಯ ಕೂಪದಿಂದ ಎದ್ದು ನಿಂತು ಸಾಧನೆಯ ಎತ್ತರಕ್ಕೇರಿದ ವ್ಯಕ್ತಿತ್ವಗಳ ಯಶೋಗಾಥೆಯನ್ನು ಕೇಳುತ್ತಾ ಬಂದಿದ್ದೇವೆ. ದಿನಂಪ್ರತಿ ಹುಟ್ಟವ ಇಂಥ ವ್ಯಕ್ತಿತ್ವಗಳಿಗೆ ಪ್ರೋತ್ಸಾಹವೊಂದಿದ್ದರೆ ಸಾಧನೆಯ ವೇದಿಕೆ ಹತ್ತಲು ಕಾಲುಗಳು ಎಡವುದಿಲ್ಲ.

ಕೇರಳದಲ್ಲಿ ಜನಿಸಿದ ಲತೀಶಾ ಅನ್ಸಾರಿ, ಹುಟ್ಟುವಾಗ ಅಮ್ಮನ ಹಾಲಿಗಾಗಿ, ಅಮ್ಮನ ಅಪ್ಪುಗೆಗಾಗಿ ಅಳಲಿಲ್ಲ, ಬದಲಾಗಿ ನೋವಿನಿಂದ ಅತ್ತು ಅತ್ತು ಸುಸ್ತಾಗಿ ಹೋದಳು. ಆಗ ತಾನೆ ಹುಟ್ಟಿದ ಮಗು ಚೀತ್ಕಾರ ಹಾಕುವಾಗ ತಾಯಿಯ ಕರುಳು ಅದೆಷ್ಟು ನೊಂದಿರಬಹುದು. ಪುಟ್ಟ ಕಂದಮ್ಮನ ಈ ನರಳು ವೈದ್ಯಕೀಯ ಲೋಕಕ್ಕೊಂದು ಸವಾಲಾಯಿತು. ತಕ್ಷಣ ಅಳುವಿನ ಹಿಂದಿನ ಕಾರಣವನ್ನು ಪತ್ತೆ ಹಚ್ಚಿದ ವೈದ್ಯರು ಮಗುವಿನ ತಂದೆ- ತಾಯಿಗೆ ಅಪರೂಪದ ನೂರರಲ್ಲಿ ಒಬ್ಬರಿಗೆ ಬರುವ ಆಸ್ಟಿಯೋಜೆನೆಸಿಸ್ ಇಂಪರ್ಫೆಕ್ಟಾ  (ಇದನ್ನು ಸುಲಭವಾಗಿ ಮೂಳೆ ಕಾಯಿಲೆ ಎಂದೂ ಕರೆಯುತ್ತಾರೆ) ರೋಗದಿಂದ ತತ್ತರಿಸುತ್ತಿದ್ದಾಳೆ ಎನ್ನುವ ಮಾತನ್ನು ಹೇಳುತ್ತಾರೆ.

ಸಾಧಾರಣ ಮಧ್ಯಮ ಕುಟುಂಬದ ಹಿನ್ನಲೆಯವರಾಗಿದ್ದ ಲತೀಶಾ ಅನ್ಸಾರಿಯ ತಂದೆ ತಾಯಿಗೆ ವೈದ್ಯರ ಈ ಮಾತು ಆಘಾತವನ್ನುಂಟು ಮಾಡುತ್ತದೆ. ಆದರೆ ಅದನ್ನು ತನ್ನ ಮಗಳ ಮುಂದೆ ತೋರಿಸಿಕೊಳ್ಳದೆ ಮಗಳಿಗೆ ಯಾವ ತೊಂದರೆಯೂ ಉಂಟಾಗದಂತೆಸಮಾನ ಪ್ರೀತಿಯಲ್ಲಿ ಬೆಳೆಸುತ್ತಾರೆ. ಅರೈಕೆ ಮಾಡುತ್ತಾರೆ, ಸಲಹುತ್ತಾರೆ.

