777 ಚಾರ್ಲಿ ಕಂಪ್ಲೀಟ್‌ ಎಮೋಶನ್ಸ್‌ ಇಟ್ಟುಕೊಂಡು ಮಾಡಿದ ಸಿನಿಮಾ: ರಕ್ಷಿತ್ ಶೆಟ್ಟಿ


Team Udayavani, May 17, 2022, 1:51 PM IST

777 ಚಾರ್ಲಿ ಕಂಪ್ಲೀಟ್‌ ಎಮೋಶನ್ಸ್‌ ಇಟ್ಟುಕೊಂಡು ಮಾಡಿದ ಸಿನಿಮಾ; ರಕ್ಷಿತ್ ಶೆಟ್ಟಿ

ರಕ್ಷಿತ್‌ ಶೆಟ್ಟಿ ನಟನೆಯ “777 ಚಾರ್ಲಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರ ಇದೇ ಜೂನ್‌ 10ರಂದು ತೆರೆಕಾಣಲಿದೆ. ಈಗಾಗಲೇ ಭರ್ಜರಿಯಾಗಿ “777 ಚಾರ್ಲಿ’ಯ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚಿತ್ರತಂಡ, ಸೋಮವಾರ (ಮೇ. 16) ಚಿತ್ರದ ಮೊದಲ ಟ್ರೇಲರ್‌ ಅನ್ನು ಬಿಡುಗಡೆ ಮಾಡಿದೆ. ಮೊದಲೇ ನಿಗಧಿಯಾಗಿದ್ದಂತೆ, ಸೋಮವಾರ ಮಧ್ಯಾಹ್ನ 12 ಗಂಟೆ 12 ನಿಮಿಷಕ್ಕೆ ಸರಿಯಾಗಿ “777 ಚಾರ್ಲಿ’ ಟ್ರೇಲರ್‌ ಬಿಡುಗಡೆಯಾಗಿದ್ದು, ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಮತ್ತು ಮಲೆಯಾಳಂ ಭಾಷೆಗಳಲ್ಲೂ ಟ್ರೇಲರ್‌ ಹೊರಬಂದಿದೆ.

 “777 ಚಾರ್ಲಿ’ ಸಿನಿಮಾದ್ದು ವರ್ಣಿಸಲಾಗದ ಅನುಭವ: “ಈ ಹಿಂದೆ ಮಾಡಿದ್ದ ಪ್ರತಿಯೊಂದು ಸಿನಿಮಾಗಳ ಬಗ್ಗೆಯೂ ಮಾತನಾಡಬಹುದು. “ಉಳಿದವರು ಕಂಡಂತೆ’ ಮುಗ್ಧತೆಯಿಂದ ಮಾಡಿದ್ದು, “ಕಿರಿಕ್‌ ಪಾರ್ಟಿ’ ಗುರುತಿಸಿಕೊಳ್ಳಬೇಕು, ಗೆಲ್ಲಲೇಬೇಕೆಂದು ಮಾಡಿದ್ದು, “ಅವನೇ ಶ್ರೀಮನ್ನಾರಾಯಣ’ ಒಂದಷ್ಟು ತಿಳಿದುಕೊಳ್ಳಲು, ಅನುಭವಕ್ಕಾಗಿ ಮಾಡಿದ್ದು. ಆದರೆ “777 ಚಾರ್ಲಿ’ ಸಿನಿಮಾದ ಬಗ್ಗೆ ಏನೂ ಹೇಳಲಾಗದು. ಏಕೆಂದರೆ, ಇದೊಂದು ಕಂಪ್ಲೀಟ್‌ ಎಮೋಶನ್ಸ್‌ ಇಟ್ಟುಕೊಂಡು ಮಾಡಿದಂಥ ಸಿನಿಮಾ. ಅದರ ಅನುಭವಗಳು ನನಗೆ ಮಾತ್ರ ಗೊತ್ತು. ಆದರೆ ಅದನ್ನು ವಿವರಿಸಲಾಗದು. ಇಡೀ ಸಿನಿಮಾ ನನಗೆ ಮಾತ್ರವಲ್ಲ ನಮ್ಮ ಇಡೀ ತಂಡಕ್ಕೆ ಒಂದು ಎಮೋಶನಲ್‌ ಜರ್ನಿ ಅಂಥ ಹೇಳಬಹುದು. ಸಿನಿಮಾದ ಸಬ್ಜೆಕ್ಟ್ ನನಗೆ ಅಷ್ಟರ ಮಟ್ಟಿಗೆ ಹತ್ತಿರವಾಗಿದ್ದರಿಂದ, ಇಷ್ಟು ವರ್ಷ ಸಮಯ ತೆಗೆದುಕೊಂಡು ಈ ಸಿನಿಮಾ ಮಾಡೋದಕ್ಕೆ ಸಾಧ್ಯವಾಯ್ತು’ ಎನ್ನುವುದು “777 ಚಾರ್ಲಿ’ಯ ಬಗ್ಗೆ ನಾಯಕ ನಟ ಕಂ ನಿರ್ಮಾಪಕ ರಕ್ಷಿತ್‌ ಶೆಟ್ಟಿ ಮಾತು.

