ಪ್ರವಾಹ ಪೀಡಿತ ಕುಗ್ರಾಮದಲ್ಲಿ 3rd ಕ್ಲಾಸ್ ಸಿನೆಮಾ ತಂಡ

ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ

Team Udayavani, Jan 20, 2020, 9:17 PM IST

3rd-class

– ಸಂತ್ರಸ್ತರ ಮಕ್ಕಳ ಮೊಗದಲ್ಲಿ ನಗು

ಬಾಗಲಕೋಟೆ : ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಭೀಕರ ಪ್ರವಾಹದಿಂದ ಸಂಪೂರ್ಣ ಮುಳುಗಡೆಯಾಗಿದ್ದ ಬಾದಾಮಿ ತಾಲೂಕಿನ ಕರ್ಲಕೊಪ್ಪ ಗ್ರಾಮದಲ್ಲಿ 3rd ಕ್ಲಾಸ್ ಚಿತ್ರ ತಂಡದ ನಾಯಕ-ನಾಯಕಿ ಹಾಗೂ ಸಹ ನಿರ್ಮಾಪಕರು ಸೇರಿದಂತೆ ಇಡೀ ಚಿತ್ರ ತಂಡದವರು ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗಮನ ಸೆಳೆದರು.

7 ಹಿಲ್ಸ್ ಸ್ಟುಡಿಯೋ ನಿರ್ಮಾಣದ 3rd ಕ್ಲಾಸ್ ಸಿನೆಮಾ ನಾಯಕ ನಮ್ಮ ಜಗದೀಶ, ನಟಿ ರೂಪಿಕಾ, ಸಹ ನಿರ್ಮಾಪಕ ನಂದನ್, ತಂಡದ ಕಿರಣ, ಮಣಿ ಮುಂತಾದವರು ರವಿವಾರ ರಾತ್ರಿ ಗ್ರಾಮಕ್ಕೆ ತೆರಳಿದವರು. ಚಿತ್ರ ತಂಡದವರನ್ನು ಇಡೀ ಗ್ರಾಮಸ್ಥರು ಸಂಭ್ರಮದಿಂದ ಸ್ವಾಗತಿಸಿದರು. ಬಳಿಕ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳೊಂದಿಗೆ ನೃತ್ಯ, ಹಾಡು ಹಾಡಿ ರಂಜಿಸಿದರು. ಗ್ರಾಮದ ಸಂತ್ರಸ್ತರ ಮಕ್ಕಳಿಂದಲೇ ವಿವಿಧ ಹಾಡು, ನೃತ್ಯ ಮಾಡಿಸಿ, ನಟ-ನಟಿಯರೂ ನೃತ್ಯ ಮಾಡಿ, ಮಕ್ಕಳ ಮೊಗದಲ್ಲಿ ಹರ್ಷ ಮೂಡಿಸಿದರು.

ಬಳಿಕ ನಟ ನಮ್ಮ ಜಗದೀಶ, ನಟಿ ರೂಪಿಕಾ, ಸಹ ನಿರ್ಮಾಪಕ ನಂದನ್ ಅವರೇ ಸ್ವತಃ ಮಕ್ಕಳು, ಗ್ರಾಮಸ್ಥರು ಹಾಗೂ ಚಿತ್ರ ತಂಡದವರಿಗಾಗಿ ಅಡುಗೆ (ಪಲಾವ್, ಶಾವಿಗೆ ಪಾಯಸ) ಸಿದ್ಧಪಡಿಸಿದರು. ಮಕ್ಕಳೊಂದಿಗೆ ಊಟ ಮಾಡಿ, ಶಾಲೆಯ ಕೊಠಡಿಯಲ್ಲೇ ವಾಸ್ತವ್ಯ ಮಾಡಿದರು.

ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ :
3rd ಕ್ಲಾಸ್ ಸಿನೆಮಾ ನಡೆ ಗ್ರಾಮದ ಕಡೆ ಎಂಬ ಪರಿಕಲ್ಪನೆಯೊಂದಿಗೆ ನಟ-ನಿರ್ಮಾಪಕರೂ ಆಗಿರುವ ನಮ್ಮ ಜಗದೀಶ, ನಟಿ ರೂಪಿಕಾ ಹಾಗೂ ನಂದನ್ ಅವರು, ಚಿತ್ರ ತಂಡದ ಮೂಲಕ ಕರ್ಲಕೊಪ್ಪ ಗ್ರಾಮ ದತ್ತು ಪಡೆದಿದ್ದು, ಆರಂಭಿಕವಾಗಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಗ್ರಾಮದ ಶಾಲೆಯಲ್ಲಿ 1ರಿಂದ 7ನೇ ತರಗತಿ ವರೆಗೆ ಒಟ್ಟು 76 ಮಕ್ಕಳಿದ್ದು, ಆರು ಕೊಠಡಿಗಳಲ್ಲಿ ಎರಡು ಸಂಪೂರ್ಣ ಬಿದ್ದಿವೆ. ಆ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಚಿತ್ರತಂಡ ಸೋಮವಾರ ಚಾಲನೆ ನೀಡಿತು.

ಚಿತ್ರ ತಂಡದ ಪರವಾಗಿ ಕಾರ್ಗಿಲ ಯೋಧ ರಂಗಪ್ಪ ಆಲೂರ, ಗದಗ ಜಿಲ್ಲೆಯ ಹೊಳೆಆಲೂರಿನ ಜ್ಞಾನಸಿಂಧು ವಸತಿಯುತ ಅಂಧ ಮಕ್ಕಳ ಶಾಲೆಯ ಅಂಧ ಮಕ್ಕಳು ದೀಪ ಬೆಳಗುವ ಮೂಲಕ ಶಾಲಾ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು.

ಚಿತ್ರ ತಂಡಕ್ಕೆ ಶ್ಲಾಘನೆ :
ಪ್ರವಾಹ ಪೀಡಿತ ಗ್ರಾಮವನ್ನು ದತ್ತು ಪಡೆದು ಬಿದ್ದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿರುವ 3rd ಕ್ಲಾಸ್ ಸಿನೆಮಾ ತಂಡದ ಕಾರ್ಯಕ್ಕೆ ಅವರಾದಿ ಫಲಹಾರೇಶ್ವರ ಮಠದ ಶ್ರೀ ಶಿವಮೂರ್ತಿ ಸ್ವಾಮೀಜಿ, ಬರನಟ್ಟಿಯ ಶ್ರೀ ಶಾಂತಲಿಂಗ ಸ್ವಾಮೀಜಿ ಸೇರಿದಂತೆ ಹಲವು ಶ್ಲಾಘನೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.