 ನೋವು, ಅವಮಾನ ಹಾಗೂ ಸವಾಲು : ಲತೀಶಾರಿಗೆ ಬಾಧಿತವಾದ ಕಾಯಿಲೆ ಸಾಮಾನ್ಯವಾದುದಾಗಿರಲಿಲ್ಲ. ಪ್ರತಿ ಕ್ಷಣವೂ ನೋವಿನಲ್ಲಿ ಚೀರಾಡುವಂಥದ್ದು. ಮೂಳೆ ಕಾಯಿಲೆಯಿಂದ ಲತೀಶಾಳ ದೇಹ ಕುಬ್ಜವಾಗಿ ಬೆಳೆಯುತ್ತದೆ. ವಯಸ್ಸು ಮೀರಿದರೂ ದೇಹದ ಅಂಗಾಂಗಗಳು ಬೆಳೆಯದೇ ಹಾಗೆಯೇ ಉಳಿಯುತ್ತದೆ. ತಂದೆ-ತಾಯಿ ಮಗಳಿಗೆ ಉತ್ತಮ ಶಿಕ್ಷಣ ಕೂಡಿಸುವ ಇರಾದೆಯಿಂದ ಸ್ಥಳೀಯ ಶಾಲೆಯೊಂದಕ್ಕೆ ಹೋಗುತ್ತಾರೆ. ಆದರೆ ಅಲ್ಲಿ ಲತೀಶಾಳ ಪರಿಸ್ಥಿತಿ ನೋಡಿ ದಾಖಲಿಸಲು  ನಿರಾಕರಿಸುತ್ತಾರೆ.  ಪೋಷಕರು ಅಲ್ಲಿಂದ ಮಗಳನ್ನು ಬೇರೆಯೊಂದು ಶಾಲೆಯಲ್ಲಿ ದಾಖಲಾತಿ ಮಾಡುತ್ತಾರೆ. ಲತೀಶಾ ತನ್ನ ವೈಫಲ್ಯ ಹಾಗೂ ನೂನ್ಯತೆಗಳ ಬಗ್ಗೆ ಚಿಂತಿಸದೇ ಓದು-ಬರಹವನ್ನು ಕಲಿಯುತ್ತಾಳೆ.

ಗಾಯದ ಮೇಲೆ ಬರೆ ಎಳೆದ ಉಸಿರಾಟದ ತೊಂದರೆ : ಲತೀಶಾಳ ಮೂಳೆ ಸಂಬಂಧಿತ ಕಾಯಿಲೆ ಎಷ್ಟು ಸೂಕ್ಷ್ಮ ಅಂದರೆ ನಮ್ಮ ನಿಮ್ಮ ಹಾಗೆ ಹಾಯಾಗಿ ಬೆಡ್ ಮೇಲೆ ಅಥವಾ ಸೋಫಾದ ಮೇಲೆ ಕುಳಿತುಕೊಳ್ಳಲೂ ಸಹ ನೂರು ಸಲ ಯೋಚಿಸಬೇಕಾದ ಪರಿಸ್ಥಿತಿ. ಏಕಂದರೆ ಒಂದೇ ಒಂದು ಸಣ್ಣ ಹಸ್ತಲಾಘವ ಮಾಡಿದರೂ ಲತೀಶಾಳ ಮೂಳೆಗಳಿಗೆ ಘಾಸಿಯುಂಟಾಗುತ್ತದೆ.

