ಜಗ್ಗೇಶ್‌ ಚಿತ್ರದಲ್ಲಿ 21 ನಾಯಕಿಯರು!

ಕಾಳಿದಾಸನ ಸುತ್ತಮುತ್ತ ಕಲರ್‌ಫ‌ುಲ್‌ ಬೆಡಗಿಯರು

Team Udayavani, Oct 23, 2019, 5:01 AM IST

kalidasa

ಜಗ್ಗೇಶ್‌ಗೆ 21ನಾಯಕಿಯರ ಸಾಥ್‌! ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ಆದರೂ ಸತ್ಯ. ಜಗ್ಗೇಶ್‌ ಅವರ ಸಿನಿಮಾವೊಂದರಲ್ಲಿ 21 ಮಂದಿ ಕನ್ನಡದ ನಾಯಕಿ ನಟಿಯರು ಕಾಣಿಸಿಕೊಳ್ಳಲಿದ್ದಾರೆ! ಅಷ್ಟಕ್ಕೂ ಯಾವ ಸಿನಿಮಾ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ “ಕಾಳಿದಾಸ ಕನ್ನಡ ಮೇಷ್ಟ್ರು’. ಈ ಸಿನಿಮಾದಲ್ಲಿ ಜಗ್ಗೇಶ್‌ ನಾಯಕರಾಗಿ ನಟಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಚಿತ್ರದ ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿದ್ದು, ನವೆಂಬರ್‌ 15ರಂದು ಚಿತ್ರ ತೆರೆಕಾಣುತ್ತಿದೆ.

ಈಗ ಚಿತ್ರತಂಡದಿಂದ ಹೊರಬಿದ್ದಿರುವ ಸುದ್ದಿ ಪ್ರಕಾರ, ಈ ಚಿತ್ರದಲ್ಲಿ ಜಗ್ಗೇಶ್‌ಗೆ 21 ನಾಯಕಿಯರು ಸಾಥ್‌ ನೀಡುತ್ತಿದ್ದಾರೆ. ಅದು ಚಿತ್ರದ ಪ್ರಮೋಶನ್‌ ಗೀತೆಯಲ್ಲಿ. ಚಿತ್ರಕ್ಕಾಗಿ ಕವಿರಾಜ್‌ ಪ್ರಮೋಶನ್‌ ಸಾಂಗ್‌ ಮಾಡಿದ್ದು, ಇದರಲ್ಲಿ ಕನ್ನಡದ ನಟಿಯರಾದ ರಚಿತಾ ರಾಮ್‌, ಹರಿಪ್ರಿಯಾ, ಕಾರುಣ್ಯ, ರೂಪಿಕಾ, ಅದಿತಿ ಪ್ರಭುದೇವ, ಅದಿತಿ ರಾವ್‌, ಸಂಯುಕ್ತಾ ಹೊರನಾಡು, ಸೋನು ಗೌಡ, ದಿಶಾ ಪೂವಯ್ಯ, ನಿಶ್ವಿ‌ಕಾ ನಾಯ್ಡು, ಶುಭಾ ಪೂಂಜಾ ಸೇರಿದಂತೆ ಒಟ್ಟು 21 ಮಂದಿ ನಟಿಯರು ಈ ಚಿತ್ರಕ್ಕೆ ಸಾಥ್‌ ನೀಡಿದ್ದಾರೆ.

ಈ ಬಗ್ಗೆ ಮಾತನಾಡುವ ನಿರ್ದೇಶಕ ಕವಿರಾಜ್‌, ಚಿತ್ರಕ್ಕೆ 21 ಮಂದಿ ನಾಯಕಿಯರು ಸಾಥ್‌ ನೀಡಿರೋದು ನಿಜ. ಅದು ಹೇಗೆ ಎಂಬುದು ಸಸ್ಪೆನ್ಸ್‌’ ಎನ್ನುತ್ತಾರೆ. ಅಂದಹಾಗೆ, ಈ ಚಿತ್ರದಲ್ಲಿ ಜಗ್ಗೇಶ್‌ ಅವರಿಗೆ ಮೇಘನಾ ಗಾಂವ್ಕರ್‌ ಜೋಡಿ. ಜಗ್ಗೇಶ್‌ ಅವರು ಈ ಚಿತ್ರದಲ್ಲಿ ಕನ್ನಡ ಶಿಕ್ಷಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮರ್ಥ್ಯ ಮೀರಿ ಮಕ್ಕಳನ್ನು ದೊಡ್ಡ ಶಾಲೆಗೆ ಸೇರಿಸುವ ಪೋಷಕರು, ಶಿಕ್ಷಣ ವ್ಯವಸ್ಥೆಯ ದುರುಪಯೋಗ, ಮಧ್ಯಮ ವರ್ಗದ ತೊಂದರೆ ಸೇರಿದಂತೆ ಹಲವು ಅಂಶಗಳ ಸುತ್ತ ಈ ಸಿನಿಮಾ ಸಾಗುತ್ತದೆಯಂತೆ.

ಗಂಭೀರ ವಿಷಯವನ್ನು ಹಾಸ್ಯಮಯವಾಗಿ ಹೇಳುವ ಜೊತೆಗೆ ಚಿತ್ರದಲ್ಲೊಂದು ಸಂದೇಶವನ್ನು ನೀಡಲಾಗಿದೆಯಂತೆ. ದುಬೈನಲ್ಲಿ ಎಂಟನೆ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿಯೇ ನಿರ್ದೇಶಕರಿಗೆ ಕಥೆ ರಚಿಸಲು ಕಾರಣವಾಯಿತಂತೆ. ಚಿತ್ರದಲ್ಲಿ ಜಗ್ಗೇಶ್‌, ಮೇಘನಾ, ಅಂಬಿಕಾ, ತಬಲ ನಾಣಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಟ್ರೇಲರ್‌ ಅನ್ನು ನಟ ದರ್ಶನ್‌ ಬಿಡುಗಡೆ ಮಾಡಿ ಶುಭಕೋರಿದರು.

ಟಾಪ್ ನ್ಯೂಸ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.