ಮದುವೆ ಬಳಿಕ ನಟನೆ ಬಗ್ಗೆ ಯೋಚಿಸಿಲ್ಲ


Team Udayavani, Feb 26, 2017, 11:06 AM IST

Amulya.jpg

ಅಮೂಲ್ಯಗೆ ಜಗದೀಶ್‌ ಅವರ ಜೊತೆಗೆ ಮದುವೆ ಫಿಕ್ಸ್‌ ಆಗಿರೋದು ಗೊತ್ತೇ ಇದೆ. ಸದ್ಯಕ್ಕೆ ಎರಡೂ ಕುಟುಂಬದವರು ಅಮೂಲ್ಯ ಮತ್ತು ಜಗದೀಶ್‌ ಅವರ ಮದುವೆಗೆ ಒಪ್ಪಿದ್ದು, ಮಾರ್ಚ್‌ 6ಕ್ಕೆ ನಿಶ್ಚಿತಾರ್ಥ ನಡೆಯಲಿದೆ. ಇನ್ನು ಮದುವೆಯ ದಿನಾಂಕ ಮೇನಲ್ಲಿ ಎಂದು ಹೇಳಲಾಗುತ್ತಿದೆ. ಮದುವೆಯ ಸಡಗರದಲ್ಲಿರುವ ಅಮೂಲ್ಯ, ಶಾಪಿಂಗ್‌ ಮುಂತಾದ ಕೆಲಸಗಳಲ್ಲಿ ಬಿಝಿಯಾಗಿದ್ದಾರೆ. ಈ ನಡುವೆಯೇ ಇಲ್ಲಿನ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

* ಮದುಮಗಳು ಫ‌ುಲ್‌ ಬಿಝಿನಾ?
– ಹೌದು, ಶಾಪಿಂಗ್‌ನಲ್ಲಿ ಬಿಝಿಯಾಗಿದ್ದೇವೆ. ಎಲ್ಲವೂ ದಿಢೀರನೇ ಆಯಿತು. ಹಾಗಾಗಿ, ನಿಶ್ಚಿತಾರ್ಥಕ್ಕೆ ತಯಾರಿ ನಡೆಸುತ್ತಿದ್ದೇವೆ. ಮಾರ್ಚ್‌ 6ಕ್ಕೆ ನಿಶ್ಚಿತಾರ್ಥ. ಸಮಯ ಬೇರೆ ಕಡಿಮೆ ಇದೆ. ಹಾಗಾಗಿ, ಆ ತಯಾರಿಯಲ್ಲಿ ಎಲ್ಲರೂ ಬಿಝಿಯಾಗಿದ್ದೇವೆ. 

* ಇದು ನಿಮ್ಮ ನಿರ್ಧಾರನಾ? ಮನೆಯವರದ್ದಾ?
– ಇಬ್ಬರದ್ದೂ ಎಲ್ಲರೂ ಜೊತೆಯಾಗಿ ಕುಳಿತು ಚರ್ಚಿಸಿದ ನಂತರವೇ ಮದುವೆ ನಿರ್ಧಾರಕ್ಕೆ ಬಂದಿದ್ದು. ಎಲ್ಲವನ್ನು ಪರಿಗಣಿಸಬೇಕು. ಹಾಗಾಗಿ, ನಾನು ಕೂಡಾ ಮದುವೆಗೆ ಒಪ್ಪಿಕೊಂಡೆ.

