50 ಕಟೌಟ್ ನಿಲ್ಲಿಸಿ ವಿಷ್ಣುಹಬ್ಬ ಸಂಭ್ರಮ
Team Udayavani, Sep 19, 2022, 11:25 AM IST
ಕೆಂಗೇರಿ: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 72ನೇ ಹುಟ್ಟುಹಬ್ಬವನ್ನು ಭಾನುವಾರ ಅವರ ಅಭಿಮಾನಿಗಳು ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಆಚರಿಸಿದರು. ವಿಷ್ಣು ಅವರ 72ನೇ ಜನ್ಮದಿನಾಚರಣೆ ಹಿನ್ನೆಲೆ ಅವರು ಅಭಿನಯದ ವಿಶೇಷ ಸಿನಿಮಾಗಳ ಐವತ್ತು ಕಟೌಟ್ಗಳನ್ನು ಅಭಿಮಾನ್ ಸ್ಟುಡಿಯೋ ಮುಂದೆ ನಿಲ್ಲಿಸಿದ್ದು ವಿಶೇಷವಾಗಿತ್ತು.
ಯಜಮಾನ, ಸಾಹಸ ಸಿಂಹ, ಕೃಷ್ಣ ನೀ ಬೇಗನೆ ಬಾ, ಜಯಸಿಂಹ, ವೀರಪ್ಪ ನಾಯಕ, ಜನನಾಯಕ, ದಾದ, ಕೃಷ್ಣ ರುಕ್ಮಿಣಿ, ಹೃದಯ ಗೀತೆ,ದೇವ, ಮತ್ತೆ ಹಾಡಿತು ಕೋಗಿಲೆ, ಲಯನ್ಜಗಪತಿ ರಾವ್, ರಾಜಧೀರಾಜಾ, ರಾಯರು ಬಂದರು ಮಾವನ ಮನೆಗೆ, ಮಹಾಕ್ಷತ್ರಿಯ,ಮುತ್ತಿನ ಹಾರ, ದಣಿ, ಜನನಿ ಜನ್ಮಭೂಮಿ, ಸೂರ್ಯ ವಂಶ, ಸೂರಪ್ಪ, ದಿಗ್ಗಜರು,ಕೋಟಿಗೊಬ್ಬ, ಸಿಂಹಾದ್ರಿಯ ಸಿಂಹ, ರಾಜನರಸಿಂಹ, ಆಪ್ತಮಿತ್ರ, ಸಾಹುಕಾರ, ವರ್ಷ, ಕರ್ನಾಟಕ ಸುಪುತ್ರ, ಹಲೋ ಡ್ಯಾಡಿ, ಅಪ್ಪಾಜಿ, ಸ್ಕೂಲ್ ಮಾಸ್ಟರ್, ಆಪ್ತರಕ್ಷಕ, ಚಿನ್ನದಂತ ಮಗ, ವಿಷ್ಣುಸೇನಾ, ನಾಗರಹಾವು, ಗಂಧದ ಗುಡಿ, ಶುಭ ಮಿಲನ ಚಿತ್ರಗಳ ಕಟೌಟ್ಗಳು ಅಭಿಮಾನ್ ಸ್ಟುಡಿಯೋದ ಮುಂದೆ ರಾರಾಜಿಸಿವೆ.
ಈ ಮೂಲಕ ವಿಷ್ಣುದಾದಾನ ಫ್ಯಾನ್ಸ್ ಹೊಸ ದಾಖಲೆ ಬರೆದಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಒಂದೇ ಸ್ಥಳದಲ್ಲಿ ಈ ರೀತಿ ಐವತ್ತು ಕಟೌಟ್ ನಿಲ್ಲಿಸಿದ್ದು ಇದೇ ಮೊದಲ ಬಾರಿಗೆ ಅನ್ನೋದು ವಿಶೇಷ.
ಕಟೌಟ್ಗಳನ್ನು ಕಂಡು ಪುಳಕಿತರಾದ ಅಭಿಮಾನಿಗಳು ಕುಟುಂಬ ಸಮೇತರಾಗಿ, ಸ್ನೇಹಿತರೊಂದಿಗೆ ಬಂದು ತಮಗಿಷ್ಟದ ವಿಷ್ಣು ಭಾವಚಿತ್ರದ ಎದುರು ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ವಿವಿಧ ಭಾಗಗಳಿಂದ ಬಂದಿದ್ದ ಅಭಿಮಾನಿಗಳು ಬೆಳಗ್ಗಿನಿಂದಲೇ ಸರತಿ ಸಾಲಿನಲ್ಲಿ ನಿಂತು ವಿಷ್ಣು ಸಮಾಧಿ ದರ್ಶನ ಪಡೆದು ಪುನೀತರಾದರು.
ಹುಟ್ಟುಹಬ್ಬಕ್ಕಾಗಿಯೇ ಅಭಿಮಾನಿಗಳು ಸ್ಟುಡಿಯೋ ಬಳಿ ರಕ್ತದಾನ, ಅನ್ನದಾನ, ನೇತ್ರದಾನ ಸೇರಿದಂತೆ ಹಲವು ಸಾಮಾಜಿಕ ಕೆಲಸಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆಯಿಂದಲೇ ಅಭಿಮಾನ ಸ್ಟುಡಿಯೋಗೆ ಆಗಮಿಸಿರುವ ಅಭಿಮಾನಿಗಳು ನೆಚ್ಚಿನ ನಟನಿಗೆ ಪೂಜೆ ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಸಾವಿರಾರು ಅಭಿಮಾನಿಗಳು ಸಮಾಧಿ ಬಳಿ ಜಮಾಯಿಸಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.
ಜನಜಂಗುಳಿ :
ಸುಮಾರು 40 ಸಾವಿರಕ್ಕೂ ಹೆಚ್ಚು ಮಂದಿ ಸ್ಟುಡಿಯೋಗೆ ಆಗಮಿಸಿದ ಹಿನ್ನೆಲೆಯಲ್ಲಿ ಜೆಎಸ್ ಎಸ್ ಕಾಲೇಜು ಆವರಣದಿಂದ ಬಿಜಿಎಸ್ಕಾಲೇಜು ಆವರಣದವರೆಗೆ ಬೆಳಗ್ಗಿನಿಂದ ಸಂಜೆಯವರೆಗೆ ಟ್ರಾμಕ್ ಜಾಮ್ ಉಂಟಾಗಿತ್ತು. ರಸ್ತೆಯುದ್ದಕ್ಕೂ ಬಾನೆತ್ತರಕ್ಕೆ ಚಾಚಿದಭಾವಚಿತ್ರಗಳು, ನಿಲ್ಲದ ಜಯಘೋಷ, ವಯಸ್ಸಿನ ಅಂತರವಿಲ್ಲದೆ ಸರತಿ ಸಾಲಿನಲ್ಲಿ ನಿಂತ ಅಭಿಮಾನಿಬಳಗ, ಕಿಲೋಮೀಟರ್ ವರೆಗೂ ವಾಹನಗಳು ಸಾಲುಗಟ್ಟಿದ್ದ ದೃಶ್ಯಗಳು ಕಂಡುಬಂದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