ಮನೆ ಮಾರಾಟದ ಸಂಭ್ರಮದಲ್ಲಿ ಚಿತ್ರತಂಡ!

ಅರ್ಧ ಸೆಂಚುರಿಗೆ ಬಾಬು ಟೀಮ್‌ ಫ‌ುಲ್‌ ಹ್ಯಾಪಿ

Team Udayavani, Jan 15, 2020, 7:03 AM IST

Mane-Maratakkide

“ನಿರ್ಮಾಪಕರು ತಂತ್ರಜ್ಞರಿಗೆ ಪೂರ್ಣ ಸ್ವಾತಂತ್ರ್ಯ ಕೊಟ್ಟರೆ ಇಂತಹ ಯಶಸ್ಸು ಖಂಡಿತ ಸಾಧ್ಯವಿದೆ…’ ಹೀಗೆ ಹೇಳಿದ್ದು, ನಿರ್ದೇಶಕ ಮಂಜು ಸ್ವರಾಜ್‌. ಅವರು ಹೇಳಿಕೊಂಡಿದ್ದು, ತಮ್ಮ ನಿರ್ದೇಶನದ “ಮನೆ ಮಾರಾಟಕ್ಕಿದೆ’ ಚಿತ್ರದ 50 ದಿನಗಳ ಸಂಭ್ರಮಾಚರಣೆಯಲ್ಲಿ. ಹೌದು, ಚಿತ್ರ ಯಶಸ್ವಿ 50 ದಿನ ಮುಗಿಸಿ, ಮುಂದುವರೆಯುತ್ತಿದೆ. ಈ ಸಂಭ್ರಮ ಹಂಚಿಕೊಳ್ಳಲೆಂದೇ, ನಿರ್ಮಾಪಕ ಎಸ್‌.ವಿ.ಬಾಬು ಅವರು ಅಂದು ಚಿತ್ರಕ್ಕೆ ದುಡಿದ ಕಲಾವಿದರು, ತಂತ್ರಜ್ಞರಿಗೆ ನೆನಪಿನ ಕಾಣಿಕೆ ಕೊಡುವ ಕಾರ್ಯಕ್ರಮ ಆಯೋಜಿಸಿದ್ದರು.

ನೆನಪಿನ ಕಾಣಿಕೆ ಪಡೆದ ಸಂದರ್ಭ ಮಾತನಾಡಿದ ಮಂಜು ಸ್ವರಾಜ್‌, “ನನ್ನ ನಿರ್ದೇಶನದ ಹಿಂದಿನ ಎರಡು ಚಿತ್ರಗಳು ಯಶಸ್ವಿಗೊಂಡರೂ ನೆನಪಿನ ಕಾಣಿಕೆ ಸ್ವೀಕರಿಸಿರಲಿಲ್ಲ. “ಮನೆ ಮಾರಾಟಕ್ಕಿದೆ’ ಮೂಲಕ ಮೊದಲ ನೆನಪಿನ ಕಾಣಿಕೆ ಪಡೆಯುತ್ತಿರುವ ಖುಷಿ ಇದೆ. ಎಸ್‌.ವಿ.ಬಾಬು ಅಂತಹ ನಿರ್ಮಾಪಕರು ಇದ್ದರೆ, ಖಂಡಿತ ಒಳ್ಳೆಯ ಸಿನಿಮಾ ಮಾಡಬಹುದು. ಸಿನಿಮಾ ತಂತ್ರಜ್ಞರಿಗೆ ಅವರು ಕೊಡುವ ಪ್ರೋತ್ಸಾಹ ಅನನ್ಯ. ಹಾಗಾಗಿ ಸಿನಿಮಾ ಚೆನ್ನಾಗಿ ಪ್ರದರ್ಶನ ಕಂಡಿದೆ.

