ಆನ ಆದ ಅದಿತಿ : ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌


Team Udayavani, Oct 26, 2020, 9:20 AM IST

cinema-tdy-1

ನಟಿ ಅದಿತಿ ಪ್ರಭುದೇವ ನಾಯಕಿಯಾಗಿ ಭಾನುವಾರ, ಅಕ್ಟೋಬರ್‌ 25, 2020 ಅಭಿನಯಿಸುತ್ತಿರುವ ಹೊಸಚಿತ್ರದ ಟೈಟಲ್‌ ಅನೌನ್ಸ್‌ ಆಗಿದೆ. ಮನೋಜ್‌ ಪಿ. ನಡಲುಮನೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ “ಆನ’ ಎಂದು ಹೆಸರಿಡಲಾಗಿದೆ.

ದಸರಾ ಹಬ್ಬದ ಸಂದರ್ಭದಲ್ಲಿ ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಅದಿತಿ ಸೂಪರ್‌ ವುಮೆನ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಯುಕೆ ಪ್ರೋಡಕ್ಷನ್ಸ್‌’ ಲಾಂಛನದಲ್ಲಿ ಶ್ರೀಮತಿ ಪೂಜಾ ವಸಂತಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಈ ಹಿಂದೆ ಕೆಲ ಕಿರುಚಿತ್ರ ಮತ್ತು ಟೆಲಿ ಫಿಲಂಗಳನ್ನು ನಿರ್ದೇಶನ ಮಾಡಿದಅನುಭವ ಹೊಂದಿರುವ ನಿರ್ದೇಶಕ ಮನೋಜ್‌ ಪಿ. ನಡಲುಮನೆ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ. ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಮಾತನಾಡುವ ಮನೋಜ್‌, “ಲಾಕ್‌ ಡೌನ್‌ ಸಮಯದಲ್ಲಿ ಹೊಳೆದ ಕಥೆ ಇದು. ಸದ್ಯ ಇಡೀ ಭಾರತದಲ್ಲಿ ಲೇಡಿ ಸೂಪರ್‌ ಹೀರೋ ಪರಿಕಲ್ಪನೆಯಲ್ಲಿ ಯಾವುದೇ ಸಿನಿಮಾ ಬಂದಿಲ್ಲ. ಅದನ್ನೇ ಗಮನದಲ್ಲಿಟ್ಟುಕೊಂಡು ಈ ಕಥೆ ಸಿದ್ಧಪಡಿಸಿಕೊಂಡು, ಸಿನಿಮಾ ಆರಂಭಿಸಿದ್ದೆ. ಇನ್ನೆರಡು ದಿನದ ಕ್ಲೈಮ್ಯಾಕ್ಸ್‌ ಶೂಟಿಂಗ್‌ ಬಾಕಿ ಇದೆ. ಚಿತ್ರದ ಕೊನೆಯ 20 ನಿಮಿಷಗಳು ನೋಡುಗರನ್ನು ಫ್ಯಾಂಟಸಿ ಲೋಕಕ್ಕೆ ಕರೆದೊಯ್ಯುವುದು ಪಕ್ಕಾ. ಹಾರರ್‌ ಶೈಲಿಯ ಅಂಶಗಳೂ ಈ ಸಿನಿಮಾದಲ್ಲಿವೆ.

ತಾಂತ್ರಿಕವಾಗಿ ಇಡೀ ಸಿನಿಮಾ ಶ್ರೀಮಂತವಾಗಿ ಮೂಡಿಬಂದಿದೆ. ಇನ್ನೊಂದು ವಿಶೇಷ ಏನೆಂದರೆ, ಈ ಸಿನಿಮಾ ಮುಂದಿನ ದಿನಗಳಲ್ಲಿ ಚಾಪ್ಟರ್‌ ಗಳಾಗಿಯೂ ಸಿದ್ಧವಾಗಲಿದೆ’ ಎಂದು ಮಾಹಿತಿ ನೀಡಿದರು. ಇನ್ನು ತಮ್ಮ ಪಾತ್ರದ ಬಗ್ಗೆ ಹೇಳಿಕೊಳ್ಳುವ ಅದಿತಿ, “ತುಂಬ ಇಷ್ಟಪಟ್ಟು ಮತ್ತು ತುಂಬ ಕಷ್ಟಪಟ್ಟು ಮಾಡಿದ ಸಿನಿಮಾ  ಇದು. ಇಂಥ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ. ಕಥೆ ಕೇಳಿ ಒಂದೇ ಸಲಕ್ಕೆ ನಟಿಸಲು ಒಪ್ಪಿಕೊಂಡೆ. ಚಿತ್ರದ ಬಹುಪಾಲು ಶೂಟಿಂಗ್‌ ರಾತ್ರಿ ಹೊತ್ತಿನಲ್ಲಿಯೇ ನಡೆದಿದೆ. ಇನ್ನು ಕೆಲ ಭಾಗದ ಚಿತ್ರೀಕರಣ ಬಾಕಿ ಇದೆ. ನನ್ನ ಸಿನಿಮಾ ಕರಿಯರ್‌ ನಲ್ಲಿ ಇಲ್ಲಿಯವರೆಗೂ ಮಾಡಿದ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಈ ಸಿನಿಮಾದಲ್ಲಿದೆ. ಇಂತಹ ಅವಕಾಶ ನೀಡಿದ ಟೀಮ್‌ಗೆ ಧನ್ಯವಾದ’ ಎಂದರು.

ಇನ್ನು “ಆನ’ ಚಿತ್ರದಲ್ಲಿ ಅದಿತಿ ಜತೆಗೆ ನಾಲ್ಕು ಪ್ರಮುಖ ಪಾತ್ರಗಳು ಇರಲಿವೆ. ಸಮರ್ಥ, ವಿಕಾಸ್‌ ಉತ್ತಯ್ಯ, ವರುಣ್‌ ಅಮರಾವತಿ ಮತ್ತು ಕಾರ್ತಿಕ್‌ ನಾಗರಾಜ್‌ ಚಿತ್ರದ ಇತರೆ ಮುಖ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ “ಚೂರಿಕಟ್ಟೆ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇರಣಾ ಚಿತ್ರದ ಮತ್ತೂಂದು ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಉದಯ್‌ ಲೀಲಾ ಛಾಯಾಗ್ರಹಣ, ವಿಜೇತ ಚಂದ್ರ ಸಂಕಲನವಿದೆ. ಚಿತ್ರದ ಹಾಡುಗಳಿಗೆ ರಿತ್ವಿಕ್‌ ಮುರಳೀಧರ್‌ ಸಂಗೀತ ಸಂಯೋಜನೆಯಿದೆ. ಸದ್ಯ ಟೈಟಲ್‌ ಅನಾವರಣ ಮಾಡಿ, ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿರುವ ಚಿತ್ರತಂಡ, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಚಾಲನೆ ನೀಡಿದೆ. ಚಿತ್ರಮಂದಿರಗಳು ಯಥಾಸ್ಥಿತಿಗೆ ಬರುತ್ತಿದ್ದಂತೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.