ಒಂದು ನಿರ್ಮಲ ಪ್ರಯತ್ನ


Team Udayavani, Feb 17, 2018, 10:40 AM IST

Nirmala_(105).jpg

“ಕೇರ್‌ ಆಫ್ ಫ‌ುಟ್‌ಪಾತ್‌’ ಮೂಲಕ ಕಿಶನ್‌ ಕನ್ನಡದ ಕಿರಿಯ ನಿರ್ದೇಶಕ ಎಂಬ ಪಟ್ಟ ತಗೊಂಡಿದ್ದಾರೆ. ಈಗ ಮತ್ತೆ ಕಿರಿಯರ ಸುದ್ದಿ. ಹೌದು, ಮಕ್ಕಳೇ ಸೇರಿಕೊಂಡು ಸಿನಿಮಾವೊಂದನ್ನು ಮಾಡಲು ಹೊರಟಿದ್ದಾರೆ. ಇಲ್ಲಿ ನಿರ್ದೇಶಕ, ಸಂಗೀತ ನಿರ್ದೇಶಕಿ, ಡಿಸೈನರ್‌ ಎಲ್ಲರೂ ಕಿರಿಯರೇ. ಕಿರಿಯರೆಲ್ಲಾ ಸೇರಿ ಮಾಡುತ್ತಿರುವ ಈ ಚಿತ್ರದ ಹೆಸರು “ನಿರ್ಮಲ’. ಚಿತ್ರಕ್ಕೆ “ಮುದ್ದು ಮನಸುಗಳ ಕನಸು’ ಎಂಬ ಟ್ಯಾಗ್‌ಲೈನ್‌ ಇದೆ.

ಅಂದಹಾಗೆ, “ನಿರ್ಮಲ’ ಚಿತ್ರವನ್ನು ನಿರ್ಮಿಸುತ್ತಿರುವುದು ಭಾ.ಮ. ಹರೀಶ್‌ ಅವರ ಪುತ್ರ ಉಲ್ಲಾಸ್‌. ಉಲ್ಲಾಸ್‌ ಒಂದೆರೆಡು ವರ್ಷಗಳ ಹಿಂದೆ ಉಲ್ಲಾಸ್‌ ಸ್ಕೂಲ್‌ ಆಫ್ ಸಿನಿಮಾಸ್‌ ಎಂಬ ನಟನಾ ತರಬೇತಿ ಶಾಲೆಯನ್ನು ಪ್ರಾರಂಭಿಸಿದ್ದರು. ಆ ಶಾಲೆಯಲ್ಲಿ ನಟನೆ, ಸಂಗೀತ ಕಲಿಯಲು ಬಂದ ಮಕ್ಕಳೊಂದಿಗೆ ಯಾಕೆ ಸಿನಿಮಾ ಮಾಡಬಾರದು ಎಂದು ಯೋಚಿಸಿ, ಆಯಾ ಕ್ಷೇತ್ರದಲ್ಲಿ ಆಸಕ್ತಿ ಇರುವವರನ್ನೇ ಹುಡುಕಿ, ಅವರಿಂದಲೇ ಕೆಲಸ ಮಾಡಿಸಿದ್ದಾರೆ.

ಚಿತ್ರವನ್ನು ನಿರ್ದೇಶಿಸಿರುವುದು ಲೋಹಿತ್‌ ಎಂಬ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿ. ಅವರಿಗೆ ಕಿರುತೆರೆ ನಿರ್ದೇಶಕ ಪ್ರೀತಂ ಶೆಟ್ಟಿಯಿಂದ ತರಬೇತಿ ಕೊಡಿಸಿ, ಚಿತ್ರ ನಿರ್ದೇಶನ ಮಾಡಿಸಲಾಗುತ್ತಿದೆ. ಇನ್ನು ಸಂಗೀತ ನಿರ್ದೇಶಕಿ ವರ್ಷಶ್ರೀ, ಸಂಕಲನಕಾರ ಲೋಹಿತ್‌ ಶಂಕರ್‌, ಪೋಸ್ಟರ್‌ ಡಿಸೈನರ್‌ ಅಂಕಿತ ನಾಯ್ಡು ಮುಂತಾದವರಿಗೆ ಹಿರಿಯರಿಂದ ಸೂಕ್ತ ತರಬೇತಿ ಕೊಡಿಸಿ, ಅವರಿಂದಲೇ ಕೆಲಸ ಮಾಡಿಸಲಾಗುತ್ತಿದೆ.

ಈ ತಂಡದಲ್ಲಿ ಅನುಭವಿ ಎಂದರೆ, ಛಾಯಾಗ್ರಾಹಕ ಪವನ್‌ ಕುಮಾರ್‌ ಮತ್ತು ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ವೆಂಕಗಿರಿ ಬ್ರದರ್ಸ್‌ ಮಾತ್ರ. ಮಿಕ್ಕಂತೆ ಸಾಕಷ್ಟು ಹೊಸಬರು ಮತ್ತು ಅದರಲ್ಲೂ ಮಕ್ಕಳೇ ಇರುವುದು ವಿಶೇಷ.

“ನಿರ್ಮಲ’ ಚಿತ್ರದ ಚಿತ್ರೀಕರಣ ಏಪ್ರಿಲ್‌ನಿಂದ ಆರಂಭವಾಗಲಿದ್ದು, ಇತ್ತೀಚೆಗೆ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ. ಪೋಸ್ಟರ್‌ ಬಿಡುಗಡೆ ಮಾಡುವುದಕ್ಕೆ ನಟಿ ಪ್ರೇಮ ಬಂದಿದ್ದರು. ನಿರ್ಮಾಪಕ ಎಸ್‌.ವಿ. ಬಾಬು, ಜೀ ಕನ್ನಡದ “ಡ್ರಾಮಾ ಜ್ಯೂನಿಯರ್’ ನಿರ್ದೇಶಕ ಶರಣಯ್ಯ, ಭಾ.ಮ. ಹರೀಶ್‌, ಉಲ್ಲಾಸ್‌ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.