29 ವರ್ಷಗಳ ಬಳಿಕ ಕೈಗೂಡಿದ ಮೋದಿ ಶಪಥ!


Team Udayavani, Aug 6, 2020, 6:40 AM IST

29 ವರ್ಷಗಳ ಬಳಿಕ ಕೈಗೂಡಿದ ಮೋದಿ ಶಪಥ!

ಹೊಸದಿಲ್ಲಿ: ಭೂಮಿ ಪೂಜೆಗಾಗಿ ಅಯೋಧ್ಯೆಗೆ ಆಗಮಿಸಿರುವ ನರೇಂದ್ರ ಮೋದಿ, ಸುಮಾರು 29 ವರ್ಷಗಳ ಅನಂತರ ಆ ಊರಿಗೆ ಕಾಲಿಟ್ಟಿದ್ದಾರೆ.

1992ರಲ್ಲಿ ಬಿಜೆಪಿ ನಾಯಕ ಮುರಳಿ ಮನೋಹರ್‌ ಜೋಶಿಯವರ ನೇತೃತ್ವದಲ್ಲಿ ರಾಷ್ಟ್ರಾದ್ಯಂತ ಆಯೋಜಿಸಲಾಗಿದ್ದ ತಿರಂಗಾ ಯಾತ್ರಾ ಅಭಿಯಾನಕ್ಕೆ ನರೇಂದ್ರ ಮೋದಿ ರಾಷ್ಟ್ರೀಯ ಸಂಚಾಲಕರಾಗಿದ್ದರು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸುವಂತೆ ಆಗ್ರಹಿಸಿ ಆಯೋಜಿಸಲಾಗಿದ್ದ ಆ ತಿರಂಗಾ ಯಾತ್ರೆಯ ಅಂಗವಾಗಿ ಅಯೋಧ್ಯೆಯಲ್ಲಿ ನಡೆದಿದ್ದ ಬೃಹತ್‌ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಯೋಧ್ಯೆಗೆ ಆಗಮಿಸಿದ್ದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವವರಿಗೆ ತಾನು ಈ ನೆಲಕ್ಕೆ ಕಾಲಿಡುವುದಿಲ್ಲ ಎಂದು ಶಪಥ ಮಾಡಿದ್ದರು. ಆ ಶಪಥ ಈಗ ಈಡೇರಿದೆ. ವಿಶೇಷವೆಂದರೆ, ಅವರೇ ಖುದ್ದಾಗಿ ಆಗಮಿಸಿ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವಂಥ ಸುಯೋಗ ಒದಗಿದೆ.

ಮತ್ತೊಂದೆಡೆ, 1992ರಲ್ಲಿ ಅವರು ಯಾವ ಉದ್ದೇಶಕ್ಕಾಗಿ ಅಯೋಧ್ಯೆಗೆ ಕಾಲಿಟ್ಟಿದ್ದರೋ ಆ ಉದ್ದೇಶವೂ (ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು) ಅವರ ನೇತೃತ್ವದ ಸರಕಾರದಡಿಯೇ ಕೈಗೂಡಿದೆ. ಅತ್ತ, ಉತ್ತರ ಪ್ರದೇಶ ಸರಕಾರವು, ಅಯೋಧ್ಯೆಯ ವಿವಾದದ ಕೇಂದ್ರ ಬಿಂದುವಾಗಿದ್ದ ರಾಮಜನ್ಮಭೂಮಿಗೆ ಕಾಲಿಟ್ಟ ದೇಶದ ಮೊದಲ ಪ್ರಧಾನಿ ಎಂದು ಬಣ್ಣಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ರಾರಾಜಿಸಿದ ರಾಮ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಭೂಮಿಪೂಜೆ ಸಮಾರಂಭದ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಶ್ರೀರಾಮ, ಮಂದಿರದ ರೂಪುರೇಷೆ ಚಿತ್ರಗಳು ರಾರಾಜಿಸಿದವು. ವಾಟ್ಸ್‌ಆಪ್‌ ಸ್ಟೇಟಸ್‌ಗಳು, ಟ್ವಿಟರ್‌, ಫೇಸ್‌ಬುಕ್‌ನಲ್ಲಿ ಶ್ರೀರಾಮ, ಲಕ್ಷ್ಮಣ, ಸೀತಾಮಾತೆ, ಹನುಮನ ತೈಲವರ್ಣ, ರೇಖಾಚಿತ್ರಗಳು, ಬಣ್ಣ ಬಣ್ಣದ ಚಿತ್ರಗಳು, ಶುಭಾಶಯ ಕೋರಿಕೆ, ಜೈಕಾರ ಘೋಷಣೆಗಳು ಕಂಡು ಬಂದವು. ಶ್ರೀರಾಮನ ಪಟ್ಟಾಭಿಷೇಕ, ಬಿಲ್ಲನ್ನು ಹಿಡಿದಿರುವ, ರಾಮನ ಕೆಳಗೆ ಹನುಮ ಕುಳಿತಿರುವ ಚಿತ್ರಗಳನ್ನು ಹೆಚ್ಚಾಗಿ ಬಳಸಲಾಗಿತ್ತು.

