ಟ್ವೆಂಟಿ ಟ್ವೆಂಟಿಗೆ ಕೋಮಲ್‌ ರೆಡಿ

ಹೊಸ ಚಿತ್ರಕ್ಕೆ ಟೈಟಲ್‌ ಸಿಕ್ತು

Team Udayavani, Nov 3, 2020, 1:01 PM IST

cinema-tdy-02

ನಟ ಕೋಮಲ್‌ ಹೊಸ ಸಿನಿಮಾ ಒಪ್ಪಿಕೊಂಡಿರುವ ವಿಚಾರವನ್ನು ನೀವು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಓದಿರುತ್ತೀರಿ. ಆದರೆ, ಆಗ ಆ ಚಿತ್ರಕ್ಕೆ ಟೈಟಲ್‌ ಇಟ್ಟಿರಲಿಲ್ಲ. ಈಗ ಚಿತ್ರಕ್ಕೆ ಟೈಟಲ್‌ ಅಂತಿಮವಾಗಿದೆ. ಅದು “ಟ್ವೆಂಟಿ ಟ್ವೆಂಟಿ’. ಹೀಗೊಂದು ವಿಭಿನ್ನ ಶೀರ್ಷಿಕೆಯ ಮೂಲಕ ಕೋಮಲ್‌ ಮತ್ತೆ ತೆರೆಮೇಲೆ ಬರಲು ಸಿದ್ಧರಾಗಿದ್ದಾರೆ.

“ಟ್ವೆಂಟಿ ಟ್ವೆಂಟಿ’ ಎಂಬ ಟೈಟಲ್‌ ಕೇಳಿದ ಕೂಡಲೇ ಇದು ಕ್ರಿಕೆಟ್‌ಗೆ ಸಂಬಂಧಿಸಿದ ಸಿನಿಮಾನಾ ಎಂಬ ಸಂದೇಹ ಬರಬಹುದು. ಖಂಡಿತಾ ಇದು ಕ್ರೀಡೆಗೆ ಸಂಬಂಧಪಟ್ಟ ಸಿನಿಮಾವಲ್ಲ. ಬದಲಾಗಿ ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾ. ಕೆ.ಎಲ್‌. ರಾಜಶೇಖರ್‌ ಈ ಚಿತ್ರದ ನಿರ್ದೇಶಕರು. ಈ ಹಿಂದೆ ಸಿನಿಮಾ, ಕಾಮಿಡಿ ಶೋಗಳಿಗೆ ಡೈಲಾಗ್‌ ಬರೆದು, ಸೈ ಎನಿಸಿಕೊಂಡಿರುವ ರಾಜಶೇಖರ್‌ ಈಗ “ಟ್ವೆಂಟಿ ಟ್ವೆಂಟಿ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಪ್ರೇಕ್ಷಕರನ್ನು ನಗಿಸಲು ಮುಂದಾಗಿದ್ದಾರೆ.

ಕೋಮಲ್‌ ಕೂಡಾ ಕಥೆ ಕೇಳಿ ಫಿದಾ ಆಗಿದ್ದಾರೆ. ಈ ಚಿತ್ರವನ್ನು ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ನಡಿ ಟಿ.ಆರ್‌.ಚಂದ್ರಶೇಖರ್‌ ನಿರ್ಮಿಸುತ್ತಿದ್ದಾರೆ. ಈಗಾಗಲೇ ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಚಂದ್ರಶೇಖರ್‌ ಅವರಿಗೆ ಈ ಸಿನಿಮಾ ಮೇಲೆ ಸಿಕ್ಕಾಪಟ್ಟೆ ವಿಶ್ವಾಸವಿದೆ. ಸದ್ಯ ಚಂದ್ರಶೇಖರ್‌ ನಿರ್ಮಾಣದ “ಬುದ್ಧಿವಂತ 2′ ಹಾಗೂ “ಶೋಕಿವಾಲ’ ಚಿತ್ರಗಳು ತೆರೆಗೆ ಸಿದ್ಧವಾಗಿವೆ. ಈ ನಡುವೆಯೇ ಹೊಸ ಚಿತ್ರವನ್ನು ಅನೌನ್ಸ್‌ ಮಾಡಿದ್ದಾರೆ.

ಕೋಮಲ್‌ ಕಾಮಿಡಿ ನಟರಾಗಿ, ನಾಯಕರಾಗಿ ಬೇಡಿಕೆಯಲ್ಲಿದ್ದವರು. ಆದರೆ, ಕೋಮಲ್‌ ಸ್ವಲ್ಪ ಸಮಯ ಕಾಮಿಡಿ ಬದಿಗಿಟ್ಟು, ಆ್ಯಕ್ಷನ್‌ನತ್ತ ವಾಲಿದ್ದರು. ಈಗ ಮತ್ತೆ ತಮ್ಮ ಮೂಲಸ್ಥಾನಕ್ಕೆ ಮರಳಿದ್ದಾರೆ. ಈ ಮೂಲಕ ಮತ್ತೆ ಪ್ರೇಕ್ಷಕರಿಗೆ ಕಾಮಿಡಿ ಉಣಬಡಿಸಲಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.