ಎ ಫಿಲ್ಮ್ ಬೈ ಪ್ರವೀಣ್‌: ಇದೇ ಸಿನಿಮಾ ಶೀರ್ಷಿಕೆ


Team Udayavani, Mar 18, 2019, 5:48 AM IST

film-praveen-khushi.jpg

ಈಗಂತೂ ಕನ್ನಡದಲ್ಲಿ ಸಾಕಷ್ಟು ವಿಭಿನ್ನ ಎನಿಸುವ ಶೀರ್ಷಿಕೆ ಇರುವ ಚಿತ್ರಗಳು ಬರುತ್ತಿವೆ. ಸೆಟ್ಟೇರುತ್ತಲೂ ಇವೆ. ಆ ಸಾಲಿಗೆ “ಎ ಫಿಲ್ಮ್ ಬೈ ಪ್ರವೀಣ್‌’ ಕೂಡ ಒಂದು. ಸಾಮಾನ್ಯವಾಗಿ ಚಿತ್ರದ ಪೋಸ್ಟರ್‌ನಲ್ಲಿ “ಎ ಫಿಲ್ಮ್ ಬೈ…’ ಎಂದು ನಿರ್ದೇಶಕರುಗಳು ತಮ್ಮ ಹೆಸರನ್ನು ಹಾಕಿಕೊಂಡಿರುವುದನ್ನು ನೋಡಿರುತ್ತೀರಿ. ಈಗ ಅದೇ ಚಿತ್ರದ ಶೀರ್ಷಿಕೆಯಾಗಿದೆ ಅನ್ನೋದು ವಿಶೇಷ. ಹೌದು, “ಎ ಫಿಲ್ಮ್ ಬೈ ಪ್ರವೀಣ್‌’ ಚಿತ್ರವೊಂದು ಸೆಟ್ಟೇರಲು ಅಣಿಯಾಗುತ್ತಿದೆ.

ಈ ಚಿತ್ರಕ್ಕೆ ಪ್ರವೀಣ್‌ ನಿರ್ದೇಶಕರು. ಕಥೆ, ಚಿತ್ರಕಥೆಯ ಜೊತೆಗೆ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಇದೊಂದು ಸಿನಿಮಾದೊಳಗಿನ ಸಿನಿಮಾ ನಿರ್ದೇಶಕನ ಕಥೆ ಹೊಂದಿದೆ. ಸಸ್ಪೆನ್ಸ್‌, ಥ್ರಿಲ್ಲರ್‌ ಜೊತೆಗೆ ಕಾಮಿಡಿ ಹಾರರ್‌ ಕಥೆ ಸಾಗಲಿದೆ. ಸಾಮಾನ್ಯವಾಗಿ ಹಾರರ್‌ ಚಿತ್ರಗಳಲ್ಲಿ ಭಯದ ಛಾಯೆ ಜಾಸ್ತಿ. ಇಲ್ಲಿ ಅದರೊಂದಿಗೆ ಹಾಸ್ಯವೂ ಇದೆ ಎಂಬುದು ನಿರ್ದೇಶಕರ ಮಾತು. ಈ ಚಿತ್ರಕ್ಕೆ “ರಾಂಗ್‌ ಕಾಲ್‌’ ಚಂದ್ರು ನಾಯಕರಾದರೆ, ಅವರಿಗೆ ಖುಷಿ ಎಂಬ ಹೊಸ ಪ್ರತಿಭೆ ನಾಯಕಿ.

