ಅದಿತಿ ಕೈಯಲ್ಲಿ “ಓಲ್ಡ್‌ ಮಾಂಕ್‌’

ಓಲ್ಡೇಜ್‌ ಲವರ್ಸ್‌ಗೆ ಆಗ್ತಾರೆ ಸೇತುವೆ!

Team Udayavani, Jan 29, 2020, 7:03 AM IST

aditi

ಶ್ರೀನಿ ಅಭಿನಯದ “ಓಲ್ಡ್‌ ಮಾಂಕ್‌’ ಚಿತ್ರತಂಡಕ್ಕೆ ಇದೀಗ ಅದಿತಿ ಪ್ರಭುದೇವ ಹೊಸದಾಗಿ ಎಂಟ್ರಿಯಾಗಿದ್ದಾರೆ. ಹೌದು, ಕಳೆದ ಕೆಲ ತಿಂಗಳಿನಿಂದ “ಒಲ್ಡ್‌ ಮಾಂಕ್‌’ ಚಿತ್ರಕ್ಕೆ ನಾಯಕಿಯ ಹುಡುಕಾಟದಲ್ಲಿದ್ದ ಚಿತ್ರತಂಡ, ಇದೀಗ ಚಿತ್ರಕ್ಕೆ ಅದಿತಿ ಪ್ರಭುದೇವ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಶ್ರೀನಿ, “ನಮ್ಮ ಸಿನಿಮಾದ ಹೀರೋಯಿನ್‌ ಕ್ಯಾರೆಕ್ಟರ್‌ಗಾಗಿ ಹುಡುಕಾಟ ನಡೆಸಿದ್ದೆವು.

ಇದೀಗ ಅದಿತಿ ಹೀರೋಯಿನ್‌ ಆಗಿ ನಮ್ಮ ಟೀಮ್‌ ಸೇರಿಕೊಳ್ಳುತ್ತಿದ್ದಾರೆ. ಹೀರೋಯಿನ್‌ ಪಾತ್ರಕ್ಕೆ ತುಂಬ ಲವಲವಿಕೆಯಿಂದಿರುವ ಮತ್ತು ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವವರು ಬೇಕಾಗಿತ್ತು. ನಮ್ಮ ಸಿನಿಮಾದ ಆ ಕ್ಯಾರೆಕ್ಟರ್‌ಗೆ ಅದಿತಿ ಹೊಂದಾಣಿಕೆಯಾಗುತ್ತಿದ್ದರಿಂದ ಅವರನ್ನೇ ಹೀರೋಯಿನ್‌ ಆಗಿ ಸೆಲೆಕ್ಟ್ ಮಾಡಿ ಕೊಂಡಿದ್ದೇವೆ. ಅದಿತಿ ಕೂಡ ತುಂಬಾ ಖುಷಿಯಿಂದ ಈ ಕ್ಯಾರೆಕ್ಟರ್‌ ಒಪ್ಪಿಕೊಂಡಿದ್ದಾರೆ.

ಸಿನಿಮಾದಲ್ಲಿ ಓಲ್ಡ್‌ ಏಜ್‌ ಲವರ್ ಹೋಮ್‌ ನಡೆಸುತ್ತಿರುವ ಹೀರೋಯಿನ್‌, ಅಲ್ಲಿರುವ ವಯಸ್ಸಾದವರಿಗೆ ತಮ್ಮ ಹಳೆಯ ಗರ್ಲ್ಸ್‌ ಫ್ರೆಂಡ್ಸ್‌ ಅಥವಾ ಬಾಯ್‌ ಫ್ರೆಂಡ್ಸ್‌ನ ಹುಡುಕಿ ಅವರನ್ನು ಮೀಟ್‌ ಮಾಡಿಸುವ ಕೆಲಸ ಮಾಡುತ್ತಿರುತ್ತಾಳೆ. ಯಾವಾಗಲೂ ಎಲ್ಲರಿಗೂ ಅಚ್ಚುಮೆಚ್ಚಾಗಿರುವ, ಲೈವ್ಲಿಯಾಗಿರುವಂಥ ಪಾತ್ರವದು. ಇದನ್ನು ಅದಿತಿ ತುಂಬ ಚೆನ್ನಾಗಿ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ’ ಎನ್ನುತ್ತಾರೆ ಶ್ರೀನಿ.

ಫೆಬ್ರವರಿಯಿಂದ ಅದಿತಿ “ಓಲ್ಡ್‌ ಮಾಂಕ್‌’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದು, ಬೆಂಗಳೂರು ಮತ್ತು ಮೈಸೂರು ಚಿತ್ರದ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ. ಚಿತ್ರದಲ್ಲಿ ಹಿರಿಯ ನಟ ಕಂ ನಿರ್ದೇಶಕ ಎಸ್‌. ನಾರಾಯಣ್‌ ನಾಯಕನ ತಂದೆಯ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಂತೆ.

ಇನ್ನು “ಓಲ್ಡ್‌ ಮಾಂಕ್‌’ ಚಿತ್ರದಲ್ಲಿ ಅಭಿನಯಿಸಲು, ಕಳೆದ ಎರಡು ತಿಂಗಳಿನಿಂದ ಕರ್ನಾಟಕ ರಾಜ್ಯದಾದ್ಯಂತ ಹೊಸ ಪ್ರತಿಭೆಗಳಿಗಾಗಿ ಆಡಿಷನ್‌ ನಡೆಸಿದ್ದ ಚಿತ್ರತಂಡ, ಚಿತ್ರದ ಬಹುತೇಕ ಪಾತ್ರಗಳಿಗೆ ಸರಿ ಹೊಂದುವಂಥ ಅನೇಕ ಹೊಸ ಪ್ರತಿಭೆಗಳನ್ನು ಆಯ್ಕೆ ಮಾಡಿಕೊಂಡಿದೆಯಂತೆ. ಅಂದಹಾಗೆ, ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಜುಲೈ ವೇಳೆಗೆ “ಓಲ್ಡ್‌ ಮಾಂಕ್‌’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.