36 ವರ್ಷಗಳ ನಂತರ ಸುಮಲತಾ ಅಂಬರೀಶ್‌ ಕೈಗೆ ಬಂತು ಪೂರ್ಣ ಸ್ಕ್ರಿಪ್ಟ್


Team Udayavani, Dec 5, 2017, 11:35 AM IST

tayige-takka].jpg

ಶಶಾಂಕ್‌ ಸಿನಿಮಾಸ್‌ನಡಿ “ತಾಯಿಗೆ ತಕ್ಕ ಮಗ’ ಸಿನಿಮಾ ಆರಂಭವಾಗುತ್ತಿರುವ ಬಗ್ಗೆ ನಿಮಗೆ ಗೊತ್ತಿರಬಹುದು. ಅಜೇಯ್‌ ರಾವ್‌ ನಾಯಕರಾಗಿರುವ ಈ ಚಿತ್ರ ಸೋಮವಾರ ಸೆಟ್ಟೇರಿದೆ. ಈ ಚಿತ್ರದಲ್ಲಿ ಸುಮಲತಾ ಅಂಬರೀಶ್‌ ತಾಯಿ ಪಾತ್ರ ಮಾಡುತ್ತಿದ್ದಾರೆ. ಸುಮಲತಾ ಅಂಬರೀಶ್‌ ಈ ಸಿನಿಮಾ ಬಗ್ಗೆ ಖುಷಿಯಾಗಿದ್ದಾರೆ. ಅದಕ್ಕೆ ಮುಖ್ಯವಾಗಿ ಎರಡು ಕಾರಣ ಮೊದಲನೇಯದಾಗಿ ದೊಡ್ಡ ಗ್ಯಾಪ್‌ನ ನಂತರ ಸಿಕ್ಕ ಒಳ್ಳೆಯ ಪಾತ್ರ ಒಂದಾದರೆ ತಮ್ಮ 36 ವರ್ಷಗಳ ಕೆರಿಯರ್‌ನಲ್ಲಿ ಶೂಟಿಂಗ್‌ ಮುಂಚೆ ಕೈಗೆ ಬಂದ ಸ್ಕ್ರಿಪ್ಟ್. 

ಹೌದು, ಸುಮಲತಾ ಅಂಬರೀಶ್‌ ಅವರು ಚಿತ್ರರಂಗಕ್ಕೆ ಬಂದು 36 ವರ್ಷಗಳಾಗಿವೆ. ಈ 36 ವರ್ಷಗಳಲ್ಲಿ ಅವರಿಗೆ ಯಾವ ನಿರ್ದೇಶಕರು ಕೂಡಾ ಚಿತ್ರೀಕರಣ ಆರಂಭವಾಗುವ ಮುನ್ನ ಸಂಪೂರ್ಣ ಸ್ಕ್ರಿಪ್ಟ್ ಅನ್ನು ಕೈಗಿಟ್ಟಿರಲಿಲ್ಲವಂತೆ. ಆದರೆ, “ತಾಯಿಗೆ ತಕ್ಕ ಮಗ’ ತಂಡ ಮಾತ್ರ ಮುಹೂರ್ತವಾಗುವ ಮುನ್ನವೇ ಬೌಂಡ್‌ ಸ್ಕ್ರಿಪ್ಟ್ ಅನ್ನು ಸುಮಲತಾ ಅವರಿಗೆ ಕೊಟ್ಟಿದೆ. ಇದರಿಂದ ಸಹಜವಾಗಿಯೇ ಸುಮಲತಾ ಅವರು ಖುಷಿಯಾಗಿದ್ದಾರೆ.

ಸೋಮವಾರ ನಡೆದ ಮುಹೂರ್ತದ ವೇಳೆ ತಮ್ಮ ಕೈಗೆ ಬಂದ ಮೊದಲ ಸ್ಕ್ರಿಪ್ಟ್ನ ಬಗ್ಗೆ ಮಾತನಾಡಿದರು. “ನಾನು ಚಿತ್ರರಂಗಕ್ಕೆ ಬಂದು 36 ವರ್ಷ ಕಳೆಯುತ್ತಾ ಬಂದಿದೆ. ಈ 36 ವರ್ಷಗಳಲ್ಲಿ ಸಾಕಷ್ಟು ಸಿನಿಮಾ ಮಾಡಿದ್ದೇನೆ. ಆದರೆ, ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಬೌಂಡ್‌ ಸ್ಕ್ರಿಪ್ಟ್ ನನ್ನ ಕೈಗೆ ಬಂದಿದೆ. ಅದು “ತಾಯಿಗೆ ತಕ್ಕ ಮಗ’ ಸಿನಿಮಾದ್ದು. ತಂಡ ತುಂಬಾ ಶಿಸ್ತಿನಿಂದ ಕೂಡಿದೆ’ ಎಂದರು. ಇನ್ನು, ಈ ಚಿತ್ರದಲ್ಲಿ ಅವರು ತಾಯಿ ಪಾತ್ರ ಮಾಡುತ್ತಿದ್ದಾರೆ. ಹಾಗಂತ ಕಣ್ಣೀರು ಹಾಕುವ ತಾಯಿಯಲ್ಲ.

ಬದಲಾಗಿ ರೆಬೆಲ್‌ ಆಗುವಂತಹ ತಾಯಿ. “ತುಂಬಾ ಒಳ್ಳೆಯ ಪಾತ್ರ. ನಾನು ಈ ತರಹದ ಒಂದು ಪಾತ್ರ ಮಾಡದೇ ದೊಡ್ಡ ಗ್ಯಾಪ್‌ ಆಗಿತ್ತು. ಅನ್ಯಾಯ, ಅಸಮಾನತೆಯ ವಿರುದ್ಧ ಹೋರಾಡುವ, ಸಿಡಿದೇಳುವ ಪಾತ್ರ’ ಎನ್ನುತ್ತಾರೆ ಸುಮಲತಾ. ಈ ಚಿತ್ರದಲ್ಲಿ ಅವರು ಲಾಯರ್‌ ಆಗಿ ನಟಿಸುತ್ತಿದ್ದಾರೆ. “ಎಕ್ಸ್‌ಕ್ಯೂಸ್‌ ಮೀ’ ಚಿತ್ರದಲ್ಲಿ ಅಜೇಯ್‌ಗೆ ತಾಯಿಯಾಗಿ ನಟಿಸಿದ್ದರು. ಈಗ 14 ವರ್ಷಗಳ ನಂತರ ಮತ್ತೂಮ್ಮೆ ಅಜೇಯ್‌ ಹಾಗೂ ಸುಮಲತಾ ತಾಯಿ, ಮಗನಾಗಿ ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.