ಈ ಸಕ್ಸಸ್‌ ತಂಡಕ್ಕೆ ಸೇರಬೇಕು’ ಎಂಬುದು ಮಂಜು ಸ್ವರಾಜ್‌ ಮಾತು. ನಿರ್ಮಾಪಕ ಎಸ್‌.ವಿ.ಬಾಬು, “ಎಲ್ಲರ ಶ್ರಮದಿಂದ ಚಿತ್ರ ಯಶಸ್ಸು ಕಂಡಿದೆ. ನಂಬಿಕೆ ಇಟ್ಟು ಕೆಲಸ ಮಾಡಿದ ಎಲ್ಲರಿಗೂ ಅಭಿನಂದಿಸುತ್ತೇನೆ. ಇನ್ನು, ಹಿಂದೆ ರಿಷಭ್‌ ಶೆಟ್ಟಿ “ರಿಕ್ಕಿ’ ಮಾಡಿದ್ದರು. ಆದರೆ, ಅದು ಜನರಿಗೆ ತಲುಪಲಿಲ್ಲ. ಈಗ ಆ ಚಿತ್ರವನ್ನು ಮರು ಬಿಡುಗಡೆ ಮಾಡುವ ಯೋಚನೆ ಇದೆ. ನಿರ್ದೇಶಕ ರಿಷಭ್‌ ಹಾಗು ನಾಯಕ ರಕ್ಷಿತ್‌ಶೆಟ್ಟಿ ಇಬ್ಬರೂ ಈಗ ಯಶಸ್ಸಿನಲ್ಲಿದ್ದಾರೆ.

ಹಾಗಾಗಿ ಪುನಃ ಚಿತ್ರವನ್ನು ರೀರಿಲೀಸ್‌ ಮಾಡಲು ಸಿದ್ಧತೆ ನಡೆಯುತ್ತಿದೆ’ ಎಂದರು ಬಾಬು. ಅಂದು ಹಾಜರಿದ್ದ ರಿಷಭ್‌ ಶೆಟ್ಟಿ ಕೂಡ, ಎಸ್‌.ವಿ.ಬಾಬು ಅವರ ಗುಣಗಾನ ಮಾಡಿದರು. “ನಾನು “ರಿಕ್ಕಿ’ ಕಥೆಯನ್ನು ಹಲವು ನಿರ್ಮಾಪಕರಿಗೆ ಹೇಳಿದ್ದೆ. ಆದರೆ, ಯಾರಿಂದಲೂ ಸೂಕ್ತ ಸ್ಪಂದನೆ ಸಿಗಲಿಲ್ಲ. ಕೊನೆಗೆ ಬಾಬು ಸರ್‌, ಕಥೆ ಕೇಳಿ ಎಲ್ಲಾ ವಿಧದಲ್ಲೂ ಸಹಕಾರ ಕೊಟ್ಟರು. ಕೆಲವೇ ನಿರ್ಮಾಪಕರಲ್ಲಿ ಇಂತಹವರು ಸಿಗುತ್ತಾರೆ’ ಅಂದರು.

ಅಂದು ಸಾ.ರಾ.ಗೋವಿಂದು ಮಾತನಾಡಿ, “ಪ್ರಸ್ತುತ ದಿನದಲ್ಲಿ ಪರಭಾಷೆ ಸಿನಿಮಾಗಳ ನಡುವೆಯೂ ಕನ್ನಡದಲ್ಲಿ ಒಳ್ಳೆಯ ಚಿತ್ರಗಳು ಬರುತ್ತಿವೆ. ಒಂದು ವಾರ ಪ್ರದರ್ಶನಗೊಳ್ಳುವುದೇ ಕಷ್ಟವಾಗಿರುವ ಸಂದರ್ಭದಲ್ಲಿ ಈ ಚಿತ್ರ ಎಲ್ಲಾ ಭಾಷೆಯ ಚಿತ್ರಗಳ ಮಧ್ಯೆ ಸವಾಲು ಸ್ವೀಕರಿಸಿ ಹಿಟ್‌ ಆಗಿದೆ’ ಅಂದರು. ಶಿವರಾಂ, ಚಿಕ್ಕಣ್ಣ, ರವಿಶಂಕರ್‌, ಗಿರಿ, ಕಾರುಣ್ಯ ರಾಮ್‌, ತಬಲನಾಣಿ, ನೀನಾಸಂಅಶ್ವಥ್‌, ರಾಜೇಶ್‌ನಟರಂಗ ಅಭಿಮನ್‌ರಾಯ್‌ ಇತರರು ಆ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.