ಚಿತ್ರರೂಪದಲ್ಲಿ ಆಚಾರ್ಯ ಶ್ರೀಶಂಕರ

ಕನ್ನಡ, ತೆಲುಗು ಮತ್ತು ಸಂಸ್ಕೃತ ಭಾಷೆಗಳಲ್ಲಿ ನಿರ್ಮಾಣ

Team Udayavani, Dec 29, 2020, 1:06 PM IST

ಚಿತ್ರರೂಪದಲ್ಲಿ ಆಚಾರ್ಯ ಶ್ರೀಶಂಕರ

ಆದಿ ಶಂಕರಾಚಾರ್ಯರ ಜೀವನ -ಸಾಧನೆಗಳನ್ನು ಕುರಿತು ಹಲವುಕೃತಿಗಳು, ಸಾಕ್ಷ್ಯಚಿತ್ರಗಳು, ಸಿನಿಮಾಗಳುಈಗಾಗಲೇ ಬಂದಿವೆ. ಈಗ ಶಂಕರಾಚಾರ್ಯ ಜೀವನದ ಇನ್ನಷ್ಟುಅಂಶಗಳನ್ನು ತೆರೆಮೇಲೆ ಹೇಳುವಂಥ ಮತ್ತೂಂದು ಹೊಸಚಿತ್ರ ತಯಾರಾಗುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು “ಆಚಾರ್ಯ ಶ್ರೀಶಂಕರ’.

ಭಾರತದ ಸನಾತನ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ಸಾರಿಹೇಳಿದವರು ಶಂಕರಾಚಾರ್ಯರು.ಕೇವಲ 32 ವಯಸ್ಸಿಗೆ ಭಾರತದ ಮೂಲೆ ಮೂಲೆಗಳಿಗೆ ಸಂಚರಿಸಿ ಅದ್ವೆ„ತಸಿದ್ಧಾಂತವನ್ನು ಪ್ರತಿಪಾದಿಸಿ, ಅದನ್ನು ಜಗತ್ತಿಗೆ ಸಾರಿದ ಆದಿ ಶಂಕರರ ಜೀವನಬಾಲ್ಯ, ಯೌವ್ವನ ಮತ್ತು ನಿರ್ಗಮನದ ಅಪರೂಪದ ಸಂಗತಿಗಳು “ಆಚಾರ್ಯ ಶ್ರೀ ಶಂಕರ’ ಚಿತ್ರದಲ್ಲಿದೆಯಂತೆ. ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್‌ ಮಂಡಳಿಚಿತ್ರಕ್ಕೆ “ಯು’ ಪ್ರಮಾಣ ಪತ್ರ ನೀಡಿದ್ದಾರೆ.

ಚಿತ್ರ ಶೀಘ್ರದಲ್ಲಿ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು ಮತ್ತು ಸಂಸ್ಕೃತ ಭಾಷೆಗಳಲ್ಲಿ ಏಕಕಾಲದಲ್ಲಿ ತಯಾರಾಗುತ್ತಿರುವ “ಆಚಾರ್ಯ ಶ್ರೀಶಂಕರ’ ಚಿತ್ರಕ್ಕೆ ವೃತ್ತಿಯಲ್ಲಿ ಲೆಕ್ಕ ಪರಿಶೋಧಕರಾಗಿರುವ ವೈ.ಎನ್‌. ಶರ್ಮಾಮತ್ತು ವಿಜಯಲಕ್ಷ್ಮೀ “ಎಮ್ಮನೂರು ಕ್ರಿಯೇಷನ್ಸ್‌’ ಬ್ಯಾನರ್‌ನಲ್ಲಿನಿರ್ಮಿಸುತ್ತಿದ್ದಾರೆ. ಈ ಹಿಂದೆ ರಿಯಲ್‌ಸ್ಟಾರ್‌ ಉಪೇಂದ್ರ ಅಭಿನಯದ “ಶ್ರೀಮತಿ’, “ಭಗವದ್‌ ಶ್ರೀರಾಮಾನುಜ’, “ಅಷ್ಟಾವಕ್ರ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ರಾಜಾ ರವಿಶಂಕರ್‌,  “ಆಚಾರ್ಯ ಶ್ರೀ ಶಂಕರ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ : ರಾಜಕೀಯ ಪಕ್ಷ ಸ್ಥಾಪನೆಯಿಲ್ಲ ಎಂದ ಸೂಪರ್ ಸ್ಟಾರ್: ಮಹತ್ವದ ನಿರ್ಧಾರ ಪ್ರಕಟಿಸಿದ ರಜಿನಿ

ಇನ್ನೊಂದು ವಿಶೇಷವೆಂದರೆ, ಶೃಂಗೇರಿ ದಕ್ಷಿಣಾಮ್ಯಾಯ ಶಾರದಾ ಪೀಠದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು”ಆಚಾರ್ಯ ಶ್ರೀ ಶಂಕರ’ ಚಿತ್ರದ ಕಥೆ, ಚಿತ್ರಕತೆ ಮತ್ತು ಸಂಭಾಷಣೆಯನ್ನುಪರಾಮರ್ಶಿಸಿ, ಸಮ್ಮತಿಸಿದನಂತರವಷ್ಟೇ ಚಿತ್ರೀಕರಣ ಆರಂಭಿಸಲಾಗಿತ್ತು.

ಇನ್ನು “ಆಚಾರ್ಯ ಶ್ರೀ ಶಂಕರ’ ಚಿತ್ರದಲ್ಲಿ ಶಂಕರಾಚಾರ್ಯರ ಪಾತ್ರದಲ್ಲಿ ರವೀಂದ್ರ ಭಾಗವತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಹಿರಿಯ ನಟರಾದ ರಾಮಕೃಷ್ಣ, ರಮೇಶಭಟ್‌, ಮಾ. ಲಿಖೀತ ಶರ್ಮಾ, ಮಾ. ಬಿ.ಪಿ. ರೋಹಿತ್‌ ಶರ್ಮಾಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆಸಿ. ನಾರಾಯಣಛಾಯಾಗ್ರಹಣ, ಆರ್‌.ದೊರೆರಾಜ್‌ (ಆರ್‌.ಡಿರವಿ) ಸಂಕಲನವಿದೆ.ಚಿತ್ರದ ಹಾಡುಗಳಿಗೆಅರ್ಜುನ್‌ ಜನ್ಯಸಂಗೀತ ಸಂಯೋಜಿಸಿದ್ದಾರೆ.

ಇದೇ ಜನವರಿ ತಿಂಗಳಲ್ಲಿ ಶೃಂಗೇರಿಯಲ್ಲಿ ಸೆಟ್ಟೇರಿದ್ದ “ಆಚಾರ್ಯ ಶ್ರೀ ಶಂಕರ’ ಚಿತ್ರದ ಚಿತ್ರೀಕರಣವನ್ನು ತೀರ್ಥಹಳ್ಳಿ, ಕುಂದಾಪುರ, ದೇವರಾಯನ ದುರ್ಗ ಮೊದಲಾದ ಕಡೆಗಳಲ್ಲಿ ನಡೆಸಲಾಗಿದೆ.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.