ದಿನೇ ದಿನೇ ಈ ಸಮಸ್ಯೆ ಹೆಚ್ಚಾಗುತ್ತ ಹೋದಂತೆ ಅವರಿಗೆ ಶ್ವಾಸಕೋಶದ ಅಧಿಕ ರಕ್ತದೊತ್ತಡವೂ ಉಂಟಾಗುತ್ತದೆ ಇದರಿಂದ ಉಸಿರಾಟದ ತೊಂದರೆಯುಂಟಾಗುತ್ತದೆ. ಇದು ಹೆಚ್ಚಿಗೆ ಆಗುತ್ತಿದ್ದಂತೆ ದಿನಂಪ್ರತಿ ಉಸಿರಾಟದ ಸಹಾಯಕ್ಕೆ ಆಮ್ಲಜನಕದ ಸಿಲಿಂಡರ್ ಅನ್ನು ಉಪಯೋಗಿಸುವ ಅನಿವಾರ್ಯತೆ ಉಂಟಾಗುತ್ತದೆ. ಲತೀಶಾಳ ಪರಿಸ್ಥಿತಿ ಎಲ್ಲಿಗೆ ಬರುತ್ತದೆ ಅಂದರೆ, ಆಕ್ಸಿಜನ್ ಸಿಲಿಂಡರ್ ಇಲ್ಲದೆ ಅರ್ಧ ಗಂಟೆಕ್ಕಿಂತ ಹೆಚ್ಚು ಇರಲಾಗದ ಸಂದಿಗ್ಧ ಸ್ಥಿತಿಗೆ ತಲುಪುತ್ತಾಳೆ.

ಮುನ್ನುಗ್ಗುವ ಬಲ, ಸಾಧಿಸುವ ಛಲ : ಇಷ್ಟೆಲ್ಲಾ ಆದರೂ ಲತೀಶಾ ಕಲಿಯುವುದರಲ್ಲಿ ಹಿಂದೆ ಬೀಳಲ್ಲ.ಏನಾದರೂ ಆಗಲಿ ತಾನು ನೊಂದವರಿಗೆ ಪ್ರೇರಣೆಯಾಗಬೇಕೆನ್ನುವ ಹಟ ಗಟ್ಟಿಯಾಗುತ್ತದೆ. ಎದ್ದು‌ ನಡೆಯಲಾಗದೆ ವ್ಹೀಲ್ ಚೇರ್ ನಲ್ಲೇ ಕೂತು ದಿನದೂಡುವ ಸ್ಥಿತಿಯಲ್ಲೂ ತನ್ನ ಓದು ನಿಲ್ಲಿಸದೆ ಮುಂದೆ ಸಾಗುತ್ತಾಳೆ.  ಕಲಿಯುವುದರಲ್ಲಿ ಸದಾ ಮುಂದೆ, ಹಾಗೂ ಪ್ರತಿಭಾವಂತೆ ವಿದ್ಯಾರ್ಥಿಯಾಗುವ ಲತೀಶಾರಿಗೆ ಸಹಪಾಠಿಗಳು ಹಾಗೂ ಶಿಕ್ಷಕರು ಮಾನಸಿಕವಾಗಿ ಬೆಂಬಲ ನೀಡುತ್ತಾ ಹೋಗುತ್ತಾರೆ. ಹೈಸ್ಕೂಲ್ , ಕಾಲೇಜು ಕೊನೆಗೆ ಎಂ.ಕಾಮ್ ಪದವಿಯನ್ನು ಪೂರ್ತಿಗೊಳಿಸಿ ಅಂದುಕೊಂಡು‌ ಮುನ್ನುಗ್ಗಿದ್ದರೆ ಎಲ್ಲವೂ ಸಾಧ್ಯ ಅನ್ನುವ ಮಾತಿಗೆ ಲತೀಶಾ ತಾನೇ ಮುನ್ನುಡಿಯಾಗುತ್ತಾರೆ.