* ಗಣೇಶ್‌ ಮನೆಯಲ್ಲಿ ಮದುವೆ ಮಾತುಕತೆ ನಡೆಯಲು ಕಾರಣ?
– ಅವರು ಎರಡೂ ಕುಟುಂಬಗಳಿಗೂ ಫ್ರೆಂಡ್‌. ಹಿಂದೊಮ್ಮೆ ಅಮ್ಮ, ಗಣೇಶ್‌ ಹಾಗೂ ಶಿಲ್ಪಾ ಅವರಲ್ಲಿ, “ಒಳ್ಳೆಯ ಹುಡುಗ ಸಿಕ್ಕರೆ ಮದುವೆ ಮಾಡುತ್ತೇವೆ’ ಎಂದಿದ್ದಾರೆ. ಅದರಂತೆ ಗಣೇಶ್‌ ಕುಟುಂಬ ಈ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಗಣೇಶ್‌ ಕುಟುಂಬ ಪ್ರತಿ ಹಂತದಲ್ಲೂ ನಮ್ಮನ್ನು ಬೆಂಬಲಿಸುತ್ತಲೇ ಬಂದಿದೆ. ಹಾಗಾಗಿ, ಅವರ ಮನೆಯಲ್ಲೇ ಮಾತುಕತೆ ನಡೆದಿದೆ.
 
* ಮದುವೆಯಾದ ನಂತರ ಅಮೂಲ್ಯ ಸಿನಿಮಾದಲ್ಲಿ ನಟಿಸುತ್ತಾರಾ?
– ಗೊತ್ತಿಲ್ಲ, ಈಗಲೇ ಯಾವುದನ್ನೂ ಪ್ಲಾನ್‌ ಮಾಡಿಲ್ಲ. ಆ ಬಗ್ಗೆ ಇನ್ನೂ ಮಾತುಕತೆ ನಡೆದಿಲ್ಲ. ಅವರ ಕುಟುಂಬ ಕೂಡಾ ಆ ಬಗ್ಗೆ ಏನೂ ಮಾತನಾಡಿಲ್ಲ. ಮುಂದೆ ಆ ಬಗ್ಗೆ ಯೋಚಿಸಬೇಕು.

* ವೈಯಕ್ತಿಕವಾಗಿ ನಿಮ್ಮ ಅಭಿಪ್ರಾಯ?
– ಒಳ್ಳೆಯ ಸಿನಿಮಾ ಸಿಕ್ಕರೆ ಆಲೋಚಿಸಬೇಕು. ಅದು ಕುಟುಂಬದೊಂದಿಗೆ ಚರ್ಚಿಸಿ. ಈಗಲೇ ಈ ಬಗ್ಗೆ ಹೇಳ್ಳೋದು ಕಷ್ಟ. ಏಕೆಂದರೆ ಮೊನ್ನೆಯಷ್ಟೇ ಮದುವೆ ಫಿಕ್ಸ್‌ ಆಗಿದೆ. ಮುಂದಿನ ಯೋಜನೆಗಳ ಬಗ್ಗೆ ನಾವೇನೂ ಮಾತನಾಡಿಕೊಂಡಿಲ್ಲ.

* ನಿಮ್ಮ ಹುಡುಗನಿಗೆ ಸಿನಿಮಾ ಆಸಕ್ತಿ ಇದೆಯಾ?
– ಇದೆ, ಅವರು ಕೂಡಾ ತುಂಬಾ ಸಿನಿಮಾ ನೋಡುತ್ತಾರೆ. 

* ನಿಮ್ಮ ಯಾವ ಸಿನಿಮಾ ಅವರಿಗೆ ಇಷ್ಟ?
– “ಚೆಲುವಿನ ಚಿತ್ತಾರ’, “ಶ್ರಾವಣಿ ಸುಬ್ರಮಣ್ಯ’ ಚಿತ್ರಗಳು ಅವರಿಗೆ ಇಷ್ಟವಂತೆ.

* ಮದುವೆ ಅದ್ಧೂರಿಯಾಗಿರುತ್ತಾ?
– ಮಾರ್ಚ್‌ 6ಕ್ಕೆ ಎಂಗೇಜ್‌ಮೆಂಟ್‌ ನಡೆಯಲಿದೆ. ಆ ನಂತರ ಆ ಬಗ್ಗೆ ಚರ್ಚಿಸಬೇಕು

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.