ಪ್ರತಿಭಾವಂತರಿಗೊಂದು ಸಿನಿಮಾ ಸಂತೆ


Team Udayavani, Nov 28, 2017, 11:07 AM IST

Cinema-Sante.jpg

ಈ ಕಲರ್‌ಫ‌ುಲ್‌ ಜಗತ್ತಿಗೆ ಕಾಲಿಡಬೇಕು ಅಂತ ಹಂಬಲಿಸುವ ಮಂದಿಗೆ ಲೆಕ್ಕವಿಲ್ಲ. ಆದರೆ, ಅಂತಹ ಪ್ರತಿಭಾವಂತರಿಗೆ ವೇದಿಕೆ ಸಿಗೋದು ಕಷ್ಟ. ಅಂತಹವರಿಗಾಗಿಯೇ ಈಗ “ಸಿನಿಮಾ ಸಂತೆ’ ಹೊಸದೊಂದು ವೇದಿಕೆ ಕಲ್ಪಿಸುತ್ತಿದೆ.  “ಸಿನಿ ಸೂರು’ ಎಂಬ ಸಂಸ್ಥೆ ಮೂಲಕ ನಡೆಯಲಿರುವ ಈ “ಸಿನಿಮಾ ಸಂತೆ’, ಹಲವು ಪ್ರಥಮಗಳಿಗೆ ಕಾರಣವಾಗಲು ಸಜ್ಜಾಗುತ್ತಿದೆ. ಡಿಸೆಂಬರ್‌ 9 ಹಾಗು 10 ರಂದು ಕಂಠೀರವ ಸ್ಟುಡಿಯೋದಲ್ಲಿ “ಸಿನಿಮಾ ಸಂತೆ’ಗೆ ಚಾಲನೆ ಸಿಗಲಿದೆ.

ಈ ಸಂತೆಯಲ್ಲಿ ಸಿನಿಮಾರಂಗದ ಎಲ್ಲಾ ವಿಭಾಗದ ತಂತ್ರಜ್ಞರು, ನಿರ್ದೇಶಕರು, ನಿರ್ಮಾಪಕರು, ಛಾಯಾಗ್ರಾಹಕರು, ಸಂಗೀತ ನಿರ್ದೇಶಕರು, ನೃತ್ಯ ನಿರ್ದೇಶಕರು, ಸಾಹಸ ನಿರ್ದೇಶಕರು, ಸಂಕಲನಕಾರರು, ಬರಹಗಾರರು, ಚಲನಚಿತ್ರ ಮಂದಿರದ ಮಾಲೀಕರು, ವಿತರಕರು, ಜಾಹಿರಾತುದಾರರ ಹಾಗು ಕಲಾವಿದರು ಒಂದೆಡೆ ಸೇರುತ್ತಿದ್ದಾರೆ. ಖ್ಯಾತ ನಿರ್ಮಾಪಕ,ನಿರ್ದೇಶಕರ ಮುಂದೆ ಪ್ರತಿಭಾವಂತರು ತಮ್ಮ ಪ್ರತಿಭೆ ತೋರಿಸಲು ಸೂಕ್ತ ವೇದಿಕೆ ಇದಾಗಿದೆ.

ಸಿನಿ ಸೂರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಅನುಪಮ ಶರಧಿ ಅವರಿಗೆ ಇದು ಮೊದಲ ಪ್ರಯತ್ನ. “ಚಿತ್ರರಂಗದ ಎಲ್ಲಾ ತಂತ್ರಜ್ಞರು, ಕಲಾವಿದರನ್ನು ಒಟ್ಟುಗೂಡಿಸುವ ಉದ್ದೇಶ ಮತ್ತು ಪ್ರತಿಭಾವಂತರಿಗೆ ಸೂಕ್ತ ವೇದಿಕೆ ಕಲ್ಪಿಸುವ ಪ್ರಯತ್ನಕ್ಕೆ ಕೈ ಹಾಕಿದ್ದೇವೆ. ಪ್ರತಿಭಾವಂತರಿಗೆ ಐದು ವೇದಿಕೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಆ ಮೂಲಕ ತಮ್ಮೊಳಗಿನ ಪ್ರತಿಭೆಯನ್ನು ಹೊರ ಹಾಕುವ ಮೂಲಕ ತಮ್ಮ ಆಸೆ, ಆಕಾಂಕ್ಷೆ ಈಡೇರಿಸಿಕೊಳ್ಳಲು ಈ ಸಿನಿಮಾ ಸಂತೆ ಮುಖ್ಯ ಪಾತ್ರ ವಹಿಸಲಿದೆ ಎಂದು ವಿವರ ಕೊಡುತ್ತಾರೆ ಅನುಪಮ.