ಮನಮುಟ್ಟುವ ಸಿನಿಮಾ ಮಾಡಿದ ತೃಪ್ತಿ: “ಇದೊಂದು ಸಂಪೂರ್ಣ ಭಾವನಾತ್ಮಕ ಕಥಾಹಂದರದ ಸಿನಿಮಾ. ಹಾಗಾಗಿ ಯಾವುದೇ ಭಾಷೆಯ ಹಂಗಿಲ್ಲದೆ ಎಲ್ಲ ಪ್ರೇಕ್ಷಕರಿಗೂ ಸಿನಿಮಾ ಕನೆಕ್ಟ್ ಆಗುತ್ತದೆ. ಎಲ್ಲರ ಮನಮುಟ್ಟುವಂಥ ಸಿನಿಮಾ ಮಾಡಿದ್ದೇವೆ ಎಂಬ ನಂಬಿಕೆ ಇದೆ’ ಎಂಬುದು “777 ಚಾರ್ಲಿ’ ಬಗ್ಗೆ ನಿರ್ದೇಶಕ ಕಿರಣ್‌ ರಾಜ್‌ ಮಾತು.

ಇದನ್ನೂ ಓದಿ:‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

ಚಿತ್ರತಂಡದ ನಿರೀಕ್ಷೆ ಇಮ್ಮಡಿಗೊಳಿಸಿದ “ಚಾರ್ಲಿ’: ನಾಯಕಿ ಸಂಗೀತಾ ಶೃಂಗೇರಿ, ನಟ ರಾಜ್‌ ಬಿ. ಶೆಟ್ಟಿ, ಸಂಗೀತ ನಿರ್ದೇಶಕ ನೋಬಿನ್‌ ಪೌಲ್‌, ಛಾಯಾಗ್ರಹಕ ಅರವಿಂದ್‌ ಕಶ್ಯಪ್‌, ನಿರ್ಮಾಪಕಿ ಕೃಷ್ಣಾ ಹೀಗೆ ಚಿತ್ರದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು “777 ಚಾರ್ಲಿ’ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌, ಟೀಸರ್‌ಮತ್ತು ಈಗ ಬಿಡುಗಡೆಯಾಗಿರುವ ಟ್ರೇಲರ್‌ ಎಲ್ಲದಕ್ಕೂ ನಿರೀಕ್ಷೆಗೂ ಮೀರಿದ ಸ್ಪಂದನೆ ಮತ್ತು ಬೆಂಬಲ ಸಿಗುತ್ತಿರುವುದರಿಂದ “777 ಚಾರ್ಲಿ’ ಥಿಯೇಟರ್‌ನಲ್ಲೂ ಪ್ರೇಕ್ಷಕರಿಗೆ ಖಂಡಿತವಾಗಿಯೂ ಇಷ್ಟವಾಗುತ್ತದೆ ಎಂಬುದು ಚಿತ್ರತಂಡದ ಒಕ್ಕೊರಲ ಮಾತು.

“777 ಚಾರ್ಲಿ’ ಟ್ರೇಲರ್‌ಗೆ ಸಾಥ್‌ ನೀಡಿದ ಸ್ಟಾರ್: ಇನ್ನು ಕನ್ನಡದ ಜೊತೆಗೆ ತೆಲುಗು, ತಮಿಳು, ಮಲೆಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿರುವ “777 ಚಾರ್ಲಿ’ ಸಿನಿಮಾದ ಟ್ರೇಲರ್‌ಗೆ ಬಹುತೇಕ ಇತರ ಭಾಷೆಗಳ ಸ್ಟಾರ್, ಅದರಲ್ಲೂ ದಕ್ಷಿಣ ಭಾರತೀಯ ಚಿತ್ರರಂಗದ ಸ್ಟಾರ್ ಸಾಥ್‌=ನೀಡಿದ್ದಾರೆ. ತೆಲುಗಿನಲ್ಲಿ ಸಾಯಿ ಪಲ್ಲವಿ, ಲಕ್ಷ್ಮೀ ಮಂಜು, ರಾಣಾ ದಗ್ಗುಬಾಟಿ ಹಾಗೂ ವಿಕ್ಟರಿ ವೆಂಕಟೇಶ್‌ “777 ಚಾರ್ಲಿ’ ಟ್ರೇಲರ್‌ ಬಿಡುಗಡೆ ಮಾಡಿ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡಿದ್ದಾರೆ. ಇನ್ನು ತಮಿಳಿನಲ್ಲಿ ಖ್ಯಾತ ನಟ ಧನುಷ್‌ “777 ಚಾರ್ಲಿ’ ಸಿನಿಮಾದ ತಮಿಳು ಟ್ರೇಲರ್‌ ಬಿಡುಗಡೆ ಮಾಡಿ, ಮೆಚ್ಚುಗೆ ಸೂಚಿಸಿದ್ದಾರೆ. ಉಳಿದಂತೆ ಮಲಯಾಳಂನಲ್ಲಿ ಟೊವಿನೋ ಥಾಮಸ್‌, ಆಸಿಫ್ ಅಲಿ ಸೇರಿದಂತೆ ಹಲವು ಸ್ಟಾರ್ ಸಾಮಾಜಿಕ ಜಾಲತಾಣಗಳ ಮೂಲಕ ಟ್ರೇಲರ್‌ ಬಿಡುಗಡೆ ಮಾಡಿ “777 ಚಾರ್ಲಿ’ಗೆ ಶುಭ ಹಾರೈಸಿದ್ದಾರೆ

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.