ಅಜೇಯ್ ಹೊಸ ಚಿತ್ರಕ್ಕೆ ತಯಾರಿ
ಟಿ.ಆರ್.ಚಂದ್ರಶೇಖರ್ ನಿರ್ಮಾಣ
Team Udayavani, Apr 16, 2019, 3:00 AM IST
ಈ ಹಿಂದೆ “ಚಮಕ್’, ‘ಅಯೋಗ್ಯ’ ಹಾಗೂ “ಬೀರ್ಬಲ್’ ಸಿನಿಮಾಗಳನ್ನು ನಿರ್ಮಿಸಿದ್ದ ನಿರ್ಮಾಪಕ ಟಿ.ಆರ್ ಚಂದ್ರಶೇಖರ್ ಇದೀಗ ಸದ್ದಿಲ್ಲದೆ ತಮ್ಮ ಹೊಸಚಿತ್ರದ ಕೆಲಸವನ್ನು ಶುರು ಮಾಡಿದ್ದಾರೆ.
“ಕ್ರಿಸ್ಟಲ್ ಪಾರ್ಕ್ ಸಿನಿಮಾಸ್’ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಸದ್ಯ ಪ್ರೊಡಕ್ಷನ್ ನಂಬರ್-7 ಎಂದು ವರ್ಕಿಂಗ್ ಟೈಟಲ್ ಇಡಲಾಗಿದ್ದು, ಶ್ರೀರಾಮ ನವಮಿ ಹಬ್ಬದ ಸಂದರ್ಭದಲ್ಲಿ ನಿರ್ಮಾಪಕರು ತಮ್ಮ ಹೊಸ ಚಿತ್ರವನ್ನು ಅನೌನ್ಸ್ ಮಾಡಿದ್ದಾರೆ.
ಇನ್ನು ಈ ಚಿತ್ರದಲ್ಲಿ ಅಜೇಯ್ ರಾವ್ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಅಜೇಯ್ ರಾವ್ ಸಿನಿ ಕೆರಿಯರ್ನ 25ನೇ ಚಿತ್ರ “ತಾಯಿಗೆ ತಕ್ಕ ಮಗ’ ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದಿತ್ತು.
ಆದರೆ ಚಿತ್ರ ಬಿಡುಗಡೆಯ ನಂತರ ಬಾಕ್ಸಾಫೀಸ್ನಲ್ಲಿ ನಿರೀಕ್ಷಿತ ಗೆಲುವು ಕಾಣದೆ ಚಿತ್ರ ತಣ್ಣಗಾಯಿತು. ಅದಾದ ನಂತರ ಅಜೇಯ್ ಯಾವ ಚಿತ್ರ ಮಾಡುತ್ತಾರೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದ್ದು, ಈ ಚಿತ್ರದಲ್ಲಿ “ತಾಯಿಗೆ ತಕ್ಕ ಮಗ’ನ ಗೆಟಪ್ ಹೇಗಿರಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
ಕೆಲ ವರ್ಷಗಳಿಂದ ಚಿತ್ರರಂಗದಲ್ಲಿ ಹಲವು ಚಿತ್ರಗಳಿಗೆ ಸಹ ನಿರ್ದೇಶಕನಾಗಿ, ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿರುವ ನವ ಪ್ರತಿಭೆ ಬಿ. ತಿಮ್ಮೇಗೌಡ ಜಾಕಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಹೆಸರು ಉಳಿದ ಕಲಾವಿದರು ಮತ್ತು ತಂತ್ರಜ್ಞರ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?