ಕಥೆ ಬಗ್ಗೆ ಹೇಳುವ ನಿರ್ದೇಶಕ ಪ್ರವೀಣ್‌, “ರಿವೇಂಜ್‌ ಕಥೆಯಲ್ಲ. ಹಾಗಂತ ದ್ವೇಷವೂ ಇಲ್ಲಿಲ್ಲ. ಕಥೆ ಬಗ್ಗೆ ಹೇಳುವುದಾದರೆ, ಚಿತ್ರದಲ್ಲಿ ಹೀರೋ ತಾನು ನಿರ್ದೇಶಕ ಆಗಬೇಕೆಂದು ಪ್ರಯತ್ನಿಸುತ್ತಿರುತ್ತಾನೆ. ಆ ಸಂದರ್ಭದಲ್ಲಿ ಅವನಿಗೊಂದು “ಎ ಫಿಲ್ಮ್ ಬೈ ಪ್ರವೀಣ್‌’ ಎಂಬ ಪುಸ್ತಕ ಸಿಗುತ್ತದೆ. ಆ ಪುಸ್ತಕ ಇಟ್ಟುಕೊಂಡು ತನ್ನ ಗೆಳೆಯರ ಜೊತೆ ನಿರ್ಮಾಪಕರ ಬಳಿ ಹೋಗಿ ಸಿನಿಮಾ ಮಾಡುವಂತೆ ಕೇಳುತ್ತಾನೆ. ಅಲ್ಲಿಂದ ಹೆಣ್ಣು ಪ್ರೇತಾತ್ಮದ ಕಾಟ ಶುರುವಾಗುತ್ತೆ.

ಗೊತ್ತಿಲ್ಲದೆಯೇ ಆ ಹೀರೋನನ್ನು ಆ ಪ್ರೇತಾತ್ಮ ಪ್ರೀತಿಸೋಕೆ ಶುರುಮಾಡಿರುತ್ತೆ. ಅದು ಹೇಗೆ, ಯಾಕೆ ಅನ್ನೋದು ಸಸ್ಪೆನ್ಸ್‌ ಎನ್ನುತ್ತಾರೆ ನಿರ್ದೇಶಕರು.
ಚಿತ್ರದಲ್ಲಿ ರೋಬೋ ಗಣೇಶ್‌ ವಿಲನ್‌ ಪಾತ್ರ ಮಾಡುತ್ತಿದ್ದಾರೆ. ಆದರೆ, ಸಿನಿಮಾದಲ್ಲಿ ಯಾವುದೇ ಫೈಟ್‌ ಇಲ್ಲ. ಉಳಿದಂತೆ ಚಿತ್ರದಲ್ಲಿ ಕೆಂಪೇಗೌಡ, ಮಜಾ ಟಾಕೀಸ್‌ ಪವನ್‌ಕುಮಾರ್‌, ನಿರಂಜನ್‌ಕುಮಾರ್‌ ದಾವಣಗೆರೆ, ದರ್ಶನ್‌ ಇತರರು ನಟಿಸುತ್ತಿದ್ದಾರೆ. ಕೆ.ಕಲ್ಯಾಣ್‌ ಸಂಗೀತ ಸಾಹಿತ್ಯವಿದೆ. ರವಿ ಸುವರ್ಣ ಛಾಯಾಗ್ರಹಣ ಮಾಡಿದರೆ, ಚೆಲುವ ಮೂರ್ತಿ ಸಂಕಲನ ಮಾಡುತ್ತಿದ್ದಾರೆ.

ವಿನಯ್‌ ಸಂಭಾಷಣೆ ಬರೆಯುತ್ತಿದ್ದಾರೆ. ನಿರ್ಮಾಪಕ ಪ್ರವೀಣ್‌ಗೆ ನಿರ್ಮಾಣದಲ್ಲಿ ಸಾಧು ಮುರುಗೇಶ್‌, ಮಿಲ್‌ ಚಂದ್ರು, ಪಿ.ಎಸ್‌.ಕುಮಾರಸ್ವಾಮಿ ಮತ್ತು ಪ್ರೇಮ್‌ ಸಾಥ್‌ ನೀಡುತ್ತಿದ್ದಾರೆ. ಏಪ್ರಿಲ 10 ರಂದು ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಬೆಂಗಳೂರು, ಹುಣಸೂರು ಮತ್ತು ಕುಂದಾಪುರ ಸುತ್ತಮುತ್ತ ಸುಮಾರು 20 ದಿನಗಳ ಕಾಲ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಚಿಸಿದೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.