ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ.. ವಿಡಿಯೋ ಮಾಡಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಡಾಲಿ


Team Udayavani, Aug 21, 2022, 4:50 PM IST

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ.. ವಿಡಿಯೋ ಮಾಡಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಡಾಲಿ

ಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ ಇದೇ ಮಂಗಳವಾರ ( ಆ.23 ರಂದು) 36 ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಅವರ ಹುಟ್ಟುಹಬ್ಬ ಪ್ರತಿವರ್ಷ ಜೋರಾಗಿ ನಡೆಯುತ್ತದೆ. ಈ ಬಾರಿಯೂ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

ಧನಂಜಯ ಕಳೆದ ಎರಡು ವರ್ಷಗಳಿಂದ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಅವರ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಕಾಯುತ್ತಿರುತ್ತಾರೆ. ಈ ಬಾರಿಯೂ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಸೋಶಿಯಲ್‌ ಮೀಡಿಯಾ ವಿಡಿಯೋ ಹಂಚಿಕೊಂಡಿರುವ ಅವರು, ನನ್ನ ಅಭಿಮಾನಿಗಳು, ಪ್ರೀತಿಸುವ ಜೀವಗಳಿಗೆ ಎಲ್ಲರಿಗೂ ನಮಸ್ಕಾರ. ಬಹಳ ಖುಷಿಯಾಗುತ್ತದೆ. ನನ್ನ ಹುಟ್ಟುಹಬ್ಬ ಅಂದಾಕ್ಷಣ ತುಂಬಾ ಹಿಂದಿನಿಂದಲೇ ಸೆಲೆಬ್ರೆಷನ್ ಶುರು ಮಾಡುತ್ತಾ ಬರುತ್ತಿದ್ದೀರಾ.ಬೆಂಗಳೂರಿನಲ್ಲಿ ರಕ್ತದಾನ ಶಿಬಿರ, ನೇತ್ರದಾನ ನೋಂದಣಿ ಶಿಬಿರ ಎಲ್ಲಾ ನಡೆಸಿದ್ದೀರಿ, ಬೆಳಗಾವಿ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲೂ ಕಾರ್ಯಕ್ರವನ್ನು ಮಾಡಿದ್ದೀರಿ. ನನಗೂ ನಿಮ್ಮೊಟ್ಟಿಗೆ ಸೇರಿ ಹುಟ್ಟುಹಬ್ಬ ಆಚರಿಸಲು ಆಸೆ. ಆದರೆ ಕಳೆದೆರಡು ವರ್ಷಗಳಿಂದ ಕೊರೊನಾ ಕಾರಣ ಸೆಲೆಬ್ರೇಟ್ ಮಾಡಲು ಸಾಧ್ಯವಾಗಲಿಲ್ಲ. ಈ ವರ್ಷ ಕೂಡ ಬರ್ತ್‌ಡೇ ಸೆಲೆಬ್ರೆಷನ್ ಮಾಡುವ ಪರಿಸ್ಥಿತಿಯಲ್ಲಿ ನಾನು ಕೂಡ ಇಲ್ಲ. ನಮ್ಮ ನಾಡು ಕೂಡ ಇಲ್ಲ. ಯಾಕೆಂದರೆ ಅಪ್ಪು ಅವರು ಅಗಲಿ ಇನ್ನು ವರ್ಷ ಕೂಡ ಆಗಿಲ್ಲ. ಶಿವಣ್ಣ ಸೇರಿದಂತೆ ಯಾರು ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಹಾಗಾಗಿ ಈ ವರ್ಷ ಕೂಡ ಬರ್ತ್‌ಡೇ ಆಚರಣೆ ಇರಲ್ಲ. ಹೇಗೆ ಎರಡು ವರ್ಷ ಕ್ಷಮಿಸಿ ಪ್ರೀತಿಸಿದ್ರೋ ಹಂಗೆ ಈ ವರ್ಷ ಕೂಡ ಕ್ಷಮಿಸಿ. ಮುಂದಿನ ವರ್ಷ ಎಲ್ಲರೂ ಸೇರಿ ಬರ್ತ್‌ಡೇ ಆಚರಿಸೋಣ” ಎಂದಿದ್ದಾರೆ.

ಮುಂದಿನ ವರ್ಷ ಒಳ್ಳೆ ಕೆಲಸಗಳ ಮೂಲಕ ಹುಟ್ಟುಹಬ್ಬ ಆಚರಿಸೋಣ. ನಾನು ಕೂಡ ನಿಮ್ಮ ಜೊತೆ ನಿಮ್ಮ ಜೊತೆ ಸೇರಿಕೊಳ್ಳುತ್ತೇನೆ. ಹಾಗಾಗಿ ಈ ವರ್ಷ ಎಲ್ಲಿದ್ದಿರೋ ಅಲ್ಲಿಂದಲೇ ಶುಭಾಶಯ ಕೋರಿ. ನನ್ನ ಹುಟ್ಟುಹಬ್ಬಕ್ಕೆ ತರುತ್ತಿದ್ದ ಕೇಕ್, ಹಾರ, ಶಾಲೂ ಮತ್ತೊಂದು ಎಲ್ಲದಕ್ಕೂ ಖರ್ಚು ಮಾಡುತ್ತಿದ್ದ ದುಡ್ಡಲ್ಲಿ ಒಂದಿಷ್ಟು ಅವಶ್ಯಕ ಇರುವ ಜೀವಗಳಿಗೆ ನಿಮ್ಮ ಕೈಲಾದ ಸಹಾಯ ಮಾಡಿ. ಅದರ ಮೂಲಕ ಹುಟ್ಟುಹಬ್ಬ ಆಚರಿಸೋಣ. ಅವರ ಪ್ರಾರ್ಥನೆಗಳು ನನ್ನನ್ನು ಕಾಯುತ್ತದೆ. ನಿಮ್ಮನ್ನು ಕಾಯುತ್ತದೆ. ಈ ವರ್ಷ ಬರ್ತ್‌ಡೇ ಆಚರಣೆ ಇರಲ್ಲ. ನಾನು ಸಹ ಬೆಂಗಳೂರಿನಲ್ಲಿ ಇರುವುದಿಲ್ಲ. ಮನೆ ಬಳಿ ಸಿಗುವುದಕ್ಕೂ ಆಗುವುದಿಲ್ಲ. ನಾನು ಆ ದಿನ ಗೆಳೆಯರ ಜೊತೆ ಹೊರಗೆ ಹೋಗುತ್ತಿದ್ದೇನೆ. ಖಂಡಿತ ಹುಟ್ಟುಹಬ್ಬ ಮುಗಿದ ಮೇಲೆ ಯಾವುದಾದರೂ ಕಾರ್ಯಕ್ರಮದಲ್ಲಿ ಎಲ್ಲರೂ ಸಿಗೋಣ. ಥ್ಯಾಂಕ್ಯೂ” ಎಂದಿದ್ದಾರೆ.

ಧನಂಜಯ ಸದ್ಯ “ಹೆಡ್‌ ಬುಷ್‌” , “ಮಾನ್ಸೂನ್‌ ರಾಗ”, ‘ಒನ್ಸ್ ಅಪಾನ್ ಅ ಟೈಮ್ ಇನ್ ಜಮಾಲಿಗುಡ್ಡ’, ‘ತೋತಾಪುರಿ’, “ಹೊಯ್ಸಳ” ಸೇರಿದಂತೆ ಟಾಲಿವುಡ್‌ ನ “ಪುಷ್ಪ-2” ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.