ನಮ್ಮ ನಿಲುವನ್ನೇ ಸುಪ್ರೀಂ ತೀರ್ಪು ಎತ್ತಿಹಿಡಿದಿರುವುದಕ್ಕೆ ಅಡ್ವಾಣಿ ಸಂತಸ


Team Udayavani, Nov 9, 2019, 8:57 PM IST

L-K-Advani-730

ನವದೆಹಲಿ: ರಾಮಜನ್ಮಭೂಮಿ ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ತಾರ್ಕಿಕ ಅಂತ್ಯ ನೀಡಿದೆ. ವಿವಾದಿತ 2.77 ಎಕರೆ ಜಾಗ ಹಿಂದೂಗಳಿಗೆ ಸೇರಿದ್ದು ಎಂಬ ಐತಿಹಾಸಿಕ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯದ ಪಂಚ ಸದಸ್ಯ ಪೀಠ ಒಮ್ಮತದಿಂದ ಹೇಳಿದೆ.

ರಾಮಮಂದಿರ ವಿಚಾರವನ್ನು ದೇಶವ್ಯಾಪಿಗೊಳಿಸಿದವರಲ್ಲಿ ಮತ್ತು ಈ ಹೋರಾಟದ ಹಿಂದೆ ತಮ್ಮನ್ನು ತೊಡಗಿಸಿಕೊಂಡಿದ್ದ ಪ್ರಮುಖರಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ಮತ್ತು ಮಾಜೀ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರೂ ಸಹ ಒಬ್ಬರು. ಅಯೋಧ್ಯೆಯಲ್ಲಿರುವ ರಾಮಜನ್ಮಭೂಮಿ ಹಿಂದೂಗಳ ಸ್ವತ್ತು ಎಂದು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದರು.

ಇದೀಗ ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲೂ ಅದೇ ಅಂಶವನ್ನು ಉಲ್ಲೇಖಿಸಿರುವುದು ಗಮನಾರ್ಹ. ಇಂದಿನ ಸುಪ್ರೀಂ ತೀರ್ಪಿನ ಕುರಿತಾಗಿ ಎಲ್.ಕೆ.ಅಡ್ವಾಣಿ ಅವರು ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. 1980ರ ಕಾಲಘಟ್ಟದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಅವರು ರಾಮಮಂದಿರವನ್ನು ಒಂದು ದೇಶವ್ಯಾಪಿ ಚಳವಳಿಯನ್ನಾಗಿ ರೂಪಿಸಿದ್ದರು.

‘ಇಂದಿನ ಈ ತೀರ್ಪಿನಿಂದ ನನಗೆ ಅತೀವ ಸಂತೋಷವಾಗಿದೆ ಮತ್ತು ಸುಪ್ರೀಂ ಕೋರ್ಟ್ ನಮ್ಮ ನಿಲುವನ್ನೇ ಎತ್ತಿಹಿಡಿದಿರುವುದು ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ’ ಎಂದು ಅಡ್ವಾಣಿ ಅವರು ಸುಪ್ರೀಂ ತೀರ್ಪಿನ ಕುರಿತಾಗಿ ಪ್ರತಿಕ್ರಿಯಿಸಿದ್ದಾರೆ.

‘ಸುಪ್ರೀಂ ಕೋರ್ಟ್ ತನ್ನ ಒಮ್ಮತದ ತೀರ್ಪನ್ನು ನೀಡುವ ಮೂಲಕ ರಾಮ ಜನ್ಮಭೂಮಿಯಲ್ಲೇ ಶ್ರೀ ರಾಮಚಂದ್ರನಿಗೆ ಭವ್ಯ ಮಂದಿರವೊಂದನ್ನು ಕಟ್ಟಬೇಕೆಂಬ ನಮ್ಮೆಲ್ಲರ ಬಯಕೆಗೆ ಹಾದಿ ಸುಗಮ ಮಾಡಿಕೊಟ್ಟಿದೆ’ ಎಂದು ಬಿಜೆಪಿಯ ಭೀಷ್ಮ ಸಂತಸದಿಂದ ನುಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya-Belief-730

ದೇವಸ್ಥಾನ ನಿರ್ಮಾಣಕ್ಕಾಗಿ ಕರಸೇವೆ, ಕ್ರೌಡ್‌ ಫ‌ಂಡಿಂಗ್‌

modern-Shabari

 27 ವರ್ಷ ಉಪವಾಸ; ಅಯೋಧ್ಯೆ ತೀರ್ಪಿಗಾಗಿ ಕಾದು ಕುಳಿತಿದ್ದ ಈಕೆ ಆಧುನಿಕ ಶಬರಿ!

Rama-Mandir-730

ರಾಮ ಮಂದಿರ ಟ್ರಸ್ಟ್‌ ರಚನೆ ಪ್ರಕ್ರಿಯೆ ಶುರು

RAM-MANDIR

ಮಂದಿರಕ್ಕೆ ರಾಮನವಮಿಯಂದು ಚಾಲನೆ?

Ayodhya-Temple

2020ರ ಮಕರಸಂಕ್ರಾಂತಿ ದಿನ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.