ಟ್ವಿಟರ್‌ನಲ್ಲೂ ರಾಮನ ಕುರಿತು ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಅಯೋಧ್ಯೆಯಲ್ಲಿ ರಾಮ ಮಂದಿರ ಸ್ಥಾಪನೆಗೆ ತ್ವರಿತವಾಗಿ ನಿರ್ಧಾರ ಕೈಗೊಂಡದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಹಿರಿಯ ನಾಯಕರಿಗೆ ಸಾಕಷ್ಟು ಮಂದಿ ಧನ್ಯವಾದ ಅರ್ಪಿಸಿದರು. ಇನ್ನೂ ಕೆಲವರು ಮಂದಿರ ಶಿಲಾನ್ಯಾಸದ ಚಿತ್ರಗಳನ್ನು ಹಾಕಿಕೊಂಡು ಸಂಭ್ರಮಿಸಿದರು. ‘ತ್ಯಾಗದ ಪ್ರತಿರೂಪವಾದ ಶ್ರೀರಾಮ ಚಂದ್ರನ ದೇಹಕ್ಕೆ ಸಾವಾಗಿರಬಹುದು, ಆದರೆ ಆತ ಎತ್ತಿ ಹಿಡಿದ ಮೌಲ್ಯಗಳು ಅಜರಾಮರವಾಗಿರುತ್ತವೆ’ ಎಂಬ ಮೆಚ್ಚುಗೆಯ ಮಾತುಗಳು ಕೇಳಿ ಬಂದಿವು. ಅಧಿಕ ಸಂಖ್ಯೆಯಲ್ಲಿ ಮೂರು ಅಕ್ಷರದ “ಜೈ ಶ್ರೀ ರಾಮ್‌’ ಉದ್ಘೋಷಗಳನ್ನು ಮೊಳಗಿಸಲಾಗಿತ್ತು.

ಮಂದಿರ ಹಿಂದೂಗಳ ನಂಬಿಕೆಯ ಸಂಕೇತ: ಶಾ
ಅಯೋಧ್ಯೆಯಲ್ಲಿ ರಾಮ ಮಂದಿರ ಸ್ಥಾಪನೆಯು ಶತಮಾನಗಳಿಂದಲೂ ವಿಶ್ವದ ಹಲವು ದೇಶಗಳ ಹಿಂದೂಗಳ ನಂಬಿಕೆಯ ಸಂಕೇತವಾಗಿದೆ. ಇದು ಭಾರತದ ಐತಿಹಾಸಿಕ ಹಾಗೂ ಹೆಮ್ಮೆಯ ದಿನವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ರಾಮಜನ್ಮ ಸ್ಥಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ನಾಗರಿಕತೆಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಹೊಸ ಯುಗವನ್ನು ಪ್ರಾರಂಭಿಸಿದ್ದಾರೆ.

ಶತಮಾನಗಳ ಸುದೀರ್ಘ‌ ಕಾಲ ಅಸಂಖ್ಯ ರಾಮಭಕ್ತರ ತ್ಯಾಗ, ಹೋರಾಟ, ಪ್ರಾಯಶ್ಚಿತ್ತದ ಫ‌ಲವಾಗಿ ಮಂದಿರ ನಿರ್ಮಾಣವಾಗುತ್ತಿದೆ. ಅವರಿಗೆ ನಾನು ಗೌರವ ಸಲ್ಲಿಸುತ್ತೇನೆ. ಭಾರತೀಯ ಸಂಸ್ಕೃತಿ ಹಾಗೂ ಮೌಲ್ಯಗಳನ್ನು ರಕ್ಷಿಸಲು ಪ್ರಧಾನಿ ಮೋದಿ ನೇತೃತ್ವದ ಸರಕಾರ‌ ಬದ್ಧವಾಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ. ಕೋವಿಡ್ 19 ಸೋಂಕಿತರಾಗಿರುವ ಕಾರಣ ಅಮಿತ್‌ ಶಾ ಭೂಮಿ ಪೂಜೆ ಸಮಾರಂಭದಿಂದ ದೂರ ಉಳಿದಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.