Actor Darshan: ದರ್ಶನ್ ಮತ್ತು ಮಾಧ್ಯಮ ನಡುವಿನ ವಿವಾದಕ್ಕೆ ತೆರೆ
Team Udayavani, Aug 26, 2023, 10:14 AM IST
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ನಟ ದರ್ಶನ್ ಹಾಗೂ ಕನ್ನಡ ಮಾಧ್ಯಮಗಳ ನಡುವೆ ಉಂಟಾಗಿದ್ದ ಮೈಮನಸ್ಸು ಬಗೆಹರಿದಿದೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹಾಗೂ ಎಡಿಟರ್ಸ್ ಗಿಲ್ಡ್ ಆಫ್ ಬೆಂಗಳೂರು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಿನ್ನಾಭಿ ಪ್ರಾಯಕ್ಕೆ ತೆರೆ ಎಳೆಯಲಾಯಿತು.
“ನನ್ನ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ’ ಎಂದು ದರ್ಶನ್ ಹೇಳುವ ಮೂಲಕ ವಿವಾದ ಇತ್ಯರ್ಥವಾಗಿದೆ.
ಸಾರ್ವಜನಿಕ ಜೀವನದಲ್ಲಿರುವ ಗಣ್ಯ ಹಾಗೂ ಜನಪ್ರಿಯ ವ್ಯಕ್ತಿಗಳು ನಡೆ ನುಡಿಯಲ್ಲಿ ಸಮಾಜಕ್ಕೆ ಮಾದರಿಯಾಗಿರಬೇಕು. ಮಾಧ್ಯಮ ಯಾರನ್ನೂ ದ್ವೇಷಿಸುವುದಿಲ್ಲ. ಪರಸ್ಪರ ಗೌರವ ದಿಂದ ನಡೆದುಕೊಳ್ಳಬೇಕು ಎಂಬ ಅಭಿಪ್ರಾಯ ಸಂಪಾದಕರ ಸಭೆಯಲ್ಲಿ ವ್ಯಕ್ತವಾಯಿತು.
ಈ ವೇಳೆ ಮಾತನಾಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ “ಸದ್ಯ ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ಹೊಸ ಕನಸಿನೊಂದಿಗೆ ಬರುತ್ತಿರುವ ನಿರ್ಮಾಪಕರ ಬೆಂಬಲಕ್ಕೆ ನಾವು ನಿಲ್ಲಬೇಕಿದೆ. ಪರಭಾಷಾ ಸಿನಿಮಾಗಳ ಎದುರು ನಮ್ಮ ಸಿನಿಮಾಗಳು ಗೆಲ್ಲಬೇಕಾದರೆ ಮಾಧ್ಯಮಗಳ ನೆರವು ಅಗತ್ಯವಾಗಿದೆ. ಕಳೆದ ಹಲವು ವರ್ಷಗಳಿಂದ ಮಾಧ್ಯಮ ಹಾಗೂ ಚಿತ್ರರಂಗ ಒಂದೇ ಕುಟುಂಬದಂತಿದೆ. ಇನ್ನು ಮುಂದೆಯೂ ಅದೇ ಮನೋಭಾವದೊಂದಿಗೆ ನಾವು ಮುಂದುವರೆಯೋಣ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…