ನನ್ನ ಹೆಸರಿಗೆ ಮಸಿ ಬಳಿಯಬೇಡಿ; ಪೂಜಾಗಾಂಧಿ ನುಡಿ


Team Udayavani, Mar 21, 2019, 8:56 AM IST

pooja-gandhi-20.jpg

ಅದೇನೊ ಗೊತ್ತಿಲ್ಲ. ಚಂದನವನದಲ್ಲಿ ಇತ್ತೀಚೆಗೆ ಒಬ್ಬರಾದ ನಂತರ ಒಬ್ಬರು ನಾಯಕ ನಟಿಯರು ವಿವಾದಗಳ ಮೂಲಕ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಇಬ್ಬರ ಹೊಡೆದಾಟ ಪ್ರಕರಣವೊಂದರಲ್ಲಿ ನಟಿ ರಾಗಿಣಿ ದ್ವಿವೇದಿ ಹೆಸರು ತಳುಕು ಹಾಕಿಕೊಂಡಿತ್ತು. ಅಂತೂ ರಾಗಿಣಿ ಒಂದಷ್ಟು ಸಮಜಾಯಿಷಿ ನೀಡಿ ಆ ಪ್ರಕರಣದಿಂದ ಜಾರಿಕೊಂಡಿದ್ದರು. 

ಅದರ ಬೆನ್ನಲ್ಲೇ ನಟಿ ಪೂಜಾ ಗಾಂಧಿ ವಿವಾದವೊಂದರಲ್ಲಿ ಸಿಲುಕಿದ್ದರು. ಬೆಂಗಳೂರಿನ ಪ್ರತಿಷ್ಟಿತ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ರೂಂ ಬಾಡಿಗೆ ತೆಗೆದುಕೊಂಡಿದ್ದ ಪೂಜಾ ಮತ್ತು ಅನಿಲ್‌ ಮೆಣಸಿನಕಾಯಿ ಎನ್ನುವವರು ಅದರ ಬಾಡಿಗೆ ಕಟ್ಟಿಲ್ಲ ಎಂದು ಹೋಟೆಲ್‌ನ ವ್ಯವಸ್ಥಾಪಕರು ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದರು. ಅದಾದ ಬಳಿಕ ಪೂಜಾಗಾಂಧಿ ಬಾಕಿಯಿರುವ ಬಿಲ್‌ ಮೊತ್ತವನ್ನು ಪಾವತಿಸಿದ್ದರೂ, ಪೂಜಾಗಾಂಧಿ ಹೆಸರು ಅನಿಲ್‌ ಮೆಣಸಿನಕಾಯಿ ಮತ್ತಿತರ ಜೊತೆ ತಳುಕು ಹಾಕಿಕೊಂಡು ಒಂದಷ್ಟು ಚರ್ಚೆಗೆ ಕಾರಣವಾಗಿತ್ತು. 

ಈ ಬಗ್ಗೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲೂ ಒಂದಷ್ಟು ಅಂತೆ-ಕಂತೆ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಉದಯವಾಣಿ ಯೊಂದಿಗೆ ಮಾತಿಗೆ ಸಿಕ್ಕ ಪೂಜಾ ಗಾಂಧಿ, ತಮ್ಮ ವಿರುದ್ದ ಕೇಳಿಬಂದಿರುವ ಆರೋಪಗಳಿಗೆ ಉತ್ತರಿಸಿದ್ದಾರೆ.

ನನಗೂ ಲಲಿತ್‌ ಅಶೋಕ್‌ ಹೋಟೆಲ್‌ಗ‌ೂ ಹಲವು ವರ್ಷಗಳಿಂದ ಒಡನಾಟವಿದೆ. ನನ್ನ ಪೊ›ಡಕ್ಷನ್‌ ಹೌಸ್‌ ಚಿತ್ರಗಳ ಚರ್ಚೆಗಾಗಿ ಆ ಹೋಟೆಲ್‌ನಲ್ಲಿ ರೂಂ ಬಾಡಿಗೆಗೆ ಪಡೆದಿರುವುದು ನಿಜ. ಸಿನಿಮಾಕ್ಕೆ ಸಂಬಂಧಿಸಿದ ಪ್ರಸ್‌ಮೀಟ್‌, ಅನೇಕ ಇವೆಂಟ್‌ಗಳನ್ನ ಅಲ್ಲಿ ಮಾಡಿದ್ದೇವೆ. 

ಇಲ್ಲಿಯವರೆಗೆ ಆ ಹೋಟೆಲ್‌ಗೆ ಸುಮಾರು 56 ಲಕ್ಷ ರೂ ಗಳಷ್ಟು ಬ್ಯುಸಿನೆಸ್‌ ಕೊಟ್ಟಿದ್ದೇವೆ. ಅದರಲ್ಲಿ 52 ಲಕ್ಷದಷ್ಟು ಬಿಲ್‌ ಕೂಡ ಕ್ಲಿಯರ್‌ ಮಾಡಿದ್ದೇನೆ. ಹೀಗಿರುವಾಗಲೇ ನನ್ನ ತಾಯಿಗೆ ಆರೋಗ್ಯ ಸರಿಯಿಲ್ಲದ ಕಾರಣ ನಾನು ಆ ಕಡೆ ಹೆಚ್ಚು ಗಮನ ಕೊಡಬೇಕಾಯಿತು. ಇದರ ನಡುವೆಯೇ ಸಂಹಾರಿಣಿ ಅನ್ನುವ ಸಿನಿಮಾದ ಶೂಟಿಂಗ್‌ ಕೂ ಇತ್ತು. 

