ಉಪರಾಷ್ಟ್ರಪತಿಯವರಿಂದ ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿ
Team Udayavani, Dec 23, 2019, 6:34 PM IST
ನವದೆಹಲಿ: ಗಡಿನಾಡಿನಲ್ಲಿ ಕನ್ನಡ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣಗೊಂಡಿದ್ದ ಕನ್ನಡ ಚಿತ್ರ ಸ.ಹಿ.ಪ್ರಾ.ಶಾಲೆ ಕಾಸರಗೋಡು, ಪ್ರೇಕ್ಷಕರು ಹಾಗೂ ವಿಮರ್ಶಕರ ಪ್ರಶಂಸೆಗೆ ಪಾತ್ರವಾಗಿತ್ತು . ಕರಾವಳಿ ಮೂಲದ ಪ್ರತಿಭಾವಂತ ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ ಅವರು ಈ ಚಿತ್ರದ ನಿರ್ದೇಶಕರು. ಈ ಚಿತ್ರಕ್ಕೆ ಪ್ರಸಕ್ತ ಸಾಲಿನ ಅತ್ಯುತ್ತಮ ಮಕ್ಕಳ ಚಿತ್ರ ವಿಭಾಗದಲ್ಲಿ ಸ್ವರ್ಣ ಕಮಲ ಪ್ರಶಸ್ತಿಯೂ ಲಭಿಸಿತ್ತು.
ಇಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಚಿತ್ರದ ನಿರ್ದೇಶಕ ರಿಷಭ್ ಶೆಟ್ಟಿ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ತಾವು ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋ ತುಣುಕನ್ನು ತಮ್ಮ ಟ್ವಿಟ್ಟರ್ ನಲ್ಲಿ ಪ್ರಕಟಿಸಿಕೊಂಡಿರುವ ರಿಷಭ್ ಶೆಟ್ಟಿ ಅವರು, ಈ ಕ್ಷಣ ನನಗೆ ಬಹಳ ಮಹತ್ವದ್ದಾಗಿದೆ, ನಿಮ್ಮೆಲ್ಲರ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಈ ಬಾರಿ ಕನ್ನಡ ಚಿತ್ರರಂಗಕ್ಕೆ ವಿವಿಧ ವಿಭಾಗಗಳಲ್ಲಿ ಒಟ್ಟು 11 ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದ್ದು ನಮಗೆಲ್ಲಾ ಹೆಮ್ಮೆಯ ವಿಚಾರವಾಗಿದೆ.
Feeling Honoured to receive the ‘Swarna Kamala – Best Children’s Film’ at #NationalAward ceremony for our film #SHPSK . Thank you all for the love. pic.twitter.com/kqXBquIx19
— Rishab Shetty (@shetty_rishab) December 23, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