ಆದಿಲಕ್ಷ್ಮೀ ಟ್ರೇಲರ್ ಬಂತು
ರಾಧಿಕಾ ಚಿತ್ರಕ್ಕೆ ಯಶ್ ಸಾಥ್
Team Udayavani, Jul 14, 2019, 3:02 AM IST
“ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರದ ನಂತರ ನಟಿ ರಾಧಿಕಾ ಪಂಡಿತ್ ಅಭಿನಯಿಸಿರುವ “ಆದಿಲಕ್ಷ್ಮಿಪುರಾಣ’ ಚಿತ್ರ ತೆರೆಗೆ ಬರೋದಕ್ಕೆ ಕೌಂಟ್ಡೌನ್ ಶುರುವಾಗಿದೆ. “ಆದಿಲಕ್ಷ್ಮಿಪುರಾಣ’ ಚಿತ್ರ ಇದೇ ಜುಲೈ 19ರಂದು ತೆರೆಗೆ ಬರುತ್ತಿದ್ದು, ಸುಮಾರು ಎರಡೂವರೆ ವರ್ಷಗಳ ನಂತರ ರಾಧಿಕಾ ಪಂಡಿತ್ ಅವರನ್ನು “ಆದಿಲಕ್ಷ್ಮಿ’ ಗೆಟಪ್ನಲ್ಲಿ ತೆರೆಮೇಲೆ ನೋಡಲು ರಾಕಿಂಗ್ ಫ್ಯಾನ್ಸ್ ಕೂಡ ಕಾತುರರಾಗಿದ್ದಾರೆ.
ಮತ್ತೂಂದೆಡೆ “ಆದಿಲಕ್ಷ್ಮಿಪುರಾಣ’ವನ್ನು ಪ್ರೇಕ್ಷಕರಿಗೆ ತಲುಪಿಸುವ ಅಂತಿಮ ಹಂತದ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ, ಭರ್ಜರಿಯಾಗಿ ಚಿತ್ರದ ಪ್ರಮೋಶನ್ ಕೆಲಸಗಳನ್ನು ನಡೆಸುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್, ಟೀಸರ್ ನೋಡುಗರ ಗಮನ ಸೆಳೆಯಲು ಯಶಸ್ವಿಯಾಗಿವೆ. ಕಳೆದ ಜೂನ್ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಿದ್ದ “ಆದಿಲಕ್ಷ್ಮಿಪುರಾಣ’ ಚಿತ್ರದ ಹಾಡುಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಇದೇ ಜೋಶ್ನಲ್ಲಿ ಚಿತ್ರತಂಡ ಇದೀಗ ಚಿತ್ರದ ಟ್ರೇಲರ್ ಅನ್ನು ಬಿಡುಗಡೆಗೊಳಿಸಿದೆ.
ಶುಕ್ರವಾರ “ಆದಿಲಕ್ಷ್ಮಿಪುರಾಣ’ ಚಿತ್ರದ ಮೊದಲ ಟ್ರೇಲರ್ ಬಿಡುಗಡೆಯಾಗಿದೆ. ನಟ ರಾಕಿಂಗ್ಸ್ಟಾರ್ ಯಶ್, ಮದುವೆಯ ಬಳಿಕ ಪತ್ನಿ ರಾಧಿಕಾ ಪಂಡಿತ್ ಅಭಿನಯಿಸಿರುವ ಮೊದಲ ಚಿತ್ರದ ಟ್ರೇಲರ್ ಅನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಸದ್ಯ ಬಿಡುಗಡೆಯಾಗಿರುವ “ಆದಿಲಕ್ಷ್ಮಿಪುರಾಣ’ ಟ್ರೇಲರ್ಗೆ ಸೋಶಿಯಲ್ ಮೀಡಿಯಾಗಳಲ್ಲೂ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.
ಒಟ್ಟಾರೆ ಲಾಂಗ್ ಗ್ಯಾಪ್ ಬಳಿಕ “ಆದಿ ಲಕ್ಷ್ಮಿಪುರಾಣ’ದ ಮೂಲಕ ರೀ-ಎಂಟ್ರಿ ಕೊಡುತ್ತಿರುವ ರಾಧಿಕಾ ಪಂಡಿತ್, ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗಲಿದ್ದಾರೆ ಅನ್ನೋದು ಇನ್ನೊಂದು ವಾರದಲ್ಲಿ ಗೊತ್ತಾಗಲಿದೆ. “ಆದಿಲಕ್ಷ್ಮಿಪುರಾಣ’ ಚಿತ್ರದಲ್ಲಿ ರಾಧಿಕಾ ಪಂಡಿತ್ಗೆ ನಾಯಕನಾಗಿ ನಿರೂಪ್ ಭಂಡಾರಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ತಾರಾ, ಸುಚೇಂದ್ರ ಪ್ರಸಾದ್ ಮೊದಲಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ರಾಕ್ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ “ಆದಿಲಕ್ಷ್ಮಿಪುರಾಣ’ ಚಿತ್ರಕ್ಕೆ ಚಿತ್ರಕ್ಕೆ ತಮಿಳಿನ ನಿರ್ದೇಶಕಿ ಪ್ರಿಯಾ ಕಥೆ, ಚಿತ್ರಕಥೆ ಬರೆದು ಆಕ್ಷನ್-ಕಟ್ ಹೇಳಿದ್ದಾರೆ. ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ, ಅನೂಪ್ ಭಂಡಾರಿ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಪ್ರೀತಾ ಜಯರಾಮನ್ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