ಹೀಗಾಗಿ ನಿಗಧಿತ ಸಮಯಕ್ಕೆ ಹೋಟೆಲ್‌ಗೆ ಹೋಗಲು ಆಗಿರಲಿಲ್ಲ. ಇಷ್ಟರಲ್ಲೆ ಮಿಸ್‌ ಕಮ್ಯುನಿಕೇಷನ್‌ನಿಂದಾಗಿ ಹೋಟೆಲ್‌ನವರು ಕಂಪ್ಲೇಂಟ್‌ ಮಾಡಿದ್ದರು. ನನಗೆ ವಿಷಯ ಗೊತ್ತಾಗುತ್ತಿದ್ದಂತೆ. ಕೂಡಲೇ ಬಾಕಿಯಿದ್ದ ಬಿಲ್‌ ಕೂಡ ಕ್ಲಿಯರ್‌ ಮಾಡಿದ್ದೇನೆ. ಆದ್ರೆ ಅದಾದ ನಂತರ ಕೆಲವು ಟಿವಿಗಳಲ್ಲಿ, ಸೋಷಿಯಲ್‌ ಮೀಡಿಯಾಗಳಲ್ಲಿ ನನ್ನ ಕ್ಯಾರೆಕ್ಟರ್‌ಗೆ ಮಸಿ ಬಳಿಯುವಂಥ ಸುದ್ದಿಗಳು ಪ್ರಸಾರವಾಗುತ್ತಿವೆ. ನನ್ನ ಹೆಸರಿನ ಜೊತೆ ಕೆಲವರ ಹೆಸರುಗಳನ್ನು ಸೇರಿಸಿ ಇಲ್ಲಸಲ್ಲದ ವರದಿ ಪ್ರಸಾರ ಮಾಡಲಾಗುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಿದ್ದರೂ ಅನಗತ್ಯವಾಗಿ ನನ್ನ ಹೆಸರನ್ನು ಪದೇ ಪದೇ ಬಳಸುತ್ತಿದ್ದಾರೆ. ದಯವಿಟ್ಟು ಹೀಗೆ ಮಾಡಬೇಡಿ ಎನ್ನುವುದು ಪೂಜಾ ಗಾಂಧಿ ಅಳಲು.

ಸದ್ಯ ನಾನು ನನ್ನಷ್ಟಕ್ಕೆ ನನ್ನ ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದೇನೆ. ಹೀಗೆ ಪದೇ ಪದೇ ನನ್ನನ್ನೇ ಏಕೆ ವಿವಾದಕ್ಕೆ ಗುರಿ ಮಾಡಲಾಗುತ್ತಿದೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ನನಗೆ ನನ್ನದೇ ಆದ ವೈಯಕ್ತಿಕ ಬದುಕಿದೆ. ಹೀಗೆ ವಿವಾದಗಳಾದರೆ ನನ್ನ ಜೀವನ ಏನಾಗಬೇಕು ಎಂದು ಪ್ರಶ್ನಿಸುತ್ತಾರೆ ಪೂಜಾ ಗಾಂಧಿ. 

ಇನ್ನು ಹೋಟೆಲ್‌ನವರು ಕೊಟ್ಟಿರುವ ದೂರಿನಲ್ಲಿ ಯಾವುದೇ ಸ್ಪಷ್ಟನೆ ಇಲ್ಲ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಅನಿಲ್‌ ಮೆಣಸಿನಕಾಯಿ, ಬಿಡಿಎ ಆಯುಕ್ತ ರಾಕೇಶ್‌ ಸಿಂಗ್‌ ಹೆಸರು ಜೊತೆಗೆ ತಮ್ಮ ಹೆಸರು ಪ್ರಸ್ತಾಪವಾಗಿರುವುದನ್ನೂ ಪೂಜಾ ನಿರಾಕರಿಸಿದ್ದಾರೆ.

ಇವೆಲ್ಲದರ ನಡುವೆ ಜೆಡಿಎಸ್‌ ಪರ ಪ್ರಚಾರಕ್ಕೆ ಭರ್ಜರಿ ತಯಾರಿ ನಡೆಸಿರುವ ಪೂಜಾ ಗಾಂಧಿ ಏಪ್ರಿಲ್1 ರಿಂದ ಶಿವಮೊಗ್ಗದಲ್ಲಿ ಮಧುಬಂಗಾರಪ್ಪ ಪರವಾಗಿ ಪ್ರಚಾರ ಕೈಗೊಳ್ಳಲಿ¨ªಾರೆ. ಬಳಿಕ ರಾಜ್ಯಾದ್ಯಂತ ನಡೆಯೋ ಜೆಡಿಎಸ್‌ ಯಾತ್ರೆಯಲ್ಲಿ ಪೂಜಾ ಪಾಲ್ಗೊಳ್ಳಲಿದ್ದಾರೆ. 

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.