ನಾಗಮಂಡಲದ ನಟಿ ವಿಜಯಲಕ್ಷ್ಮೀ ಆತ್ಮಹತ್ಯೆ ಯತ್ನ ; ಲೈವ್ ವಿಡಿಯೋದಲ್ಲಿ ನಟಿ ಹೇಳಿದ್ದೇನು?


Team Udayavani, Jul 26, 2020, 9:50 PM IST

ನಾಗಮಂಡಲದ ನಟಿ ವಿಜಯಲಕ್ಷ್ಮೀ ಆತ್ಮಹತ್ಯೆ ಯತ್ನ ; ಲೈವ್ ವಿಡಿಯೋದಲ್ಲಿ ನಟಿ ಹೇಳಿದ್ದೇನು?

ಚೆನ್ನೈ: ನಾಗಮಂಡಲ, ಸೂರ್ಯವಂಶ ಸೇರಿದಂತೆ ಹಲವಾರು ಹಿಟ್ ಚಿತ್ರಗಳಲ್ಲಿ ನಟಿಸಿದ್ದ ಬಹುಭಾಷಾ ನಟಿ ವಿಜಯಲಕ್ಷ್ಮೀ ಅವರು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ತಾನು ಬಿಪಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ನಟಿ ವಿಜಯಲಕ್ಷ್ಮೀ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ. ಮತ್ತು ಈ ವಿಡಿಯೋವನ್ನು ತನ್ನ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ತನ್ನ ಇಂದಿನ ಈ ಸ್ಥಿತಿಗೆ ಸೀಮನ್ ಹಾಗೂ ಹರಿನಾಡರ್ ಅವರೇ ಕಾರಣವೆಂದೂ ಮತ್ತು ನನ್ನ ಸಾವಿಗೂ ಅವರಿಬ್ಬರೇ ಕಾರಣರಾಗುತ್ತಾರೆ ಎಂದು ನಟಿ ಈ ವಿಡಿಯೋದಲ್ಲಿ ನೇರ ಆರೋಪವನ್ನು ಮಾಡಿದ್ದಾರೆ.

‘ನನ್ನ ತಾಯಿ ಹಾಗೂ ಸಹೋದರಿಗೋಸ್ಕರವೇ ನಾನಿಷ್ಟು ದಿನ ಜೀವಂತವಾಗಿದ್ದೆ. ಆದರೆ ಇನ್ನು ನನ್ನಿಂದ ಯಾವುದೇ ರೀತಿಯಲ್ಲಿ ಇದನ್ನೆಲ್ಲಾ ಸಹಿಸಿಕೊಳ್ಳಲು ಸಾಧ್ಯವಿಲ್ಲ. ನಾನು ಈಗಾಗಲೇ ಮೂರು ಮಾತ್ರೆಗಳನ್ನು ಸೇವಿಸಿದ್ದೇನೆ, ನನ್ನ ಬಿಪಿ ಲೋ ಆಗುತ್ತಿದೆ, ನಾನು ಕನ್ನಡದ ನಟಿ ಎಂಬ ಕಾರಣಕ್ಕೆ ನಟ ಮತ್ತು ರಾಜಕಾರಣಿಯಾಗಿರುವ ಸೀಮನ್ ಮತ್ತು ಹರಿನಾಡರ್ ನನ್ನ ಬದುಕನ್ನೇ ಹಾಳು ಮಾಡಿದ್ದಾರೆ, ನಾನು ಸತ್ತರೆ ಅವರಿಬ್ಬರನ್ನು ಸುಮ್ಮನೆ ಬಿಡಬಾರದು..’ ಎಂದು ವಿಜಯಲಕ್ಷ್ಮೀ ಅವರು ತಮಿಳು ಭಾಷೆಯಲ್ಲಿ ಮಾಡಿರುವ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಜಯಲಕ್ಷ್ಮೀ ಅವರನ್ನು ಅವರ ಕುಟುಂಬದವರು ಹಾಗೂ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯಕ್ಕೆ ನಟಿ ಪ್ರಾಣಾಪಾಯದಿಂದ ಪಾರಾಗಿದ್ದು ಅವರ ದೇಹಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಸಾಕಷ್ಟು ಸಮಯಗಳಿಂದ ಖಿನ್ನತೆಯಿಂದ ಬಳಲುತ್ತಿದ್ದ ನಟಿ ವಿಜಯಲಕ್ಷ್ಮೀ ಅವರು ಒತ್ತಡವನ್ನು ತಾಳಲಾಗದೇ ಈ ನಿರ್ಧಾರಕ್ಕೆ ಬಂದಿರಬಹುದೆಂದು ಅಭಿಪ್ರಾಯ ವ್ಯಕ್ತವಾಗಿದೆ.


ಚೆನ್ನೈನಲ್ಲಿ ಜನಿಸಿದ ವಿಜಯಲಕ್ಷ್ಮೀ ಅವರು ತಮ್ಮ ವಿದ್ಯಾಭ್ಯಾಸವನ್ನೆಲ್ಲಾ ಕರ್ನಾಟಕದಲ್ಲೇ ಪೂರೈಸಿದ್ದರು. ನಿರ್ದೇಶಕ ನಾಗಾಭರಣ ಅವರು ನಿರ್ದೇಶಿಸಿದ್ದ ಪ್ರಕಾಶ್ ರೈ ಅಭಿನಯದ ‘ನಾಗಮಂಡಲ’ ಚಿತ್ರದ ಮೂಲಕ ವಿಜಯಲಕ್ಷ್ಮಿ ಅವರು ಚಿತ್ರರಂಗವನ್ನು ಪ್ರವೇಶಿದ್ದರು.

ಬಳಿಕ ಅವರು ಸೂರ್ಯವಂಶ, ಜೋಡಿ ಹಕ್ಕಿ, ನಂ.1, ಕನಕಾಂಬರಿ, ಡ್ಯಾಡಿ ನಂ.1 ಸೇರಿದಂತೆ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ನಟಿ ವಿಜಯಲಕ್ಷ್ಮೀ ಅವರು 2006ರಲ್ಲಿಯೂ ಒಮ್ಮೆ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದರು. ತಾನು ಬಯಸಿದ್ದ ಸಹಾಯಕ ನಿರ್ದೇಶಕರೊಬ್ಬರಿಂದ ಕಿರುಕುಳಕ್ಕೊಳಗಾದ ಕಾರಣದಿಂದ ಅವರು ಅಂದು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಅಂದೂ ಸಹ ಸಕಾಲದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರಿಂದ ಈ ನಟಿ ಬದುಕುಳಿದಿದ್ದರು.

ಆ ಬಳಿಕ ತಮಿಳು ನಟ ಹಾಗೂ ರಾಜಕಾರಣಿ ಸೀಮನ್ ಅವರ ಜೊತೆ ವಿಜಯಲಕ್ಷ್ಮೀ ಒಡನಾಟ ಇರಿಸಿಕೊಂಡಿದ್ದರು. ಸುಮಾರು ಮೂರು ವರ್ಷ ಜೊತೆಯಾಗಿದ್ದ ಈ ಜೋಡಿ ಬಳಿಕ ಬೇರ್ಪಟ್ಟಿತ್ತು. ಇದೀಗ ತನ್ನ ಆತ್ಮಹತ್ಯೆಯ ನಿರ್ಧಾರಕ್ಕೆ ಸೀಮನ್ ಅವರೇ ಕಾರಣ ಎಂದು ನಟಿ ದೂರಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.