ಆನ ಆದ ಅದಿತಿ : ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌


Team Udayavani, Oct 26, 2020, 9:20 AM IST

cinema-tdy-1

ನಟಿ ಅದಿತಿ ಪ್ರಭುದೇವ ನಾಯಕಿಯಾಗಿ ಭಾನುವಾರ, ಅಕ್ಟೋಬರ್‌ 25, 2020 ಅಭಿನಯಿಸುತ್ತಿರುವ ಹೊಸಚಿತ್ರದ ಟೈಟಲ್‌ ಅನೌನ್ಸ್‌ ಆಗಿದೆ. ಮನೋಜ್‌ ಪಿ. ನಡಲುಮನೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ “ಆನ’ ಎಂದು ಹೆಸರಿಡಲಾಗಿದೆ.

ದಸರಾ ಹಬ್ಬದ ಸಂದರ್ಭದಲ್ಲಿ ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಅದಿತಿ ಸೂಪರ್‌ ವುಮೆನ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಯುಕೆ ಪ್ರೋಡಕ್ಷನ್ಸ್‌’ ಲಾಂಛನದಲ್ಲಿ ಶ್ರೀಮತಿ ಪೂಜಾ ವಸಂತಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಈ ಹಿಂದೆ ಕೆಲ ಕಿರುಚಿತ್ರ ಮತ್ತು ಟೆಲಿ ಫಿಲಂಗಳನ್ನು ನಿರ್ದೇಶನ ಮಾಡಿದಅನುಭವ ಹೊಂದಿರುವ ನಿರ್ದೇಶಕ ಮನೋಜ್‌ ಪಿ. ನಡಲುಮನೆ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ. ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಮಾತನಾಡುವ ಮನೋಜ್‌, “ಲಾಕ್‌ ಡೌನ್‌ ಸಮಯದಲ್ಲಿ ಹೊಳೆದ ಕಥೆ ಇದು. ಸದ್ಯ ಇಡೀ ಭಾರತದಲ್ಲಿ ಲೇಡಿ ಸೂಪರ್‌ ಹೀರೋ ಪರಿಕಲ್ಪನೆಯಲ್ಲಿ ಯಾವುದೇ ಸಿನಿಮಾ ಬಂದಿಲ್ಲ. ಅದನ್ನೇ ಗಮನದಲ್ಲಿಟ್ಟುಕೊಂಡು ಈ ಕಥೆ ಸಿದ್ಧಪಡಿಸಿಕೊಂಡು, ಸಿನಿಮಾ ಆರಂಭಿಸಿದ್ದೆ. ಇನ್ನೆರಡು ದಿನದ ಕ್ಲೈಮ್ಯಾಕ್ಸ್‌ ಶೂಟಿಂಗ್‌ ಬಾಕಿ ಇದೆ. ಚಿತ್ರದ ಕೊನೆಯ 20 ನಿಮಿಷಗಳು ನೋಡುಗರನ್ನು ಫ್ಯಾಂಟಸಿ ಲೋಕಕ್ಕೆ ಕರೆದೊಯ್ಯುವುದು ಪಕ್ಕಾ. ಹಾರರ್‌ ಶೈಲಿಯ ಅಂಶಗಳೂ ಈ ಸಿನಿಮಾದಲ್ಲಿವೆ.

ತಾಂತ್ರಿಕವಾಗಿ ಇಡೀ ಸಿನಿಮಾ ಶ್ರೀಮಂತವಾಗಿ ಮೂಡಿಬಂದಿದೆ. ಇನ್ನೊಂದು ವಿಶೇಷ ಏನೆಂದರೆ, ಈ ಸಿನಿಮಾ ಮುಂದಿನ ದಿನಗಳಲ್ಲಿ ಚಾಪ್ಟರ್‌ ಗಳಾಗಿಯೂ ಸಿದ್ಧವಾಗಲಿದೆ’ ಎಂದು ಮಾಹಿತಿ ನೀಡಿದರು. ಇನ್ನು ತಮ್ಮ ಪಾತ್ರದ ಬಗ್ಗೆ ಹೇಳಿಕೊಳ್ಳುವ ಅದಿತಿ, “ತುಂಬ ಇಷ್ಟಪಟ್ಟು ಮತ್ತು ತುಂಬ ಕಷ್ಟಪಟ್ಟು ಮಾಡಿದ ಸಿನಿಮಾ  ಇದು. ಇಂಥ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ. ಕಥೆ ಕೇಳಿ ಒಂದೇ ಸಲಕ್ಕೆ ನಟಿಸಲು ಒಪ್ಪಿಕೊಂಡೆ. ಚಿತ್ರದ ಬಹುಪಾಲು ಶೂಟಿಂಗ್‌ ರಾತ್ರಿ ಹೊತ್ತಿನಲ್ಲಿಯೇ ನಡೆದಿದೆ. ಇನ್ನು ಕೆಲ ಭಾಗದ ಚಿತ್ರೀಕರಣ ಬಾಕಿ ಇದೆ. ನನ್ನ ಸಿನಿಮಾ ಕರಿಯರ್‌ ನಲ್ಲಿ ಇಲ್ಲಿಯವರೆಗೂ ಮಾಡಿದ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಈ ಸಿನಿಮಾದಲ್ಲಿದೆ. ಇಂತಹ ಅವಕಾಶ ನೀಡಿದ ಟೀಮ್‌ಗೆ ಧನ್ಯವಾದ’ ಎಂದರು.

ಇನ್ನು “ಆನ’ ಚಿತ್ರದಲ್ಲಿ ಅದಿತಿ ಜತೆಗೆ ನಾಲ್ಕು ಪ್ರಮುಖ ಪಾತ್ರಗಳು ಇರಲಿವೆ. ಸಮರ್ಥ, ವಿಕಾಸ್‌ ಉತ್ತಯ್ಯ, ವರುಣ್‌ ಅಮರಾವತಿ ಮತ್ತು ಕಾರ್ತಿಕ್‌ ನಾಗರಾಜ್‌ ಚಿತ್ರದ ಇತರೆ ಮುಖ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ “ಚೂರಿಕಟ್ಟೆ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇರಣಾ ಚಿತ್ರದ ಮತ್ತೂಂದು ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಉದಯ್‌ ಲೀಲಾ ಛಾಯಾಗ್ರಹಣ, ವಿಜೇತ ಚಂದ್ರ ಸಂಕಲನವಿದೆ. ಚಿತ್ರದ ಹಾಡುಗಳಿಗೆ ರಿತ್ವಿಕ್‌ ಮುರಳೀಧರ್‌ ಸಂಗೀತ ಸಂಯೋಜನೆಯಿದೆ. ಸದ್ಯ ಟೈಟಲ್‌ ಅನಾವರಣ ಮಾಡಿ, ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿರುವ ಚಿತ್ರತಂಡ, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಚಾಲನೆ ನೀಡಿದೆ. ಚಿತ್ರಮಂದಿರಗಳು ಯಥಾಸ್ಥಿತಿಗೆ ಬರುತ್ತಿದ್ದಂತೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.