..ಎಸ್ ಅಧಿಕಾರಿ ಆಗುವ ಕನಸು :  ತನ್ನ ಎಂ.ಕಾಮ್ ಪದವಿಯ ಸಮಯದಲ್ಲೇ ತಾನು ಮುಂದೆ ಯುಪಿಎಸ್ಸಿ ಪರೀಕ್ಷೆ ಬರೆಯಬೇಕೆನ್ನುವ ಗುರಿಯನ್ನು ಇಟ್ಟುಕೊಳ್ಳುತ್ತಾರೆ. ಅದಕ್ಕಾಗಿ ದಿನ, ತಿಂಗಳು ಹೀಗೆ ಮೂರು ವರ್ಷ ‌ತಯಾರಿ ನಡೆಸಿಕೊಂಡು  ನಾಗರಿಕ ಸೇವೆಯಂತಹ ಕಠಿಣ ಪರೀಕ್ಷೆ ಬರೆಯಲು ಸಿದ್ದರಾಗುತ್ತಾರೆ. ತಾನು ವೀಲ್ ಚೇರ್ ನಲ್ಲಿದ್ದೇನೆ ತನಗೆ ಮೂಳೆ ಸಂಬಂಧಿತ ಕಾಯಿಲೆ ಇದೆ, ತಾನು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದೇನೆ, ಸರಿಯಾಗಿ ಎದ್ದು ಕೂರಲು ಆಗದಂತ ಪರಿಸ್ಥಿತಿಯಲ್ಲಿದ್ದೇನೆ ಎನ್ನುವ ಯಾವ ಅಡೆತಡೆಯ ಯೋಚನೆಯೂ ಲತೀಶಾರಿಗೆ ಕಾಡಲಿಲ್ಲ. ಕಾಡಿದ್ದು ತಾನು ಸಾಧಿಸಬೇಕು, ನನ್ನಂತೆ ಇರುವ ಇನ್ನೊಬ್ಬರಿಗೆ ಪ್ರೇರಣೆ ಆಗಬೇಕೆನ್ನುವ ಒಂದೇ ಗುರಿ.

ಆಮ್ಲಜನಕ ಸಿಲಿಂಡರ್ ನೊಂದಿಗೆ ಪರೀಕ್ಷೆ ಕೊಠಡಿ ಪ್ರವೇಶಿದಳು ! : ನಾಗರಿಕ ಸೇವಾ ಪರೀಕ್ಷೆ ಬರೆಯಲು ಕೇರಳದ ಕೊಟ್ಟಾಯಂನ ಪರೀಕ್ಷಾ ಕೇಂದ್ರಕ್ಕೆ ಹೋಗುವ ಲತೀಶಾ ಹಾಗೂ ಆಕೆಯ ಪೋಷಕರಿಗೆ ಪರೀಕ್ಷಾ ನಿಯಮಗಳನ್ನು ಕೇಳಿ ಒಮ್ಮೆ ನಿರಾಶೆ ಉಂಟಾಗುತ್ತದೆ. ಲತೀಶಾಳಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಅವಕಾಶವಿದ್ರೂ ಆಮ್ಲಜನಕ ಸಿಲಿಂಡರ್ ನೊಂದಿಗೆ ಪರೀಕ್ಷೆ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಗುವ ಬಗ್ಗೆ ಯಾವ ನಂಬಿಕೆಯೂ ಇರಲಿಲ್ಲ. ಆದರೆ ಇದನ್ನು ಮನಗಂಡ ಅಲ್ಲಿಯ ಪರೀಕ್ಷಾ ಅಧಿಕಾರಿ ಸುಧೀರ್ ಎನ್ನುವವರು ಲತೀಶಾಳಿಗೆ ಆಮ್ಲಜನಕ ಸಿಲಿಂಡರ್ ನೊಂದಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುತ್ತಾರೆ. ಇತ್ತೀಚೆಗಷ್ಟೇ ಆಮ್ಲಜನಕ ಸಿಲಿಂಡರ್ ನೊಂದಿಗೆ ಪರೀಕ್ಷೆ ಬರೆದ ಲತೀಶಾ ಅನ್ಸಾರಿ ಎನ್ನುವ ಸುದ್ದಿ ರಾಷ್ಟ್ರವ್ಯಾಪಿ ಹರಡುತ್ತದೆ. ನಾಗರಿಕ ಸೇವೆಯ ಮೊದಲ ಪ್ರಯತ್ನವನ್ನು  ಲತೀಶಾ ಆತ್ಮವಿಶ್ವಾಸದಿಂದ ಪೂರ್ತಿಗೊಳಿಸಿದ್ದಾರೆ.

