‘ಮದಗಜ’ ಶೂಟಿಂಗ್ ವೇಳೆ ಅವಘಡ : ನಟ ಶ್ರೀಮುರುಳಿ ಕಾಲಿಗೆ ಪೆಟ್ಟು
Team Udayavani, Apr 7, 2021, 3:16 PM IST
ಬೆಂಗಳೂರು : ‘ಮದಗಜ’ ಚಿತ್ರದ ಚಿತ್ರೀಕರಣದ ವೇಳೆ ನಡೆದ ಅವಘಡದಲ್ಲಿ ನಾಯಕ ನಟ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದೆ.
ಮಂಗಳವಾರ (ಏ.6) ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಭಾರಿ ಸಾಹಸ ಸನ್ನಿವೇಶಗಳನ್ನು ಸೆರೆ ಹಿಡಿಯುವ ವೇಳೆ ಅವಘಡ ನಡೆದಿದೆ. ಫೈಟ್ ಸೀನ್ ಶೂಟ್ ಮಾಡುವಾಗ ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಲಿಗೆ ಪೆಟ್ಟಾಗಿದೆ. ತಕ್ಷಣ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮುಂದಿನ 15 ದಿನಗಳ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನು ಶ್ರೀಮುರಳಿ ಅವರು ‘ಭರಾಟೆ’ ನಂತರ ಮದಗಜ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಎಸ್. ಮಹೇಶ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರದ ನಾಲ್ಕನೇ ಹಂತದ ಚಿತ್ರೀಕರಣ ನಡೆಯುತ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅದ್ಧೂರಿ ವೆಚ್ಚದಲ್ಲಿ ‘ಮದಗಜ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಮದುಗಜ ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ಬಹುತೇಕ ಚಿತ್ರೀಕರಣ ಮುಗಿಸಿಕೊಂಡಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಝಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