ಹೊಸ ಚಿತ್ರದಲ್ಲಿ ಅಜೇಯ್‌- ವಿನೋದ್‌


Team Udayavani, Oct 26, 2017, 1:00 PM IST

Ajay-Rao.jpg

ಕನ್ನಡದಲ್ಲಿ ಮಲ್ಟಿಸ್ಟಾರ್‌ ಸಿನಿಮಾಗಳಿಗೆ ಈಗ ಬರವಿಲ್ಲ. ಕನ್ನಡದ ಬಹುತೇಕ ಸ್ಟಾರ್‌ ನಟರು ಜೊತೆಗೂಡಿ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಹಲವು ಮಲ್ಟಿಸ್ಟಾರ್‌ ಚಿತ್ರಗಳು ಬಂದಿವೆ, ಬರುತ್ತಿವೆ, ಆ ಪೈಕಿ ಬೆರಳೆಣಿಕೆ ಚಿತ್ರಗಳು ಗೆದ್ದಿವೆ. ಈಗ ಶಿವರಾಜ್‌ಕುಮಾರ್‌ ಮತ್ತು ಸುದೀಪ್‌ “ದಿ ವಿಲನ್‌’ ಚಿತ್ರದಲ್ಲಿ ಮಿಂಚಿದರೆ, ಅತ್ತ ಪುನೀತ್‌ರಾಜ್‌ಕುಮಾರ್‌ ಅವರು ಸಹ ಒಳ್ಳೆಯ ಕಥೆ ಸಿಕ್ಕರೆ ಖಂಡಿತ ಮಲ್ಟಿಸ್ಟಾರ್‌ ಸಿನಿಮಾದಲ್ಲಿ ನಟಿಸುವುದಾಗಿ ಇತ್ತೀಚೆಗೆ ಸೋಷಿಯಲ್‌ ಮೀಡಿಯಾ ಮೂಲಕ ಹೇಳಿಕೆ ಕೊಟ್ಟಿದ್ದರು. ಈಗಾಗಲೇ ಒಂದಷ್ಟು ಮಲ್ಟಿಸ್ಟಾರ್‌ ಚಿತ್ರಗಳು ಸೆಟ್ಟೇರುತ್ತಿವೆ. ಈಗ ಇನ್ನೊಂದು ಹೊಸ ಬೆಳವಣಿಗೆಯೆಂದರೆ, ಕನ್ನಡದ ಮತ್ತೂಬ್ಬ ಸಕ್ಸಸ್‌ ನಟ ಕೃಷ್ಣ ಅಜೇಯ್‌ರಾವ್‌ ಅವರು ಇನ್ನೊಂದು ಮಲ್ಟಿಸ್ಟಾರ್‌ ಚಿತ್ರಕ್ಕೆ ಜೈ ಎಂದಿದ್ದಾರೆ. 

ಈ ಹಿಂದೆ ಯೋಗಿ ಹಾಗು ಮದರಂಗಿ ಕೃಷ್ಣ ಜೊತೆಗೆ “ಜಾನ್‌ ಜಾನಿ ಜನಾರ್ದನ್‌’ ಚಿತ್ರ ಮಾಡಿದ್ದ ಅಜೇಯ್‌ರಾವ್‌, ಹೊಸ ತಂಡದ ಜತೆ ಹೊಸಬಗೆಯ ಚಿತ್ರದಲ್ಲಿ ಕಾಣಿಸಿಕೊಳ್ಳಲು ಅಣಿಯಾಗಿದ್ದಾರೆ. ಅದೊಂದು ಪಕ್ಕಾ ಔಟ್‌ ಅಂಟ್‌ ಔಟ್‌ ಆ್ಯಕ್ಷನ್‌ ಕಮ್‌ ಥ್ರಿಲ್ಲರ್‌ ಸಿನಿಮಾ ಎನ್ನುವ ಅಜೇಯ್‌ರಾವ್‌, ಆ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು ಹಾಗು ಹಿಂದಿಯಲ್ಲಿ ತಯಾರಾಗಲಿದೆ ಎನ್ನುತ್ತಾರೆ. ಸದ್ಯಕ್ಕೆ ಅಜೇಯ್‌ರಾವ್‌ ಆ ಹೊಸ ಚಿತ್ರದಲ್ಲಿ ನಟಿಸುವುದು ಪಕ್ಕಾ ಆಗಿದೆ. ಅವರ ಜತೆಗೆ ವಿನೋದ್‌ಪ್ರಭಾಕರ್‌ ಅವರು ಕೂಡ ಸ್ಪೆಷಲ್‌ ಪಾತ್ರ ಮಾಡಲಿದ್ದಾರೆ.

