ಕನ್ನಡ ಛಾಯಾಗ್ರಾಹಕರ ಸಂಘಕ್ಕೆ 35ರ ಸಂಭ್ರಮ


Team Udayavani, Jul 15, 2019, 3:04 AM IST

KCA

ಕನ್ನಡ ಚಿತ್ರರಂಗದ ಛಾಯಾಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿದೆ. ಅದಕ್ಕೆ ಕಾರಣ, “ಕರ್ನಾಟಕ ಚಲನಚಿತ್ರ ಛಾಯಾಗ್ರಾಹಕರ ಸಂಘ’ಕ್ಕೀಗ 35ರ ಸಂಭ್ರಮ. ಹೌದು, ಕನ್ನಡ ಚಿತ್ರರಂಗದ ಬೆಳವಣಿಗೆಯಲ್ಲಿ ಛಾಯಾಗ್ರಾಹಕರ ಪಾಲು ಇದೆ. ಛಾಯಾಗ್ರಾಹಕರೆಲ್ಲರೂ ಒಗ್ಗೂಡಿ ಮಾಡಿಕೊಂಡಿರುವ “ಕರ್ನಾಟಕ ಚಲನಚಿತ್ರ ಛಾಯಾಗ್ರಾಹಕರ ಸಂಘ’ ಈಗ 35 ವರ್ಷಗಳನ್ನ ಪೂರೈಸಿದೆ.

ಈ ಹಿನ್ನೆಲೆಯಲ್ಲಿ ಭಾನುವಾರ “ಸಿನಿ 35 ಕುಟುಂಬದ ಸಮಾರಂಭ’ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಾಣಿಜ್ಯ ಮಂಡಳಿ, ನಿರ್ಮಾಪಕ, ನಿರ್ದೇಶಕ, ಕಾರ್ಮಿಕರ ಒಕ್ಕೂಟ, ಕಿರುತೆರೆ ಕಲಾವಿದರ ಸಂಘದ ಅಧ್ಯಕ್ಷರು ಹಾಗು ಪದಾಧಿಕಾರಿಗಳು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು, ಕಾರ್ಯಕ್ರಮಕ್ಕೆ ಚಾಲನೆ ನೀಡಿ, “ಕನ್ನಡ ಚಿತ್ರರಂಗ ಇಂದು ಉತ್ತಮ ಬೆಳವಣಿಗೆಯಲ್ಲಿದೆ ಎಂಬುದು ಒಂದು ಖುಷಿಯಾದರೆ, ಇನ್ನೊಂದು ಕಡೆ ತಂತ್ರಜ್ಞ ರು ಆ ಖುಷಿಯಲ್ಲಿ ಇಲ್ಲ ಎಂಬುದೇ ಬೇಸರದ ಸಂಗತಿ. ಈಗ ಡಬ್ಬಿಂಗ್‌ ಸಂಸ್ಕೃತಿ ಹೆಚ್ಚಾಗುತ್ತಿದೆ. ಆ ವಿರುದ್ಧ ಹೋರಾಟವನ್ನೂ ಮಾಡಲಾಗಿತ್ತು.

ಆದರೆ, ನ್ಯಾಯಾಲಯದ ಆದೇಶ ಪಾಲಿಸಬೇಕಾಯಿತು. ಡಬ್ಬಿಂಗ್‌ ಬೇಕು ಎಂದವರು ಸೋತಿದ್ದಾರೆ. ಜನರೇ ಸಾರಸಗಟಾಗಿ ಅದನ್ನು ತಿರಸ್ಕರಿಸಿದ್ದಾರೆ. ಈಗ ನಮ್ಮ ಕನ್ನಡ ಕಲಾವಿದರು, ತಂತ್ರಜ್ಞರು ಬೆಳೆದಿದ್ದಾರೆ. ಗುಣಮಟ್ಟದ ಚಿತ್ರಗಳೂ ಬರುತ್ತಿವೆ. ಆದರೆ, ವಾರಕ್ಕೆ ಬಿಡುಗಡೆಯಾಗುತ್ತಿರುವ ಚಿತ್ರಗಳ ಸಂಖ್ಯೆ ನೋಡಿದಾಗ ಆಘಾತವಾಗುತ್ತದೆ.

ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ. ಇದಕ್ಕೆ ಎಲ್ಲರೂ ಕೈ ಜೋಡಿಸಬೇಕು’ ಎಂದು ಕರೆಕೊಟ್ಟರು ಸಾ.ರಾ.ಗೋವಿಂದು. ಸಂಘದ ಅಧ್ಯಕ್ಷ ಜೆ.ಜಿ.ಕೃಷ್ಣ ಅವರಿಗೆ ಸಂಘ 35 ವಸಂತ ಪೂರೈಸಿರುವುದು ಖುಷಿಕೊಟ್ಟಿದೆ. ಈ ವೇಳೆ ಅವರೊಂದು ಮನವಿ ಮಾಡಿಕೊಂಡರು. ಆ ಬಗ್ಗೆ ಹೇಳಿಕೊಂಡ ಅಧ್ಯಕ್ಷ ಜೆ.ಜಿ.ಕೃಷ್ಣ, “ಎಲ್ಲಾ ಸಂಘಟನೆಗಳನ್ನು ಒಂದೇ ಧ್ವನಿಯಲ್ಲಿ ಮಾತನಾಡುವಂತೆ ವಾಣಿಜ್ಯ ಮಂಡಳಿ ಮಾಡಬೇಕು.

ಪರಭಾಷೆಯಿಂದ ಬರುವ ಛಾಯಾಗ್ರಾಹಕರು ನಮ್ಮ ಸಂಘದಲ್ಲಿ ನೋಂದಣಿ ಮಾಡಿಸಬೇಕು, ಇಲ್ಲಿರುವ ಸಹಾಯಕ ಛಾಯಾಗ್ರಾಹಕರಿಗೆ ಕೆಲಸ ಕೊಡುವಂತೆ ನಿರ್ದೇಶಕ ಸಂಘ ಶಿಫಾರಸ್ಸು ಮಾಡಬೇಕು. ಎಲ್ಲರಿಗೂ ಬಾಟ ಇರುವಂತೆ ಸಹಾಯಕರಿಗೂ ಬಾಟವನ್ನು ನಿರ್ಮಾಪಕ ಸಂಘದಿಂದ ನಿಗದಿಪಡಿಸಬೇಕು. ಕಾರ್ಮಿಕ ಒಕ್ಕೂಟ ಇಲ್ಲಿ ಒಂದೇ ಇದ್ದರೆ ಮಾತ್ರ ನಿರ್ಮಾಪಕರಿಗೆ ಅನುಕೂಲವಾಗುತ್ತದೆ.

ಇದನ್ನು ಒಕ್ಕೂಟ ಅನುಷ್ಠಾನಕ್ಕೆ ತರಬೇಕು. ನಮ್ಮಲ್ಲಿರುವ ಸಹಾಯಕರನ್ನು ಕಿರುತೆರೆ ಸಂಘಕ್ಕೆ ಸೇರಿಸಿಕೊಳ್ಳಬೇಕು’ ಎಂದು ಅಧ್ಯಕ್ಷ ಜೆ.ಜಿ.ಕೃಷ್ಣ ಮನವಿ ಮಾಡಿಕೊಂಡರು. ಮಂಡಳಿ ಅಧ್ಯಕ್ಷ ಜೈರಾಜ್‌ ಹೇಳುವಂತೆ, “ಇಂದು ಸಮಸ್ಯೆಗಳಿಗಿಂತ ಸವಾಲುಗಳು ಜಾಸ್ತಿ. ಸಂಘ ನಮ್ಮ ಮುಂದಿಟ್ಟಿರುವ ವಿಷಯ ಕುರಿತಂತೆ ಎಲ್ಲರನ್ನೂ ಮಂಡಳಿಗೆ ಕರೆಸಿ ಮಾತನಾಡಲಾಗುತ್ತದೆ.

ಚಿತ್ರರಂಗದ ಇನ್ನಷ್ಟು ಬೆಳವಣಿಗೆಗೆ ಎಲ್ಲರ ಪ್ರೋತ್ಸಾಹ ಇರಲಿ ಎಂದರು ಜೈರಾಜ್‌. ಈ ವೇಳೆ, ನಿರ್ಮಾಪಕ ಸಂಘದ ಪ್ರಧಾನ ಕಾರ್ಯದರ್ಶಿ ಸೂರಪ್ಪಬಾಬು, ನಿರ್ದೇಶಕರ ಸಂಘದ ಅಧ್ಯಕ್ಷ ಡಾ.ನಾಗೇಂದ್ರಪ್ರಸಾದ್‌ ಮಾತನಾಡಿದರು. ಮಂಡಳಿ ಪದಾಧಿಕಾರಿಗಳಾದ ಉಮೇಶ್‌ಬಣಕಾರ್‌,ನರಸಿಂಹಲು,ಎ.ಗಣೇಶ್‌, ಎನ್‌.ಎಂ.ಸುರೇಶ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.