ಸಹ ನಿರ್ದೇಶಕನ ಜತೆ ನಟಿ ಪರಾರಿ


Team Udayavani, Jan 8, 2020, 11:38 PM IST

saha-nirde

ಮಂಡ್ಯ: ಸಹ ನಿರ್ದೇಶಕನೊಂದಿಗೆ ನಟಿಯೊಬ್ಬಳು ಪರಾರಿಯಾಗಿದ್ದಾಳೆ. ಇದರಿಂದ ಮನನೊಂದ ನಟಿಯ ತಾಯಿ ಮತ್ತು ಅಜ್ಜಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಜ್ಜಿ ಮೃತಪಟ್ಟಿದ್ದಾರೆ.‌ ಚನ್ನಪಟ್ಟಣದ ಬಸವೇಶ್ವರ ನಗರ ನಿವಾಸಿಗಳಾದ ಚೆನ್ನಮ್ಮ (65) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಸವಿತಾ (45) ಅವರ ಸ್ಥಿತಿ ಗಂಭೀರವಾಗಿದ್ದು ಮಂಡ್ಯ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮೆಳ್ಳಹಳ್ಳಿ ಗ್ರಾಮದ ವಿಜಯಲಕ್ಷ್ಮೀ ಸಾಕು ತಂದೆ ಮಹದೇವಸ್ವಾಮಿ ಹಾಗೂ ತಾಯಿ ಸವಿತಾ (45) ಅವರೊಟ್ಟಿಗೆ ಚನ್ನಪಟ್ಟಣದ ಬಸವೇಶ್ವರ ನಗರದಲ್ಲಿ ವಾಸವಾಗಿದ್ದರು. ಕನ್ನಡದ ಹಲವು ಸಿನಿಮಾಗಳಲ್ಲಿ ಇವರು ಸಹ ನಟಿಯಾಗಿ ನಟಿಸಿದ್ದಾರೆ. ಪ್ರಸ್ತುತ “ತುಂಗಭದ್ರಾ’ ಎಂಬ ಸಿನಿಮಾದಲ್ಲಿ ವಿಜಯಲಕ್ಷ್ಮೀ ನಟಿಸುತ್ತಿದ್ದು, 10 ದಿನಗಳ ಕಾಲ ರಾಯಚೂರಿನಲ್ಲಿ ಸಿನಿಮಾ ಚಿತ್ರೀಕರಣ ನಡೆಯಿತು.

ಆ ವೇಳೆ, ವಿಜಯಲಕ್ಷ್ಮೀ ಹಾಗೂ ಸಹ ನಿರ್ದೇಶಕ ಆಂಜನಪ್ಪ ಇಬ್ಬರೂ ಜೊತೆಯಲ್ಲೇ ಇರುತ್ತಿದ್ದರು ಎಂದು ತಿಳಿದು ಬಂದಿದೆ. ಡಿ.15ರಂದು ವಿಜಯಲಕ್ಷ್ಮೀ, ನಿರ್ದೇಶಕ ಆಂಜನಪ್ಪ ಜೊತೆ ಮನೆ ಬಿಟ್ಟು ಹೋಗಿದ್ದರು. 15 ದಿನಗಳ ನಂತರ ಮನೆಗೆ ಆಗ ಮಿಸಿ, ಅಜ್ಜಿ ಹಾಗೂ ತಾಯಿ ಜೊತೆ ಮಾತನಾಡಿ ಇನ್ನು ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ. ಆಂಜನಪ್ಪನ ಜೊತೆ ಓಡಾಡುವುದಿಲ್ಲ ಎಂದು ಕ್ಷಮೆ ಕೋರಿದ್ದರು. ತಂದೆ ಮಹದೇವಸ್ವಾಮಿ ಮಗಳಿಗೆ ಬುದ್ಧಿ ಹೇಳಿದ್ದರು.

ಮತ್ತೆ ಪರಾರಿ: ಆದರೆ, ಜ.3ರಂದು ವಿಜಯಲಕ್ಷ್ಮೀ ಮತ್ತೆ ಆಂಜನಪ್ಪ ಜತೆ ಪರಾರಿಯಾಗಿದ್ದಾರೆ. ಇಬ್ಬರೂ ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ. ಆಂಜನಪ್ಪ ಸ್ವಗ್ರಾಮ ರಾಯಚೂರು ಜಿಲ್ಲೆ, ಮಾನ್ವಿ ತಾಲೂಕಿನ ಹಳ್ಳಿಹೊಸೂರಿನಲ್ಲಿಯೂ ಪತ್ತೆಯಿಲ್ಲ. ಈ ಮಧ್ಯೆ, ವಿಜಯಲಕ್ಷ್ಮೀಗೆ “ಪ್ರೇಮಮಹಲ್’, “ಜವಾರಿಲವ್‌’, “ಪ್ರೊಡಕ್ಷನ್‌ ನಂ.1′ ಚಿತ್ರಗಳ ನಿರ್ಮಾಪಕರು ಅಡ್ವಾನ್ಸ್ ನೀಡಿದ್ದರು.

ನಿರ್ಮಾಪಕರು ಮನೆ ಬಾಗಿಲಿಗೆ ಬಂದು ತಂದೆ ಹಾಗೂ ತಾಯಿಯನ್ನು ಹಣ ವಾಪಸ್‌ ನೀಡುವಂತೆ ಪೀಡಿಸುತ್ತಿದ್ದರು. ಇಲ್ಲದಿದ್ದರೆ ಮಗಳನ್ನು ಪತ್ತೆ ಮಾಡಿ ಸಿನಿಮಾ ಚಿತ್ರೀಕರಣಕ್ಕೆ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಇದರಿಂದ ಮನನೊಂದ ತಾಯಿ ಸವಿತಾ ಹಾಗೂ ಅಜ್ಜಿ ಚೆನ್ನಮ್ಮ, ಕಳೆದ ಸೋಮವಾರ ಮನೆಯಲ್ಲಿ ವಿಷ ಸೇವಿಸಿದ್ದರು. ವಿಷ ಸೇವನೆಗೂ ಮೊದಲು ನಮ್ಮ ಸಾವಿಗೆ ನಿರ್ದೇಶಕ ಆಂಜನಪ್ಪ ಕಾರಣ ಎಂದು ಸವಿತಾ ವಿಡಿಯೋ ಚಿತ್ರೀಕರಣ ಮಾಡಿದ್ದಾರೆಂದು ತಿಳಿದು ಬಂದಿದೆ.

ಇಬ್ಬರನ್ನೂ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿ ಸಲಾಯಿತು. ಆದರೆ, ಅಜ್ಜಿ ಮಾರ್ಗಮಧ್ಯೆ ಮೃತಪಟ್ಟರೆ, ಸವಿತಾ, ಮಿಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ವಿಜಯಲಕ್ಷ್ಮೀ ಶಿವರಾಜ್‌ಕುಮಾರ್‌ ನಟನೆಯ “ಆಯುಷ್ಮಾನ್‌ಭವ’, ಮಯೂರ್‌ ಪಟೇಲ್‌ ಅಭಿನಯದ “ರಾಜೀವ’ ಸೇರಿ ಅಂದಾಜು 16 ಸಿನಿಮಾಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.