ಸಾಧಕಿಯ ಜೊತೆ ಈಕೆ ಸಮಾಜ ಸೇವಕಿ : 25 ವರ್ಷದ  ಲತೀಶಾ ‘ಅಮೃತ ವರ್ಷಿನಿ’ ಎನ್ನುವ ಸ್ವಯಂ ಸೇವಾ ಸಂಘದ ಸಕ್ರಿಯ ಕಾರ್ಯಕರ್ತೆ. ಇಲ್ಲಿ ಆಕೆ ಸಮಾಜದಲ್ಲಿ ತನ್ನಂತೆ ಮೂಳೆ ರೋಗದಿಂದ ತತ್ತರಿಸುತ್ತಿರುವ ವ್ಯಕ್ತಿಗಳಿಗೆ ಭರವಸೆ ತುಂಬುವ ಸ್ಪೂರ್ತಿದಾಯಕಿ ಆಗಿ ಕಾರ್ಯ ನಿಭಾಯಿಸುತ್ತಿದ್ದಾಳೆ.

ಇಷ್ಟು ಮಾತ್ರವಲ್ಲ ಲತೀಶಾ ಗಾಜಿನ ಚಿತ್ರಗಳನ್ನು ಮಾಡುವ ಕಲಾವಿದೆ. ಇವಳ ಗಾಜಿನ ಚಿತ್ರಗಳಿಗೆ ಬೇಡಿಕೆಯ ಒಟ್ಟಿಗೆ ಸೆಳೆಯುವ ಗುಣವೂ ಇದೆ. ಇದರ ಜೊತೆಗೆ ಕೀಬೋರ್ಡ್ ನುಡಿಸುವ ಕಲೆಯೂ ಇವರಿಗೆ ಕರಗತವಾಗಿದೆ. ಹಲವಾರು ರಿಯಾಲಿಟಿ ಶೋನಲ್ಲಿ ಕೀರ್ಬೋಡ್ ನುಡಿಸುವ ಮೂಲಕ ಹಣ ಸಂಪಾದನೆಯನ್ನು ಮಾಡಿದ್ದಾರೆ. ಇಷ್ಟು ಮಾತ್ರವಲ್ಲದೆ ನಾನಾ ಕಡೆಗಳಿಗೆ ಹೋಗಿ ಸ್ಪೂರ್ತಿದಾಯಕ ಮಾತುಗಳನ್ನು ಆಡುತ್ತಾರೆ.

ಇದುವರೆಗೆ ಲತೀಶಾಳ ದೇಹದ ಮೂಳೆಗಳು ಸಾವಿರಕ್ಕೂ ಹೆಚ್ಚು ಬಾರಿ ಹಾನಿ ಆಗಿದೆ. ವೈದ್ಯರ ಪ್ರಕಾರ ಇಷ್ಟು ವರ್ಷ ಲತೀಶಾ ಬದುಕಿರೋದೇ ಆಶ್ಚರ್ಯವಂತೆ. ತನ್ನ ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಕಷ್ಟವಾಗುತ್ತಿದ್ದರೂ ಇದುವರೆಗೆ ಯಾರ ಬಳಿಯೂ ಕೈ ಚಾಚಿಲ್ಲ, ತಲೆ ತಗ್ಗಿಸಿಲ್ಲ. ತಂದೆ ತಾಯಿ ಪ್ರೀತಿಯ ಮುಂದೆ ಲತೀಶಾ ಆತ್ಮವಿಶ್ವಾಸದಿಂದಲೇ ಬದುಕನ್ನು ಮುನ್ನಡೆಸುತ್ತಿದ್ದಾಳೆ. ಮುಂದೆ ದೊಡ್ಡ ಸಾಧಕಿ ಹಾಗೂ ಸಮಾಜಕ್ಕೊಂದು ಮಾದರಿ ಆದರೆ ಅಚ್ಚರಿ ಏನಿಲ್ಲ..

 – ಸುಹಾನ್ ಶೇಕ್

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.