ಸಮಾಜ ಸೇವೆಗೆ ಕುಹಕವಾಡಿದವರಿಗೆ ಖಡಕ್ ಉತ್ತರ ಕೊಟ್ಟ ನಟ ಉಪೇಂದ್ರ
Team Udayavani, May 18, 2021, 5:09 PM IST
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರು ಇದೀಗ ಜನರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ. ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ವಿವಿಧ ತೆರನಾಗಿ ನೆರವಿನ ಹಸ್ತ ಚಾಚಿದ್ದಾರೆ.
ಕೋವಿಡ್ ಎರಡನೆ ಅಲೆಯಿಂದ ತೊಂದರೆ ಎದುರಿಸುತ್ತಿರುವ ಸಿನಿಮಾ ಕಾರ್ಮಿಕರಿಗಾಗಿ ಆಹಾರದ ಕಿಟ್ ಸೇರಿದಂತೆ ಇನ್ನಿತರ ಸಹಾಯ ಮಾಡುವ ಮೂಲಕ ಉಪೇಂದ್ರ ಅವರು ಕೋವಿಡ್ ವಿರುದ್ಧದ ಹೋರಾಟಕ್ಕೆ ಇಳಿದಿದ್ದಾರೆ. ಕೇವಲ ಸಿನಿಮಾ ಕಾರ್ಮಿಕರು ಮಾತ್ರವಲ್ಲದೆ ತಮ್ಮ ಬೆಳೆಯನ್ನು ಮಾರಾಟ ಮಾಡದೆ ಕಣ್ಣೀರು ಸುರಿಸುತ್ತಿರುವ ಅನ್ನದಾತರಿಗೂ ಉಪ್ಪಿ ನೆರವಿನ ಹಸ್ತ ಚಾಚಿದ್ದಾರೆ. ಆದರೆ, ಉಪೇಂದ್ರ ಅವರ ಈ ಕಾರ್ಯಕ್ಕೆ ಕೆಲವು ಕಿಡಿಗೇಡಿಗಳು ರಾಜಕೀಯ ಬಣ್ಣ ಹಚ್ಚಿದ್ದಾರೆ. ರಾಜಕೀಯ ಲಾಭಕ್ಕಾಗಿ ಉಪೇಂದ್ರ ಹೀಗೆ ಸಮಾಜ ಸೇವೆಗಿಳಿದಿದ್ದಾರೆ ಎಂಬ ಕುಹುಕಗಳೂ ವ್ಯಕ್ತವಾಗಿವೆ. ಇದೇ ಕಾರಣಕ್ಕೆ ಉಪೇಂದ್ರ ಅವರು ಎಲ್ಲರಿಗೂ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.
ಉಪೇಂದ್ರ ಅವರ ಪತ್ರ ಯಥಾವತ್ತು ಇಲ್ಲಿದೆ.
1 ನನ್ನನ್ನು ಬೇರೆಯವರ ಜೊತೆ ಹೋಲಿಸ ಬೇಡಿ – ಎಂದೆಂದೂ ನಾನು ಉಪೇಂದ್ರ.
- ಆತಂಕ ಪಡಬೇಡಿ ಇನ್ನೊಬ್ಬ ನಾಯಕ ಹುಟ್ಟಿಕೊಳ್ಳುತ್ತಿದ್ದಾನೆ ಎಂದು – ನಾನೆಂದೂ ನಾಯಕನಾಗುವುದಿಲ್ಲ.
- ಭಯ ಪಡಬೇಡಿ ನಿಮ್ಮ ಪಕ್ಷ, ನಾಯಕನಿಗೆ ಸಿಗುವ ಮತ ವಿಭಜನೆ ( split ) ಆಗುತ್ತದೆ ಎಂದು – ನಾಯಕನಾಗಬೇಕೆಂದು ಧೃಡ ಮನಸ್ಸು ಮಾಡಿರುವ ಪ್ರಜಾಪ್ರಭು ಯಾವ ನಾಯಕನಿಗೂ ಇನ್ನು ಮುಂದೆ ಮತ ನೀಡುವುದಿಲ್ಲ !
- ನಿಮಗೆ ನಿಮ್ಮ ಪಕ್ಷ, ನಾಯಕನಿಂದ ಸಿಗುವ ಮಾನಸಿಕ ನೆಮ್ಮದಿ, ಸಾಮಾಜಿಕ ಘನತೆ ರಾಜಕೀಯ ಭದ್ರತೆ, ಮತ್ತು ಆರ್ಥಿಕ (ಹಣ) ಆದಾಯ ಬೇರೆ ಯಾರೋ ಕಿತ್ತುಕೊಳ್ಳುತ್ತಾರೆಂಬ ಆತಂಕ ಬೇಡ, ಅದು ಕಡಿಮೆಯಾಗಬಾರದು ಇಮ್ಮಡಿ ( double) ಆಗಬೇಕೆನ್ನುವುದೇ ಪ್ರಜಾಕೀಯದ ಉದ್ದೇಶ.
- 20 % ನಾಯಕತ್ವದ, ಚಾಣಾಕ್ಷ ಜಾಣತನದ, ಹಣ, ತೋಳ್ಭಲದ ಪ್ರಭಲ ಗುಂಪಿನಲ್ಲಿದ್ದೇನೆಂದು ಹೆಮ್ಮೆ ಪಡಬೇಡಿ, 80 % ಸಾಮಾನ್ಯರು, ದೀನ ದಲಿತರು, ಅಮಾಯಕರ ಗುಂಪು ನಿಮ್ಮ ತಾಳಕ್ಕೆ ಕುಣಿಯುತ್ತಲೇ ಇರುವರು ಎಂಬ ಕಾಲ ಮುಗಿದಿದೆ.
- ನಾನು ಎಲೆಕ್ಷನ್ ನಲ್ಲಿ ನಿಲ್ಲುತ್ತೇನೆ ಎಂದುಕೊಂಡು ಇದೊಂದು ಕುಟುಂಬ ರಾಜಕಾರಣ ಎಂದಿರಿ, ನಾನು ನಿಲ್ಲಲ್ಲ ಎಂದಾಗ ಬೇರೆಯವರನ್ನ ಬಾವಿಗೆ ತಳ್ಳಿ ಆಳ ನೋಡ್ತೀರಾ ಎಂದಿರಿ ! ಇರಲಿ ಒಂದು ಸತ್ಯ ತಿಳಿಯಿರಿ ….
- 20% ” ನಾನು ” ಎನ್ನುವವರ ಜೊತೆ ನಿನ್ನನ್ನು ಬಿಟ್ಟು ಯಾರೂ ಇರುವುದಿಲ್ಲ, ನೀನು ಎನ್ನುವ 80% ಜನರ ಜೊತೆ ಅವನೇ (ದೇವರು) ಇರುತ್ತಾನೆ.
??? pic.twitter.com/EMt68fT4w5
— Upendra (@nimmaupendra) May 17, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