ಚಿರು ಮಗುವಿಗಾಗಿ ಬೆಳ್ಳಿತೊಟ್ಟಿಲು ಖರೀದಿಸಿದ ಧ್ರುವ ಸರ್ಜಾ
ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್
Team Udayavani, Oct 21, 2020, 1:08 PM IST
ಸರ್ಜಾ ಕುಟುಂಬ ಪುಟ್ಟಕಂದಮ್ಮನ ನಿರೀಕ್ಷೆಯಲ್ಲಿದೆ. ಮೇಘನಾ ರಾಜ್ ಹೊಟ್ಟೆಯಲ್ಲಿ ಮತ್ತೆ ಚಿರಂಜೀವಿ ಸರ್ಜಾ ಹುಟ್ಟಿ ಬರಲಿದ್ದಾರೆಂಬ ನಿರೀಕ್ಷೆಯಲ್ಲಿ ಎದುರು ನೋಡುತ್ತಿದೆ. ಈ ನಡುವೆಯೇ ಮನೆಗೆ ಬರುವ ಹೊಸ ಅತಿಥಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ್ದಾರೆ.
ಹೌದು, ನಟ ಧ್ರುವ ಸರ್ಜಾ ಸಹೋದರ ಚಿರಂಜೀವಿ ಸರ್ಜಾ ಮಗುವಿಗಾಗಿ ಹತ್ತು ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲು ಖರೀದಿಸಿದ್ದಾರೆ. ಈ ಮೂಲಕ ಮನೆಗೆ ಬರಲಿರುವ ಅತಿಥಿಗೆ ಅದ್ಧೂರಿ ಸ್ವಾಗತಕೊರಲು ಅಣಿಯಾಗಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದ್ದು, ಧ್ರುವ ಸರ್ಜಾ ಅವರಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನು, ಚಿರಂಜೀವಿ ಸರ್ಜಾ ಅವರ ತಾಯಿ ಮಗುವಿಗಾಗಿ ಚಿನ್ನದ ಬಟ್ಟಲು ಖರೀದಿಸಿದ್ದಾರೆ ಎನ್ನಲಾಗಿದೆ. ಸದ್ಯ ಸರ್ಜಾ ಕುಟುಂಬ ಚಿರಂಜೀವಿ ಸರ್ಜಾ ಅವರ ಮಗುವಿನ ನಿರೀಕ್ಷೆಯಲ್ಲಿದೆ.
ರಾಜತಂತ್ರದಲ್ಲಿ ರಾಘಣ್ಣ ಬಿಝಿ :
ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅಭಿನಯದ ಹೊಸಚಿತ್ರ “ರಾಜತಂತ್ರ’ದ ಚಿತ್ರೀಕರಣ ಅದ್ಧೂರಿಯಾಗಿ ನಡೆಯುತ್ತಿದೆ. ಒಂದೇ ಹಂತದಲ್ಲಿ “ರಾಜತಂತ್ರ’ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಲು ಪ್ಲಾನ್ ಹಾಕಿಕೊಂಡಿರುವ ಚಿತ್ರತಂಡ, ಸದ್ಯ ಬಿಡುವಿಲ್ಲದೆ ಚಿತ್ರೀಕರಣದಲ್ಲಿ ನಿರತವಾಗಿದೆ.
“ಅಮ್ಮನ ಮನೆ’ ಚಿತ್ರದ ನಂತರ ರಾಘವೇಂದ್ರ ರಾಜಕುಮಾರ್ ಅಭಿನಯಿಸುತ್ತಿರುವ ಚಿತ್ರ ಇದಾಗಿದ್ದು, ಚಿತ್ರದಲ್ಲಿ ರಾಘಣ್ಣ ನಿವೃತ್ತ ಯೋಧನ ಪಾತ್ರದಲ್ಲಿಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆಹಿರಿಯ ನಟ ದೊಡ್ಡಣ್ಣ, ಶ್ರೀನಿವಾಸ ಮೂರ್ತಿ, ಹಿರಿಯ ನಟಿ ಭವ್ಯಾ, ಶಂಕರ್ ಅಶ್ವತ್, ನೀನಾಸಂ ಅಶ್ವತ್, ಮುನಿರಾಜು ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. “ವಿಶ್ವಂ ಡಿಜಿಟಲ್ ಮೀಡಿಯಾ’ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಜೆ.ಎಂ ಪ್ರಹ್ಲಾದ್ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಪಿ.ವಿ.ಆರ್. ಸ್ವಾಮಿ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ನಾಗೇಶ್ ಸಂಕಲನ ಕಾರ್ಯವಿದೆ. ಹಾಡುಗಳಿಗೆ ಸಿ. ಸುರೇಶ್ ಸಂಗೀತ ಸಂಯೋಜನೆಯಿದೆ. ಚಿತ್ರಕ್ಕೆ ವೈಲೆಂಟ್ ವೇಲು, ರಾಮದೇವ್ ಸಾಹಸವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