“ಈ ಸಿನಿಮಾ ಸಂತೆಗೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ದೇಶಕ, ನಿರ್ಮಾಪಕರ ಸಂಘ, ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಸಾಥ್‌ ಕೊಡುತ್ತಿವೆ. ಹೊಸಬರಿಗೆ ತಮ್ಮ ಪ್ರತಿಭೆ ತೋರಿಸಲು ವೇದಿಕೆ ರೂಪಿಸಿದ್ದು, ಅಲ್ಲಿ ಸಿನಿಮಾ ನಿರ್ದೇಶಕರು ಅವರ ಪ್ರತಿಭೆಯನ್ನು ಪರಿಶೀಲಿಸಬಹುದಾಗಿದೆ’ ಎಂಬುದು ಕುಮಾರ್‌ ಈಶ್ವರ್‌ ಮಾತು. ರಾಕ್‌ಲೈನ್‌ ವೆಂಕಟೇಶ್‌ ಅವರ ಸಹಕಾರ ಈ ಸಿನಿಮಾ ಸಂತೆಗೆ ಇದೆ.

ಸಾಕಷ್ಟು ಸಲಹೆಗಳನ್ನು ಸಹ ರಾಕ್‌ಲೈನ್‌ ಕೊಟ್ಟಿದ್ದಾರೆ. ಆಸಕ್ತರು ಬಸವೇಶ್ವರ ನಗರ ಪೊಲೀಸ್‌ಠಾಣೆ ಸಮೀಪ ಇರುವ “ಸಿನಿ ಸೂರು’ ಸಂಸ್ಥೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಈ ವೇದಿಕೆಯಲ್ಲಿ ಕಥೆ, ಕಾದಂಬರಿ, ನಾಟಕ ಮತ್ತು ಹಾಡು ಪ್ರದರ್ಶಿಸಲು ವ್ಯವಸ್ಥೆ ಮಾಡಲಾಗಿದೆ. ಗಾಯನ ಮಾಡಲು ಇಚ್ಛಿಸುವವರು, ನಿರ್ದೇಶಕ, ನಿರ್ಮಾಪಕರ ಎದುರು ತಮ್ಮ ಪ್ರತಿಭೆ ತೋರಿಸುವವರು ಮತ್ತು  ಮನೆ, ಕಚೇರಿ, ಹೊಲ, ತೋಟ, ಕ್ಲಬ್‌, ಹೋಟೆಲ್‌, ಬಾರ್‌, ಶಾಲೆ, ಕಾಲೇಜು, ಆಸ್ಪತ್ರೆ, ದೇವಸ್ಥಾನ, ಇನಿತರೆ ಸ್ಥಳ ಚಿತ್ರೀಕರಣಕ್ಕೆ ನೀಡುವರು

ಹಾಗು ಈ ಸಿನಿಮಾ ಸಂತೆಯ ವೇದಿಕೆಯಲ್ಲಿ ಸುಮಾರು 10 ನಿಮಿಷದ ಕಿರುಚಿತ್ರವನ್ನು ನಿರ್ಮಾಪಕರ ಎದರು ಪ್ರದರ್ಶಿಸುವವರು ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇದರೊಂದಿಗೆ ಇನ್ನು ಚಿತ್ರಂಗದ ಅನೇಕ ವಿಭಾಗಗಳ ಕುರಿತ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎನ್ನುತ್ತಾರೆ ಕುಮಾರ್‌. ಹಾಗಂತ ಇದು ಉಚಿತವಲ್ಲ. ಪ್ರತಿಯೊಬ್ಬರಿಗೂ 200 ರೂ.ಗಳ ಶುಲ್ಕವಿದೆ. ಈ ಶುಲ್ಕ ಪಡೆಯೋಕೆ ಕಾರಣ, ಕಂಠೀರವ ಸ್ಟುಡಿಯೋದಲ್ಲಿ ಸಾಕಷ್ಟು ಮಂದಿ ಅರ್ಜಿ ಪಡೆಯದೆ ಬಂದು, ಹೆಚ್ಚು ಗೊಂದಲ ಉಂಟು ಮಾಡಬಹುದು ಎಂಬ ಕಾರಣಕ್ಕೆ ಶುಲ್ಕ ನಿಗಧಿಪಡಿಸಲಾಗಿದೆಯಂತೆ.

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.