ದಚ್ಚು ಮಾತಿಗೆ ಜಗ್ಗೇಶ್ ಮನಸ್ಸು ಹಗುರ…ದರ್ಶನ್ ಗೆ ಧನ್ಯವಾದ ಹೇಳಿದ ನವರಸ ನಾಯಕ
Team Udayavani, Feb 24, 2021, 9:12 PM IST
ಬೆಂಗಳೂರು : ತಮ್ಮ ಅಭಿಮಾನಿಗಳು ಮಾಡಿದ ತಪ್ಪಿಗೆ ತಾನು ಕ್ಷಮೆ ಕೇಳಿದ ನಟ ದರ್ಶನ್ ಅವರಿಗೆ ನವರಸ ನಾಯಕ ಜಗ್ಗೇಶ್ ಧನ್ಯವಾದ ಹೇಳಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿದ್ದ ಸಂಘರ್ಷವೊಂದು ಸುಖಾಂತ್ಯ ಕಂಡಂತಾಗಿದೆ.
ಕಳೆದ ಕೆಲ ದಿನಗಳಿಂದ ಕನ್ನಡದ ಹಿರಿಯ ನಟ ಜಗ್ಗೇಶ್ ಹಾಗೂ ನಟ ದರ್ಶನ್ ಅಭಿಮಾನಿಗಳ ನಡುವೆ ನಡೆಯುತ್ತಿದ್ದ ಜಗಳಕ್ಕೆ ತೆರೆ ಬಿದ್ದಂತಾಗಿದೆ. ಸ್ವತಃ ದರ್ಶನ್ ಅಭಿಮಾನಿಗಳ ಪರ ಕ್ಷಮೆ ಯಾಚಿಸಿ ವಿವಾದಕ್ಕೆ ಫುಲ್ ಸ್ಟಾಪ್ ಹೇಳಿದ್ದಾರೆ.
ಇದನ್ನೂ ಓದಿ :ಸೀನಿಯರ್ ತಪ್ಪು ಮಾಡಿದವರಿಗೆ ಬುದ್ದಿ ಹೇಳಬೇಕು : ಜಗ್ಗೇಶ್ ಗೆ ಸಂದೇಶ್ ನಾಗರಾಜ್ ಕಿವಿಮಾತು
ಇಂದು (ಫೆ.24 ) ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದ ವೇಳೆ ಜಗ್ಗೇಶ್ ಅವರಿಗೆ ಕ್ಷಮೆ ಕೋರಿರುವ ದಾಸ, ಅವರು ಸೀನಿಯರ್, ನಮ್ಮನ್ನ ಬಿಟ್ಟು ಅವರು ಯಾರ ಬಗ್ಗೆ ಮಾತಾಡಬೇಕು ? ನಮ್ಮ ಸೀನಿಯರ್ ಮುಂದೆ ಇರಬೇಕು, ನಾವು ಅವರ ಹಿಂದೆ ಇರಬೇಕು. ನನ್ನ ಅಭಿಮಾನಿಗಳಿಂದ ಅವರಿಗೆ ನೋವಾಗಿದ್ದರೆ ನಾನು ಕ್ಷಮೆ ಕೋರುತ್ತೇನೆ ಎಂದರು.
ಇದನ್ನೂ ಓದಿ :ಜಗ್ಗೇಶ್ ಗೆ ಮುತ್ತಿಗೆ ಘಟನೆ : ಅಭಿಮಾನಿಗಳ ಪರ ಕ್ಷಮೆ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ದರ್ಶನ್ ಕ್ಷಮೆ ಕೋರಿದ್ದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಜಗ್ಗೇಶ್, ಸಮಯ ಸಂದರ್ಭ ವಿಷಘಳಿಗೆ. ಪ್ರೀತಿ ವಿಶ್ವಾಸಕ್ಕೆ ಇದೊಂದು ತಾತ್ಕಾಲಿಕ ಸಮಸ್ಯೆ. ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ ಅಪನಂಬಿಕೆ ಮೋಡ ಸರಿದು ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ. ಕನ್ನಡಕ್ಕೆ ಒಗ್ಗಟ್ಟಿರಲಿ, ಈಗ ಮನಸ್ಸು ಹಗುರವಾಯಿತು ಧನ್ಯವಾದ ದರ್ಶನ್. ಇನ್ನೆಂದು ಇಂಥ ದಿನ ಬರದಿರಲಿ ಎಂದು ಟ್ವೀಟ್ ಮಾಡಿದ್ದಾರೆ.
ಸಮಯ ಸಂದರ್ಭ ವಿಷಘಳಿಗೆ
ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯ!
ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ ಅಪನಂಬಿಕೆ ಮೋಡ ಸರಿದು ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ!
ಕನ್ನಡಕ್ಕೆ ಒಗ್ಗಟ್ಟಿರಲಿ!
ಧನ್ಯವಾದ @dasadarshan
ಮನಸ್ಸು ಹಗುರವಾಯಿತು..
ಧನ್ಯವಾದ ಮಾಧ್ಯಮಮಿತ್ರರಿಗೆ.
ಧನ್ಯವಾದ ಕನ್ನಡದ ಮನಗಳಿಗೆ.
ಇನ್ನೆಂದು ಇಂಥ ದಿನ ಬರದಿರಲಿ? pic.twitter.com/1rJQSYsiRr— ನವರಸನಾಯಕ ಜಗ್ಗೇಶ್ (@Jaggesh2) February 24, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್