“ಕನ್ನಡತಿ’ ಹೀರೋ ಈಗ ಬಹದ್ದೂರ್ ಗಂಡು
Team Udayavani, Mar 30, 2021, 8:09 AM IST
ಕಿರುತೆರೆಯ “ಕನ್ನಡತಿ’ ಧಾರಾವಾಹಿ ನಟ ಕಿರಣ್ ರಾಜ್ ಶೀಘ್ರದಲ್ಲಿಯೇ ಕಿರುತೆರೆಯಿಂದ ಬೆಳ್ಳಿತೆರೆಗೆ ಅಡಿಯಿಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಿರಣ್ ರಾಜ್ ಅಭಿನಯಿಸುತ್ತಿರುವ ಹೊಸಚಿತ್ರಕ್ಕೆ “ಬಹದ್ದೂರ್ ಗಂಡು’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಈ ಚಿತ್ರದ ಮುಹೂರ್ತ ಕೂಡ ನೆರವೇರಿದೆ.
ಇನ್ನು “ಬಹದ್ದೂರ್ ಗಂಡು’ ಪಕ್ಕಾ ಕಮರ್ಷಿಯಲ್ ಸಿನಿಮಾ ಆಗಿದ್ದು ಗ್ರಾಮೀಣ ಸೊಗಡಿನ ಕಥೆ ಚಿತ್ರದಲ್ಲಿದೆಯಂತೆ. ಒಂದು ಹಳ್ಳಿಯ ನೂರು ವರ್ಷದ ಇತಿಹಾಸವನ್ನು ಆಧರಿಸಿ ಈ ಚಿತ್ರ ಮಾಡಲಾಗುತ್ತಿದೆಯಂತೆ.
“ಬಹದ್ದೂರ್ ಗಂಡು’ ಚಿತ್ರದಲ್ಲಿ ಕಿರಣ್ ರಾಜ್ಗೆ ನಾಯಕಿಯಾಗಿ ಯಶಾ ಶಿವಕುಮಾರ್, ನಿಸರ್ಗ ಲಕ್ಷ್ಮಣ್ ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಕರಿಸುಬ್ಬು, ನಾಗೇಶ್, ಗೋವಿಂದೇಗೌಡ, ರಮೇಶ್ ಭಟ್ ಮೊದಲಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರಕ್ಕೆ ಪ್ರಸಿದ್ಧ್ ನಿರ್ದೇಶನವಿದೆ. ಒಟ್ಟಾರೆ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿರುವ ಕಿರಣ್ ರಾಜ್, ಹಿರಿತೆರೆ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗುತ್ತಾರೆ ಅನ್ನೋದು “ಬಹದ್ದೂರ್ ಗಂಡು’ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು