ಹಾಸ್ಟೆಲ್‌ ಹುಡುಗರ ಸುತ್ತ ‘ಅಬ್ಬಬ್ಬ’


Team Udayavani, Jun 21, 2022, 11:19 AM IST

abbabba movie kannada

“ಆ ದಿನಗಳು’ ಖ್ಯಾತಿಯ ಕೆ. ಎಂ ಚೈತನ್ಯ ನಿರ್ದೇಶನದಲ್ಲಿ ಮೂಡಿಬಂದಿರುವ “ಅಬ್ಬಬ್ಬ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ನಿಧಾನವಾಗಿ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ “ಅಬ್ಬಬ್ಬ’ ಸಿನಿಮಾದ ಆಡಿಯೋವನ್ನು ಬಿಡುಗಡೆ ಮಾಡಿದೆ.

ಇನ್ನು “ಅಬ್ಬಬ್ಬ’ ಸಿನಿಮಾದಲ್ಲಿ ಲಿಖೀತ್‌ ಶೆಟ್ಟಿ, ಅಮೃತಾ ಅಯ್ಯಂಗಾರ್‌, ಶರತ್‌ ಲೋಹಿತಾಶ್ವ, ಅಜಯ್‌ ರಾಜ್‌, ತಾಂಡವ ರಾಮ್‌, ಧನರಾಜ್‌ ಆಚಾರ್‌, ವಿಜಯ್‌ ಚೆಂಡೂರ್‌ ಮೊದಲಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇದೇ ವೇಳೆ ಮಾಧ್ಯಮಗಳ ಮುಂದೆ ಬಂದಿದ್ದ ಕಲಾವಿದರು ಮತ್ತು ತಂತ್ರಜ್ಞರು “ಅಬ್ಬಬ್ಬ’ ಸಿನಿಮಾದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾತನಾಡಿದರು.

ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಕೆ. ಎಂ ಚೈತನ್ಯ, “”ಅಬ್ಬಬ್ಬ’ ಎಂಬ ಪದ ಆಶ್ಚರ್ಯ, ಭಯ, ಹಾಸ್ಯ ಎಲ್ಲವನ್ನು ಸೂಚಿಸುತ್ತದೆ. ನಮ್ಮ ಸಿನಿಮಾದಲ್ಲಿ ಅದನ್ನು ಹಾಸ್ಯಕ್ಕೆ ಬಳಸಿಕೊಂಡಿದ್ದೇವೆ. ಸ್ಟೂಡೆಂಟ್‌ ಲೈಫ್ ಮತ್ತು ಹಾಸ್ಟೆಲ್‌ ಲೈಪ್‌ ಬಗ್ಗೆ ಈ ಸಿನಿಮಾ ಹೇಳುತ್ತದೆ. ಹಾಸ್ಟೆಲ್‌ನಲ್ಲಿ ಹುಡುಗರು ಏನ್‌ ಮಾಡ್ತಾರೆ ಎನ್ನುವ ಬಗ್ಗೆ ಈ ಸಿನಿಮಾವಿದೆ. ನಾಲ್ಕು ಹುಡುಗರು ಮತ್ತು ಒಂದು ಹುಡುಗಿಯ ನಡುವೆ ನಡೆಯುವ ಹಾಸ್ಯ ಸನ್ನಿವೇಶಗಳೇ ಈ ಚಿತ್ರಕ್ಕೆ ಮೂಲ ಕಥೆಯಾಗಿದೆ’ ಎಂದು ಕಥಾಹಂದರ ಬಿಚ್ಚಿಟ್ಟರು.

ಇದನ್ನೂಓದಿ:ಮೂರು ಗಿರಿಗಳ ಕಥೆ ಹೇಳಲು ಹೊರಟ “ಹರಿಕಥೆಯಲ್ಲ ಗಿರಿಕಥೆ ಸಿನಿಮಾ”..!

ನಾಯಕಿ ಅಮೃತಾ ಅಯ್ಯಂಗಾರ್‌ ಸಿನಿಮಾದಲ್ಲಿ  ಹುಡುಗರ ಹಾಸ್ಟೆಲ್‌ನಲ್ಲಿ ಸಿಲುಕಿಕೊಂಡಿರುವ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. “ಇಲ್ಲಿಯವರೆಗೆ ನಾನು ಮಾಡಿದ ಸಿನಿಮಾಗಳಿಗಿಂತ ಹೊಸಥರದ ಪಾತ್ರ ಈ ಸಿನಿಮಾದಲ್ಲಿದೆ. ಇಡೀ ಸಿನಿಮಾ ಕಂಪ್ಲೀಟ್‌ ಕಾಮಿಡಿಯಲ್ಲಿ ನಡೆಯುತ್ತದೆ. ಯೂಥ್ಸ್ ಆಡಿಯನ್ಸ್‌ಗೆ ಸಿನಿಮಾ ಇಷ್ಟವಾಗಲಿದೆ’ ಎಂಬುದು ಅಮೃತಾ ಮಾತು.

“ಈ ಸಿನಿಮಾದಲ್ಲಿ ನನಗೊಂದು ವಿಭಿನ್ನವಾದ ಪಾತ್ರವಿದೆ. ತುಂಬಾ ಸ್ಟ್ರಿಕ್ಟ್ ಆಗಿರುವ ವ್ಯಕ್ತಿ ಸನ್ನಿವೇಶಗಳಿಗೆ ಸಿಲುಕಿಕೊಂಡು ಒದ್ದಾಡುವ ಪಾತ್ರ ಇದಾಗಿದೆ. ನಿರ್ದೇಶಕರು ನನ್ನ ಪಾತ್ರವನ್ನು ಹಾಸ್ಯಮಯವಾಗಿ ತೋರಿಸಿದ್ದಾರೆ’ ಎನ್ನುವುದು ತಮ್ಮ ಪಾತ್ರದ ಬಗ್ಗೆ ನಟ ಶರತ್‌ ಲೋಹಿತಾಶ್ವ ಮಾತು.

ನಟರಾದ ಲಿಖೀತ್‌ ಶೆಟ್ಟಿ, ಅಜಯ್‌ ರಾಜ್‌, ತಾಂಡವ ರಾಮ್‌, ಛಾಯಾಗ್ರಹಕ ಮನೋಹರ ಜೋಶಿ ಚಿತ್ರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಚಿತ್ರಕ್ಕೆ ದೀಪಕ್‌ ಅಲೆಕ್ಸಾಂಡರ್‌ ಸಂಗೀತ, ಹರಿದಾಸ್‌ ಸಂಕಲನವಿದೆ.

ಆನ್‌ ಆಗಸ್ಟೇನ್‌ ಹಾಗೂ ವಿವೇಕ್‌ ಥಾಮಸ್‌ ನಿರ್ಮಿಸಿರುವ “ಅಬ್ಬಬ್ಬ’ ಚಿತ್ರದ ಬಹುತೇಕ ಚಿತ್ರೀಕರಣವನ್ನು ಬೆಂಗಳೂರು ಹಾಗೂ ತುಮಕೂರು ಸುತ್ತಮುತ್ತ ನಡೆಸಲಾಗಿದೆ. ಸದ್ಯ ಹಾಡುಗಳು ಮತ್ತು ಟ್ರೇಲರ್‌ ಮೂಲಕ ಪ್ರಚಾರ ನಡೆಸುತ್ತಿರುವ ಚಿತ್ರತಂಡ ಇದೇ ಜುಲೈ 1ರಂದು ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.