Vaishnavi Gowda: ಸಿನಿಮಾ-ಸೀರಿಯಲ್‌ ಎಂಬ ಭೇದ-ಭಾವ ನನಗಿಲ್ಲ…: ‘ಸೀತಾರಾಮ’ ನಟಿಯ ಮಾತು


Team Udayavani, Aug 28, 2023, 2:38 PM IST

Actress Vaishnavi Gowda spoke about her serial life

ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ವೈಷ್ಣವಿ ಗೌಡ ಈಗ “ಸೀತಾರಾಮ’ ಎಂಬ ಹೊಸ ಧಾರಾವಾಹಿಗೆ ನಾಯಕಿಯಾಗಿದ್ದಾರೆ. ಸದ್ಯ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಧಾರಾವಾಹಿ ವೈಷ್ಣವಿಗೆ ಒಳ್ಳೆಯ ಹೆಸರು ತಂದುಕೊಡುತ್ತಿದೆ. ಸದ್ಯ ಪ್ರೇಕ್ಷಕರ ಮನಗೆಲ್ಲುತ್ತಿರುವ ಈ ಧಾರಾವಾಹಿ ಕುರಿತು ವೈಷ್ಣವಿ ಮಾತನಾಡಿದ್ದಾರೆ

“ಸೀತಾರಾಮ’ ಸೀರಿಯಲ್‌ಗೆ ಪ್ರೇಕ್ಷಕರ ರೆಸ್ಪಾನ್ಸ್‌ ಹೇಗಿದೆ?

ತುಂಬಾ ಚೆನ್ನಾಗಿದೆ. ದಿನದಿಂದ ದಿನಕ್ಕೆ “ಸೀತಾರಾಮ’ ಧಾರಾವಾಹಿಯನ್ನು ನೋಡುತ್ತಿರುವ ಪ್ರೇಕ್ಷಕರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಅದರಲ್ಲೂ ಫ್ಯಾಮಿಲಿ ಆಡಿಯನ್ಸ್‌ಗೆ ಧಾರಾವಾಹಿ ಇಷ್ಟವಾಗುತ್ತಿದೆ. ಮನೆಮಂದಿ ಎಲ್ಲರೂ ಒಟ್ಟಾಗಿ ಕೂತು ನೋಡುವಂತಹ ಕಥೆ “ಸೀತಾರಾಮ’ದಲ್ಲಿದೆ.

ಸೀರಿಯಲ್‌ನಲ್ಲಿ “ಸೀತಾ’ ಪಾತ್ರವನ್ನು ನೋಡಿದವರು ಏನಂತಿದ್ದಾರೆ?

ಮೊದಲಿನಿಂದಲೂ ಸೀರಿಯಲ್‌ನಲ್ಲಿ ನನಗೆ ಒಂದಕ್ಕಿಂತ ಒಂದು ಒಳ್ಳೆಯ ಪಾತ್ರಗಳು ಸಿಗುತ್ತಿವೆ. “ಸೀತಾರಾಮ’ ಸೀರಿಯಲ್‌ನಲ್ಲೂ ಅಂಥದ್ದೇ ಒಂದು ಒಳ್ಳೆಯ “ಸೀತಾ’ ಪಾತ್ರ ಸಿಕ್ಕಿದೆ. ನನ್ನ ಪಾತ್ರಕ್ಕೆ ಕೂಡ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಆಡಿಯನ್ಸ್‌, ಫ್ರೆಂಡ್ಸ್‌-ಫ್ಯಾಮಿಲಿ ಎಲ್ಲರೂ ನನ್ನ ಪಾತ್ರ ಮೆಚ್ಚಿಕೊಳ್ಳುತ್ತಿದ್ದಾರೆ.

ಸಿನಿಮಾಕ್ಕೆ ಬಂದು ಮತ್ತೆ ಸೀರಿಯಲ್‌ನತ್ತ ಹೋಗಲು ಕಾರಣ?

ನನಗೆ ಸಿನಿಮಾ ಅಥವಾ ಸೀರಿಯಲ್‌ ಅಂಥ ಯಾವುದೇ ಬೇಧ-ಭಾವವಿಲ್ಲ. ನಾನೊಬ್ಬಳು ಕಲಾವಿದೆ ಅಷ್ಟೇ. ಒಬ್ಬ ಕಲಾವಿದೆಯಾಗಿ ನನಗೆ ಸಿನಿಮಾದಲ್ಲಿ ಇಷ್ಟವಾಗುವಂಥ ಒಳ್ಳೆಯ ಪಾತ್ರ ಸಿಕ್ಕರೂ ಮಾಡುತ್ತೇನೆ, ಸೀರಿಯಲ್‌ನಲ್ಲಿಸಿಕ್ಕರೂ ಮಾಡುತ್ತೇನೆ. ಎರಡರ ನಡುವೆ ನನಗೇಗೂ ವ್ಯತ್ಯಾಸವಿಲ್ಲ.

ಇತ್ತೀಚೆಗೆ ಹೊಸ ಸಿನಿಮಾವೊಂದಕ್ಕೆ ನಾಯಕಿಯಾಗಿದ್ದೀರಿ?

ಹೌದು, “ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಎಂಬ ಹೊಸ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದೇನೆ. ಈ ಸಿನಿಮಾದಲ್ಲಿ ಕವಿತಾ ಎಂಬ ಪಾತ್ರದಲ್ಲಿ ಅಭಿನಯಿಸು ¤ದ್ದೇನೆ. ಇದೇ ವರಮಹಾಲಕ್ಷ್ಮೀ ಹಬ್ಬದಂದು ಈ ಸಿನಿಮಾದ ಮುಹೂರ್ತ ನೆರವೇರಿತು. ಸದ್ಯ ಈ ಸಿನಿಮಾದ ಶೂಟಿಂಗ್‌ ಶುರುವಾಗಿದೆ.

ಇಷ್ಟು ವರ್ಷಗಳ ನಟನಾ ಬದುಕು ಏನನಿಸುತ್ತಿದೆ?

ತುಂಬಾ ಚೆನ್ನಾಗಿದೆ. ಜನರು ಗುರುತಿಸಿ ಮಾತನಾಡಿಸುವಂಥ ಸಾಕಷ್ಟು ಒಳ್ಳೆಯ ಪಾತ್ರಗಳು ಸಿಕ್ಕಿದೆ. ಈಗಲೂ ಒಳ್ಳೆಯ ಪಾತ್ರಗಳು ಹುಡುಕಿಕೊಂಡು ಬರುತ್ತಿವೆ. ನಟಿಯಾಗಿ ನನಗೆ ಈ ಪ್ರಯಾಣ ಖುಷಿಕೊಟ್ಟಿದೆ. ನಾನು ಕೂಡ ನನ್ನ ಕೆಲಸವನ್ನು ತುಂಬ ಪ್ರೀತಿಯಿಂದ ಎಂಜಾಯ್‌ ಮಾಡಿಕೊಂಡು ಮಾಡುತ್ತಿದ್ದೇನೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.