19 ಏಜಿನ ಆವೇಗಕ್ಕೆ ಸೆನ್ಸಾರ್ ಮಂಡಳಿಯ ಮೆಚ್ಚುಗೆ!


Team Udayavani, Nov 9, 2019, 7:40 PM IST

9-November-27

ಕಳೆದ ಒಂದಷ್ಟು ದಿನಗಳಿಂದ ಹೊಸಬರೇ ಸೇರಿ ರೂಪಿಸಿರುವ 19 ಏಜ್ ಈಸ್ ನಾನ್‌ಸೆನ್ಸ್ ಚಿತ್ರ ಭಾರೀ ಸೌಂಡು ಮಾಡುತ್ತಿದೆ. ಹೇಳಿಕೇಳಿ ಇದೀಗ ಕನ್ನಡ ಚಿತ್ರರಂಗ ಹೊಸ ಅಲೆಯ ಚಿತ್ರಗಳಿಂದ ಸಮೃದ್ಧಗೊಂಡಿದೆ. ಈ ಘಳಿಗೆಯಲ್ಲಿ ಹೊಸಾ ತಂಡವೊಂದು ಎಂಟ್ರಿ ಕೊಟ್ಟಿತೆಂದರೆ ಪ್ರೇಕ್ಷಕರ ಚಿತ್ತ ತಾನೇ ತಾನಾಗಿ ಅದರತ್ತ ನೆಟ್ಟುಕೊಳ್ಳುತ್ತದೆ. 19 ಏಜ್ ಈಸ್ ನಾನ್‌ಸೆನ್ಸ್ ಚಿತ್ರದತ್ತ ಪ್ರೇಕ್ಷಕರು ಹೊರಳಿ ನೋಡುತ್ತಿರೋದೂ ಕೂಡಾ ಈ ಕಾರಣದಿಂದಲೇ. ಹೊಸಬರೇ ಸೇರಿ ರೂಪಿಸಿರೋ ಈ ಸಿನಿಮಾ ಸೆನ್ಸಾರ್ ಅನ್ನೂ ಇದೀಗ ಮುಗಿಸಿಕೊಂಡಿದೆ. ವಿಶೇಷವೆಂದರೆ ಈ ಚಿತ್ರ ಖುದ್ದು ಸೆನ್ಸಾರ್ ಅಧಿಕಾರಿಗಳಿಂದಲೇ ಮೆಚ್ಚುಗೆ ಪಡೆದುಕೊಂಡಿದೆ.

ಸೆನ್ಸಾರ್ ಅಧಿಕಾರಿಗಳು ತಿಂಗಳೊಂದಕ್ಕೆ ಹತ್ತಾರು ಚಿತ್ರಗಳನ್ನು ನೋಡುತ್ತಾರೆ. ಆದರೆ ಅವರ ಕಡೆಯಿಂದಲೇ ಮೆಚ್ಚುಗೆ ಪಡೆದುಕೊಳ್ಳೋ ಸಿನಿಮಾಗಳು ವಿರಳ. 19 ಏಜ್ ಈಸ್ ನಾನ್‌ಸೆನ್ಸ್ ಚಿತ್ರ ಅಂಥಾ ವಿರಳ ಸಿನಿಮಾಗಳ ಸಾಲಿನಲ್ಲಿ ಸೇರಿಕೊಂಡಿದೆ. ಈ ಚಿತ್ರಕ್ಕೆ ಯು/ಎ ಸರ್ಟಿಫಿಕೆಟ್ ಕೊಟ್ಟಿರೋ ಸೆನ್ಸಾರ್ ಮಂಡಳಿ ಅಧಿಕಾರಿಗಳು ಚಿತ್ರತಂಡದ ಶ್ರಮವನ್ನು, ಕ್ರಿಯೇಟಿವಿಟಿಗಳನ್ನು ಮೆಚ್ಚಿಕೊಂಡಿದ್ದಾರೆ. ಈ ಉತ್ತೇಜಕ ಮಾತುಗಳಿಂದ ಇಡೀ ಚಿತ್ರತಂಡ ಖುಷಿಗೊಂಡಿದೆ. ಈ ಮೂಲಕವೇ ಹೊಸಬರ ತಂಡಕ್ಕೆ ಗೆಲುವು ಸಿಗೋದು ಗ್ಯಾರೆಂಟಿ ಎಂಬಂಥಾ ನಂಬಿಕೆಯೂ ಹುಟ್ಟಿಕೊಂಡಿದೆ.

ಇದು ಲೋಕೇಶ್ ನಿರ್ಮಾಣದಲ್ಲಿ ಮೂಡಿ ಬಂದಿರೋ ಚೊಚ್ಚಲ ಚಿತ್ರ. ಇಲ್ಲಿ ಲೋಕೇಶ್ ಅವರ ಪುತ್ರ ಮನುಷ್ ನಾಯಕನಾಗಿ ನಟಿಸಿದ್ದಾನೆ. ಈ ಸಿನಿಮಾದ ಕಥೆ ಹತ್ತೊಂಬತ್ತರ ಹರೆಯದ ಸುತ್ತ ಗಿರಕಿ ಹೊಡೆಯುವಂಥಾದ್ದು. ಆದ್ದರಿಂದಲೇ ಅದೇ ವಯೋಮಾನದ ಮನುಷ್‌ನನ್ನು ನಾಯಕನನ್ನಾಗಿಸಲಾಗಿದೆ. ಹಾಗೆಂದು ಇದೀಗ ತಾನೇ ಬಿಕಾಂ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರೋ ಮನುಷ್ ಏಕಾಏಕಿ ನಾಯಕನಾಗಿಲ್ಲ. ನಿರ್ಮಾಪಕ ಲೋಕೇಶ್ ಆತನಿಗೆ ಸೂಕ್ತವಾದ ತರಬೇತಿ ಕೊಡಿಸಿದ್ದಾರೆ. ಈ ಬಲದಿಂದಲೇ ಮನುಷ್ ಚೆಂದಗೆ ನಟಿಸಿದ್ದಾನಂತೆ. ಇದೆಲ್ಲ ಅಂಶಗಳು ಸೇರಿಕೊಂಡು ಸೆನ್ಸಾರ್ ಮಂಡಳಿಯಿಂದ ಈ ಸಿನಿಮಾಗೆ ಶಹಬ್ಬಾಸ್‌ಗಿರಿ ಸಿಕ್ಕಿದೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.