ಇನ್ನು, ಅಜೇಯ್‌ರಾವ್‌ ನಟಿಸಲಿರುವ ಹೊಸ ಚಿತ್ರಕ್ಕೆ ಅನಿಲ್‌ ಎಂಬುವವರು ನಿರ್ದೇಶನ ಮಾಡಲಿದ್ದಾರೆ. ಹೈದರಾಬಾದ್‌ ಮೂಲದ ಅನಿಲ್‌ಗೆ ಕನ್ನಡದಲ್ಲಿ ಇದು ಮೊದಲ ಸಿನಿಮಾವಂತೆ. ಇನ್ನು, ಸಾಗರ್‌ ಎಂಬುವವರು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಅವರೊಂದಿಗೆ ಹಲವು ಕಾಪೋರೇಟ್‌ ಕಂಪೆನಿಗಳು ಸಹ ನಿರ್ಮಾಣದಲ್ಲಿ ಕೈ ಜೋಡಿಸಿದ್ದು, ಸಿನಿಮಾಗಿನ್ನೂ ಶೀರ್ಷಿಕೆ ಪಕ್ಕಾ ಆಗಿಲ್ಲ. “ಅದೊಂದು ಬಿಗ್‌ಬಜೆಟ್‌ ಸಿನಿಮಾ ಆಗಲಿದೆ. ನಾನು ಬಯಸಿದ ಕಥೆ ಅದಾಗಿದ್ದರಿಂದ ನಟಿಸಲು ಒಪ್ಪಿದ್ದೇನೆ. ಮೊದಲೇ ಹೇಳಿದಂತೆ, ಅದು ಪಕ್ಕಾ ಕಮರ್ಷಿಯಲ್‌ ಹಾಗು ಆ್ಯಕ್ಷನ್‌ ಪ್ಯಾಕೇಜ್‌ ಸಿನಿಮಾ ಆಗಲಿದೆ’ ಎಂಬುದು ಅಜೇಯ್‌ರಾವ್‌ ಮಾತು.

ಅಂದಹಾಗೆ, ಅಜೇಯ್‌ರಾವ್‌ ಅವರೀಗ ಸದ್ಯಕ್ಕೆ “ತಾಯಿಗೆ ತಕ್ಕ ಮಗ’ ಚಿತ್ರಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಶಶಾಂಕ್‌ ನಿರ್ಮಾಣದ ಈ ಚಿತ್ರಕ್ಕೆ ನವೆಂಬರ್‌ ಮೊದಲ ವಾರದಲ್ಲಿ ಟ್ರಯಲ್‌ ಶೂಟ್‌ ನಡೆಯಲಿದೆ. ಅದಾದ ಬಳಿಕ ಮುಹೂರ್ತ ನಡೆಯಲಿದೆ. “ತಾಯಿಗೆ ತಕ್ಕ ಮಗ’ ಬಳಿಕ ಅಜೇಯ್‌ರಾವ್‌ ಹೊಸ ಸಿನಿಮಾಗೆ ಗ್ರೀನ್‌ಸಿಗ್ನಲ್‌ ಕೊಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಅದು ಜನವರಿ, 2018 ರಲ್ಲಿ ಶುರುವಾಗಲಿದೆ. ಹಾಗಾದರೆ, ಅಜೇಯ್‌ರಾವ್‌ ನಟಿಸಲಿರುವ ಹೊಸ ಚಿತ್ರದಲ್ಲಿ ವಿನೋದ್‌ಪ್ರಭಾಕರ್‌ ಪಾತ್ರ ಏನು ಗೊತ್ತಾ? ಅದು ಸಿಬಿಐ ಅಧಿಕಾರಿ. ಅವರಿಲ್ಲಿ ಸ್ಟೈಲಿಷ್‌ ಆಗಿರುವ ಸಿಬಿಐ ಅಧಿಕಾರಿಯಂತೆ. ವಿನೋದ್‌ಪ್ರಭಾಕರ್‌ಗೆ ಕಥೆ ಮತ್ತು ಪಾತ್ರ ಇಷ್ಟವಾಗಿದ್ದಕ್ಕೆ ನಟಿಸಲು ಒಪ್ಪಿದ್ದಾಗಿ ಹೇಳುತ್ತಾರೆ ವಿನೋದ್‌ ಪ್ರಭಾಕರ್‌.

ನಾನು ಬಿಜಿಯಾಗಿದ್ದರೂ, ಆ ಕಥೆ, ಪಾತ್ರ ಕೇಳಿದಾಗ ಬಿಡಬಾರದು ಎನಿಸಿತು. ಹಾಗಾಗಿ 20 ದಿನಗಳ ಕಾಲ ಡೇಟ್‌ ಕೊಟ್ಟಿದ್ದೇನೆ. ಎಲ್ಲಕ್ಕಿಂತ ಹೆಚ್ಚಾಗಿ ಆ ತಂಡ ನೋಡಿ ಖುಷಿಯಾಯ್ತು. ತುಂಬಾನೇ ತಯಾರಿ ಮಾಡಿಕೊಂಡಿದ್ದಾರೆ. ಕನ್ನಡ, ತೆಲುಗು, ಹಿಂದಿಯಲ್ಲಿ ತಯಾರಾಗುತ್ತಿದೆ. ನನ್ನದು ಅಲ್ಲಿ ಅತಿಥಿ ಪಾತ್ರವಷ್ಟೇ. ಆದರೂ, ಅದಕ್ಕೇ ಸಾಕಷ್ಟು ಆದ್ಯತೆ ಇದೆ. ಯೂನಿಫಾರಂ ಇಲ್ಲದ, ರಗಡ್‌ ಆಫೀಸರ್‌ ನಾನು ಎಂದಷ್ಟೇ ಹೇಳಿ ಸುಮ್ಮನಾಗುತ್ತಾರೆ ವಿನೋದ್‌. ಅಂದಹಾಗೆ, ಬುಧವಾರ ಹೈದರಾಬಾದ್‌ನಲ್ಲಿ ಅಜೇಯ್‌ರಾವ್‌ ಮತ್ತು ವಿನೋದ್‌ಪ್ರಭಾಕರ್‌ ನಟಿಸಲಿರುವ ಹೊಸ ಚಿತ್ರಕ್ಕೆ ಚಿಕ್ಕದ್ದಾಗಿ ಪೂಜೆಯೂ ನಡೆದಿದೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.