ಮೇಕಪ್ ಕಲಾವಿದರಿಗೆ ನೆರವಿನ ಹಸ್ತ ಚಾಚಿದ ನಟಿ ಪ್ರಣೀತಾ
Team Udayavani, Jun 5, 2021, 3:03 PM IST
ಬೆಂಗಳೂರು : ಕೊರೊನಾ ಮಹಾಮಾರಿ ಸಾಕಷ್ಟು ಜನರಿಗೆ ತೊಂದರೆ ಕೊಟ್ಟಿದೆ. ಸಿನಿಮಾ ಕಲಾವಿದರು, ತಂತ್ರಜ್ಞರು, ಮೇಕಪ್ ಕಲಾವಿದರು ಲಾಕ್ ಡೌನ್ ನಿಂದಾಗಿ ತೊಂದರೆ ಅನುಭವಿಸುವಂತಾಗಿದೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸ್ಯಾಂಡಲ್ವುಡ್ ನಟಿ ಪ್ರಣೀತಾ ಅವರು ನೆರವಿನ ಹಸ್ತ ಚಾಚಿದ್ದಾರೆ.
ಇತ್ತೀಚಿಗಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಪ್ರಣೀತಾ, ತಮ್ಮ ಸಾಮಾಜಿಕ ಕಾರ್ಯ ಮುಂದುವರೆಸಿದ್ದಾರೆ. ಕನ್ನಡ ಚಿತ್ರರಂಗದ ಮೇಕಪ್ ಕಲಾವಿದರು ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದ್ದು, ಇದೀಗ ಸುಮಾರು 100 ಜನ ಕನ್ನಡ ಮೇಕಪ್ ಕಲಾವಿದರಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣಿ ಸೇರಿದಂತೆ ದಿನಸಿ ಕಿಟ್ ಒದಗಿಸಿ ಸಹಾಯ ಹಸ್ತ ಚಾಚಿದ್ದಾರೆ.
ನಟಿ ಪ್ರಣೀತಾ ಅವರ ಕಾರ್ಯಕ್ಕೆ ಮೇಕಪ್ ಕಲಾವಿದರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಕೇವಲ ಪ್ರಣೀತಾ ಮಾತ್ರವಲ್ಲದೆ ಹರ್ಷಿಕಾ ಪೂಣಚ್ಚ, ರಾಕಿಂಗ್ ಸ್ಟಾರ್ ಯಶ್, ರಿಯಲ್ ಸ್ಟಾರ್ ಉಪೇಂದ್ರ ಅವರು ಕನ್ನಡ ಚಿತ್ರರಂಗದ ಸಾವಿರಾರು ಕುಟುಂಬಗಳಿಗೆ ಸಹಾಯ ಮಾಡುತ್ತಿದ್ದಾರೆ.
ಯಶ್ ಅವರು ಸುಮಾರು 3000 ಕುಟುಂಬಗಳಿಗೆ ತಲಾ 5000 ರೂಪಾಯಿ ಧನಸಹಾಯ ಮಾಡಿದ್ದಾರೆ. ಉಪೇಂದ್ರ ಅವರು ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಎಲ್ಲರಿಗೂ ಹಂಚುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