ಸಾವು-ಬದುಕಿನ “ಅಘೋರ” ದರ್ಶನ
ಪುನೀತ್ ಎಂ. ಎನ್ "ಅಘೋರ' ಚಿತ್ರವನ್ನು ನಿರ್ಮಿಸಿ, ನಾಯಕನಾಗಿ ಅಭಿನಯಿಸಿದ್ದಾರೆ.
Team Udayavani, Dec 2, 2021, 12:06 PM IST
ಪ್ರಕೃತಿಗೂ ಸಾವಿಗೂ ಇರುವ ಸಂಬಂಧ, ಪುನರ್ಜನ್ಮ ಮೊದಲಾದವುಗಳ ಬಗ್ಗೆ ಕೇಳಿರುತ್ತೀರಿ. ಈಗ ಇಂಥದ್ದೇ ವಿಷಯವನ್ನು ಇಟ್ಟುಕೊಂಡು ಸಿನಿಮಾವೊಂದು ತೆರೆಗೆ ಬರುತ್ತಿದೆ. ಅದರ ಹೆಸರು “ಅಘೋರ’ ಮನುಷ್ಯನ ಸಾವಿನ ನಂತರ ಮತ್ತೊಂದು ಜನ್ಮ ಪಡೆಯುವ ಅಂತರದಲ್ಲಿ ಏನೆಲ್ಲ ನಡೆಯುತ್ತದೆ ಎಂಬುದನ್ನು ಪಂಚಭೂತಗಳ ಮೂಲಕ ಹೇಳುವ ಪ್ರಯತ್ನವನ್ನು “ಅಘೋರ’ ಚಿತ್ರದಲ್ಲಿ ಮಾಡಲಾಗಿದೆಯಂತೆ.
ಎನ್. ಎಸ್ ಪ್ರಮೋದ್ ರಾಜ್ ನಿರ್ದೇಶನದಲ್ಲಿ ಮೂಡಿಬಂದಿರುವ “ಅಘೋರ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಿಂದೆ “ಕವಿ’ ಎಂಬ ಚಿತ್ರ ನಿರ್ಮಿಸಿದ್ದ ಪುನೀತ್ ಎಂ. ಎನ್ “ಅಘೋರ’ ಚಿತ್ರವನ್ನು ನಿರ್ಮಿಸಿ, ನಾಯಕನಾಗಿ ಅಭಿನಯಿಸಿದ್ದಾರೆ. ಚಿತ್ರದಲ್ಲಿ ರಚನಾ ದಶರಥ್ ಹಾಗೂ ದ್ರವ್ಯಾ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.
ಭೂಮಿಯಲ್ಲಿ ಹುಟ್ಟಿದ ಪ್ರತಿ ಜೀವರಾಶಿಯೂ ಸಾಯಲೇಬೇಕು. ಹುಟ್ಟು ಎನ್ನುವುದು ಪ್ರಕೃತಿ ನಿಯಮ, ಅಂತೆಯೇ ಸಾವು ಕೂಡ ಯಾರಿಂದ, ಯಾವಾಗ, ಹೇಗೆ ಆಗಬೇಕು ಎಂಬುದು ಕಾಲದ ನಿರ್ಣಯವಾಗಿರುತ್ತದೆ. ಕಾಸ್ಮಿಕ್ ಎನರ್ಜಿ ಮೇಲೆ ಮಾಡಿದ ಈ ಸಿನಿಮಾದಲ್ಲಿ ಪ್ರಕೃತಿಗೂ ಸಾವಿಗೂ ಇರುವ ಸಂಬಂಧವೇನು ಅಂತ ಹೇಳಿದ್ದೇವೆ. ಅ-ಘೋರ ಇದು ಅಘೋರಿಗಳ ಕಥೆಯಲ್ಲ, ಸಾವು ಹೇಗೆ ಬರುತ್ತೆ, ಏನು ಮುನ್ಸೂಚನೆ ಕೊಡುತ್ತೆ, ಹುಟ್ಟು-ಸಾವುಗಳ ಗ್ಯಾಪ್ ನಲ್ಲಿ ಏನು ನಡೆಯುತ್ತೆ ಅನ್ನೋದೇ ಈ ಸಿನಿಮಾ.
ಈ ಕರ್ಮ ಹೇಗೆ ವರ್ಕ್ ಆಗುತ್ತದೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳುತ್ತಿದ್ದೇವೆ. ಹಾರರ್ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ’ ಎನ್ನುವುದು ಚಿತ್ರತಂಡದ ಮಾತು. ಚಿತ್ರದಲ್ಲಿರುವ ಏಕೈಕ ಪಾರ್ಟಿ ಸಾಂಗ್ಗೆ ಮುರಳೀಧರನ್ ಸಂಗೀತ ಸಂಯೋಜನೆಯಿದ್ದು, ಡಾ. ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ. ಸದ್ಯ ಟ್ರೇಲರ್ ಮೂಲಕ “ಅಘೋರ’ ದರ್ಶನ ಮಾಡಿಸಿರುವ ಚಿತ್ರತಂಡ, ಶೀಘ್ರದಲ್ಲಿಯೇ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್
MUST WATCH
ಹೊಸ ಸೇರ್ಪಡೆ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್