ಇಂದಿನ ಸ್ಥಿತಿಗೆ ಮೋದಿ ಅಜಾಗರೂಕತೆ ಕಾರಣ : ಚಿತ್ರನಟಿ ರಮ್ಯಾ
Team Udayavani, Apr 29, 2021, 3:22 PM IST
ಬೆಂಗಳೂರು: ದೇಶದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರವೆ ಕಾರಣ ಎಂದು ಚಿತ್ರನಟಿ ಹಾಗೂ ಮಾಜಿ ಸಂಸದೆ ರಮ್ಯಾ ಆರೋಪಿಸಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ಖಾತೆ ಇನ್ಸ್ಟಾಗ್ರಾಂನಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿರುವ ರಮ್ಯಾ, ‘ಕೋವಿಡ್ನಿಂದಾಗಿ ಉಂಟಾದ ಸಾವುಗಳನ್ನು ತಡೆಯಬಹುದಿತ್ತು. ಜನರು ಸಾಯಬೇಕೆಂದಿರಲಿಲ್ಲ. ಮೋದಿ ಅವರ ಅಜಾಗರೂಕತೆಯಿಂದ ಮತ್ತು ದುರಹಂಕಾರದಿಂದಾಗಿ ನೂರಾರು ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಸರ್ಕಾರವು ಯಾರ ಮಾತನ್ನೂ ಕೇಳುತ್ತಿಲ್ಲ. ಕೇವಲ ಅಧಿಕಾರ ದಾಹ. ಯಾರ ಬಗ್ಗೆಯೂ ಅನುಕಂಪವಿಲ್ಲ. ಇದು ಅಕ್ಷ್ಯಮ್ಯವಾಗಿದೆ ಎಂದು ಗುಡುಗಿದ್ದಾರೆ.
ಪ್ರಸ್ತುತ ಘಟನೆಗಳು ನನಗೆ ನೋವುಂಟು ಮಾಡಿದೆ ಮತ್ತು ಕೋಪ ಬರಿಸುತ್ತಿದೆ. ಈಗಿನ ಸ್ಥಿತಿಗೆ ಕೊರೊನಾ ಸೋಂಕು ಕಾರಣವಲ್ಲ ಬದಲಾಗಿ ಸರ್ಕಾರದ ಕಾರ್ಯವೈಖರಿಯೇ ಕಾರಣ. ಕಳೆದ ಬಾರಿ ಜಾರಿಗೊಳಿಸಿದ ಲಾಕ್ಡೌನ್, ಆರ್ಥಿಕತೆಯನ್ನು ದುರ್ಬಲಗೊಳಿಸಿದ್ದಲ್ಲದೇ, ಲಕ್ಷಾಂತರ ಜನರನ್ನು ಬಡತನ ಮತ್ತು ಹಸಿವಿನ ಕೂಪಕ್ಕೆ ನೂಕಿತ್ತು. ಆದರೆ ಕೋವಿಡ್ ನಿಯಂತ್ರಣ ಸಾಧ್ಯವಾಗಿರಲಿಲ್ಲ. ಇವರೆಡರ ಪರಿಣಾಮದ ನಡುವೆ ಭಾರತವು ಸಿಲುಕಿದ್ದು, ಅತ್ತ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ, ಇತ್ತ ಆರ್ಥಿಕತೆಯೂ ಕುಸಿದಿದೆ. ನಿರುದ್ಯೋಗ ಸಮಸ್ಯೆ, ಜನಜೀವನವೇ ಅಸ್ತವ್ಯಸ್ಥವಾಗಿದೆ. ಬಿಜೆಪಿ ಬೆಂಬಲಿಗರು ಬುದ್ಧಿಹೀನರಂತೆ ಕಾನೂನು ಹಾಗೂ ಹಕ್ಕುಗಳ ಬಗ್ಗೆ ಅಜ್ಞಾನಿಗಳಾಗಿದ್ದಾರೆ’ಎಂದು ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