ಸೋಷಿಯಲ್ ಮೀಡಿಯಾ ಎಂಟ್ರಿಕೊಟ್ಟ ಮೊದಲ ದಿನವೇ ಕೋವಿಡ್ ಜಾಗೃತಿ ಮೂಡಿಸಿದ ರವಿಚಂದ್ರನ್
Team Udayavani, Apr 13, 2021, 1:15 PM IST
ಬೆಂಗಳೂರು: ಕನ್ನಡ ಚಿತ್ರರಂಗದ ನೆಮ್ಮೆಲ್ಲರ ಪ್ರೀತಿಯ ರವಿಮಾಮ ಎಲ್ಲರಿಗೂ ಯುಗಾದಿ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಪ್ರೇಮಲೋಕದ ದೊರೆ ಇಂದು ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಿಗೆ ಎಂಟ್ರಿ ಕೊಟ್ಟಿದ್ದಾರೆ.
ಒನ್ ಆ್ಯಂಡ್ ಓನ್ಲಿ ರವಿಚಂದ್ರನ್ ( @1n1ly_VRC) ಎಂಬುದು ಅವರ ಅಧಿಕೃತ ಖಾತೆಗಳ ಹೆಸರು. ಮೊದಲ ದಿನವೇ ಅವರು ಅಭಿಮಾನಿಗಳ ಜೊತೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾಗಳಿಗೆ ಪದಾರ್ಪಣೆ ಮಾಡಿರುವ ರವಿಚಂದ್ರನ್ ಅವರು ತಮ್ಮ ಅಭಿಮಾನಿಗಳಿಗೆ ಕಿವಿಮಾತೊಂದನ್ನು ಹೇಳಿದ್ದಾರೆ. ಯೂಟ್ಯೂಬ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಕೋವಿಡ್ ಪಿಡುಗಿನ ಕುರಿತು ಜಾಗೃತಿ ಮೂಡಿಸಿದ್ದಾರೆ. ‘ಧೂಮಪಾನ ಆರೋಗ್ಯಕ್ಕೆ ಹಾನಿಕರ. ಅದರಿಂದ ಸಾವು ಸಂಭವಿಸುತ್ತದೆ. ಈ ಮಾತನ್ನು ಎಲ್ಲ ಸಿಗರೇಟ್ ಪ್ಯಾಕ್ ಮೇಲೆ ಬರೆದಿರುತ್ತಾರೆ. ಸಿನಿಮಾಗೆ ಹೋದರೆ ಮೊದಲು ತೋರಿಸೋದೇ ಇದು. ಆದರೂ ಯಾರೂ ಸಿಗರೇಟ್ ಸೇದೋದು ಕಡಿಮೆ ಮಾಡಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯವೂ ಕಡಿಮೆ ಆಗಿಲ್ಲ. ಯಾಕೆಂದರೆ ನಮ್ಮಲ್ಲಿ ಒಂದು ಗುಣ ಇದೆ. ನಾವು ಎಲ್ಲದಕ್ಕೂ ಚಾನ್ಸ್ ತಗೊಳ್ತೀವಿ. ತಪ್ಪು ಅಂತ ಗೊತ್ತಿದ್ದರೂ ತಪ್ಪು ಮಾಡುವ ಗುಣ ನಮ್ಮಲ್ಲಿದೆ. ಅಬ್ಬಬ್ಬಾ ಎಂದರೆ ಕ್ಷಮೆ ಕೇಳಿ ಸರಿಮಾಡಿಕೊಳ್ಳಬಹುದು ಎಂದುಕೊಳ್ಳುತ್ತೇನೆ. ಕೋವಿಡ್ ಜೊತೆ ಚಾನ್ಸ್ ತಗೋಬೇಡಿ. ಒಳ್ಳೇದಲ್ಲ. ನಾನು ಸಿಗರೇಟ್ ಸೇದೋದು ಸಿನಿಮಾದಲ್ಲಿ ಮಾತ್ರ. ಪಾತ್ರಗಳಿಗಾಗಿ ಮಾತ್ರ’ಎಂದು ರವಿಚಂದ್ರನ್ ಹೇಳಿದ್ದಾರೆ.
Welcome to 1n1ly Premaloka ? Subscribe to the OFFICIAL 1n1ly Ravichandran YouTube channel to stay updated on great content from the #CRAZYSTAR #1n1ly #VRC #VRavichandran
Full video: https://t.co/Sn89llRtxH pic.twitter.com/JnD3jKSch3
— 1n1ly Ravichandran (@1n1ly_VRC) April 13, 2021
ಇನ್ನು ರವಿಚಂದ್ರನ್ ಅವರ ಟ್ವಿಟರ್, ಫೇಸ್ಬುಕ್ ಹಾಗೂ ಯುಟ್ಯೂಬ್ ಎಂಟ್ರಿಗೆ ಕನ್ನಡದ ಚಿತ್ರರಂಗದಿಂದ ಹಾಗೂ ಅಭಿಮಾನಿಗಳಿಂದ ಭವ್ಯ ಸ್ವಾಗತ ಸಿಕ್ಕಿದೆ.
Advice is not advisable
Do you smoke?
Video: https://t.co/3C2M3K2SUhSubscribe to the OFFICIAL 1n1ly Ravichandran YouTube channel to stay updated on great content from the #CRAZYSTAR #1n1ly #VRC #VRavichandran
— 1n1ly Ravichandran (@1n1ly_VRC) April 13, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!