ಸದ್ದಿಲ್ಲದೇ ತೆರೆಕಂಡಿತು ಆವಾಹಯಾಮಿ
Team Udayavani, Dec 31, 2017, 10:58 AM IST
ಡಿಸೆಂಬರ್ 29ಕ್ಕೆ ಕನ್ನಡದಲ್ಲಿ “ಚಮಕ್’ ಒಂದೇ ಚಿತ್ರ ತೆರೆಕಾಣುತ್ತದೆ ಎಂದೇ ಹೇಳಲಾಗಿತ್ತು. ಆದರೆ, “ಚಮಕ್’ ಜೊತೆ ಮತ್ತೂಂದು ಚಿತ್ರ ಸದ್ದಿಲ್ಲದೇ ತೆರೆಕಂಡಿದೆ.ಅದು “ಆವಾಹಯಾಮಿ’. ಕೆ.ಜಿ.ರಸ್ತೆಯ ಮೆಜೆಸ್ಟಿಕ್ ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಈ ಚಿತ್ರ ಪ್ರದರ್ಶನವಾಗುತ್ತಿದೆ. ಇದು ಸಂಪೂರ್ಣ ಹೊಸಬರ ಚಿತ್ರ. ಗಿರೀಶ್ ಕುಮಾರ್ ಈ ಚಿತ್ರದ ನಿರ್ದೇಶಕರು. ವುಡ್ಕ್ರೀಪರ್ ಈ ಚಿತ್ರದ ನಿರ್ಮಾಪಕರು.
ಸಾಫ್ಟ್ವೇರ್ ಇಂಜಿನಿಯರ್ ತಂಡ ಸೇರಿಕೊಂಡು “ಆವಾಹಯಾಮಿ’ ಎಂಬ ಚಿತ್ರ ಮಾಡಿದೆ. ಶೀರ್ಷಿಕೆ ಕೇಳಿದಾಕ್ಷಣ, ಇದೊಂದು ಹಾರರ್ ಚಿತ್ರ ಅನ್ನೋದು ಗೊತ್ತಾಗುತ್ತೆ. ಕನ್ನಡದಲ್ಲಿ ಸಾಕಷ್ಟು ಹಾರರ್ ಚಿತ್ರಗಳು ಬಂದಿವೆ. ಅವೆಲ್ಲಕ್ಕಿಂತ ಸ್ವಲ್ಪ ಹೊಸ ಪ್ರಯತ್ನದ ಮೂಲಕ ಇಲ್ಲಿ ಹೇಳುವ ಮತ್ತು ತೋರಿಸುವ ಪ್ರಯತ್ನ ಮಾಡಿದ್ದೇವೆ.
ಸಾಮಾನ್ಯವಾಗಿ ಹಾರರ್ ಚಿತ್ರಗಳಲ್ಲಿ ಗ್ರಾಫಿಕ್ಸ್ ಬಳಕೆ ಹೆಚ್ಚು. ಅದರೊಂದಿಗೆ ಇಲ್ಲಿ ನೈಜತೆಗೆ ಒತ್ತು ಕೊಡಲಾಗಿದೆ. ಇಲ್ಲಿ ಹಾರರ್ನೊಂದಿಗೆ ಹೆಣ್ಣು ಭ್ರೂಣ ಹತ್ಯೆ ಕುರಿತು ಒಂದು ಸಂದೇಶವೂ ಇದೆ. ಒಂದು ತಪ್ಪು ಮಾಡಿದಾಗ, ಆನಂತರ ಪಡುವ ಪಶ್ಚಾತ್ತಾಪ ಚಿತ್ರದ ಹೈಲೈಟ್. ಆ ತಪ್ಪಿನ ಅರಿವು ಏನೆಂಬುದು ಸಿನಿಮಾದೊಳಗಿನ ಸಾರ.
ಚಿತ್ರ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳುತ್ತಾರೆ ನಿರ್ದೇಶಕರು. ಚಿತ್ರದಲ್ಲಿ ವಿಜಯ್ರಾಜ್, ಅಕ್ಷತಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಗೌತಮ್ ಶ್ರೀವತ್ಸ ಅವರ ಸಂಗೀತವಿದೆ. ಕಿರಣ್ ಕೆ.ನಾಯರ್ ಅವರ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