ಪೈಲ್ವಾನ್‌ ಜೊತೆ ಆಕಾಂಕ್ಷಾ ಸಿಂಗ್‌


Team Udayavani, May 15, 2018, 11:14 AM IST

pailwan.jpg

ಸುದೀಪ್‌ ನಾಯಕರಾಗಿರುವ “ಪೈಲ್ವಾನ್‌’ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆ? ಈ ಕುತೂಹಲ ಸುದೀಪ್‌ ಅವರ ಅಭಿಮಾನಿಗಳಿಂದ ಹಿಡಿದು ಸಿನಿಪ್ರೇಮಿಗಳವರೆಗೆ ಇತ್ತು. ಈ ನಡುವೆಯೇ ಅಲ್ಲಲ್ಲಿ ಕೆಲವು ನಾಯಕಿಯರ ಹೆಸರುಗಳು ಕೇಳಿಬಂದುವು. ಈಗ ಅಂತಿಮವಾಗಿ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಹಾಗಂತ ಕನ್ನಡದ ಹುಡುಗಿಯಲ್ಲ, ಮುಂಬೈ ಬೆಡಗಿ.

ಹೌದು, ಮುಂಬೈ ಮೂಲದ ಆಕಾಂಕ್ಷಾ ಸಿಂಗ್‌ “ಪೈಲ್ವಾನ್‌’ ಚಿತ್ರಕ್ಕೆ ನಾಯಕಿಯಾಗಿದ್ದಾರೆ. ಈ ಮೂಲಕ ಮುಂಬೈ ಮೂಲದ ಮತ್ತೂಬ್ಬ ನಾಯಕಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಂತಾಗಿದೆ. ಎಲ್ಲಾ ಓಕೆ, ಈ ಆಕಾಂಕ್ಷಾ ಯಾರು, ಅವರ ಹಿನ್ನೆಲೆಯೇನು ಎಂದು ನೀವು ಕೇಳಿದರೆ, ಅವರ ಕಿರುತೆರೆ ಜರ್ನಿಯಿಂದಲೇ ಹೇಳಬೇಕಾಗುತ್ತದೆ. ಹಿಂದಿ ಕಿರುತೆರೆಯಲ್ಲಿ ಪ್ರಸಾರವಾದ “ನಾ ಬೋಲೇ ತುಮ್‌ ನ ಮೈನೇ ಕುಚ್‌ ಕಹಾ’ದ ಎರಡೂ ಸರಣಿಗಳಲ್ಲೂ ಆಕಾಂಕ್ಷಾ ಕಾಣಿಸಿಕೊಂಡಿದ್ದಾರೆ.

ಇದಲ್ಲದೇ, “ಸಾವ್‌ಧಾನ್‌ ಇಂಡಿಯಾ’, “ಗುಲ್‌ಮೋಹರ್‌ ಗ್ರ್ಯಾಂಡ್‌’ನಲ್ಲೂ ಆಕಾಂಕ್ಷಾ ಪ್ರಧಾನ ಪಾತ್ರ ಮಾಡಿದ್ದಾರೆ. ಆಕಾಂಕ್ಷಾ ಜರ್ನಿ ಕೇವಲ ಕಿರುತೆರೆಗೆ ಮುಗಿದು ಹೋಗಿಲ್ಲ. ಎಲ್ಲಾ ನಟಿಯರಂತೆ ಆಕಾಂಕ್ಷಾ ಕೂಡಾ ಕಿರುತೆರೆಯಿಂದ ಹಿರಿತೆರೆಗೆ ಜಂಪ್‌ ಮಾಡಿದ್ದಾರೆ. ಹಿಂದಿಯ “ಬದ್ರಿನಾಥ್‌ ಕೀ ದುಲ್ಹನಿಯಾ’ ಹಾಗೂ ತೆಲುಗಿನ “ಮಳ್ಳಿ ರಾವ’ ಸಿನಿಮಾದಲ್ಲಿ ಆಕಾಂಕ್ಷಾ ನಟಿಸಿದ್ದಾರೆ. ಸದ್ಯ ಆಕಾಂಕ್ಷಾ ನಾಗಾರ್ಜುನ ಹಾಗೂ ನಾನಿ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಚಿತ್ರವೊಂದರಲ್ಲೂ ಆಕಾಂಕ್ಷಾ ಸಿಂಗ್‌ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಕನ್ನಡದ ಹುಡುಗಿ ರಶ್ಮಿಕಾ ಕೂಡಾ ನಟಿಸುತ್ತಿದ್ದು, ಆಕಾಂಕ್ಷಾ, ನಾಗಾರ್ಜುನ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಆಕಾಂಕ್ಷಾಗೆ ಅವಕಾಶ ಸಿಕ್ಕಿದೆ. ಮೊದಲ ಸಿನಿಮಾವೇ ಕನ್ನಡದ ಸ್ಟಾರ್‌ ನಟನ ಜೊತೆ ಸಿಕ್ಕಿರುವುದರಿಂದ ಆಕಾಂಕ್ಷಾ ಕೂಡಾ ಎಕ್ಸೆ„ಟ್‌ ಆಗಿದ್ದಾರೆ. “ನನ್ನ ಮೊದಲ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿದ್ದೇನೆ. ಈ ಸಿನಿಮಾ ಬಗ್ಗೆ ಎಕ್ಸೆ„ಟ್‌ ಆಗಿದ್ದೇನೆ’ ಎಂದ ಟ್ವೀಟ್‌ ಮಾಡಿದ್ದಾರೆ. 

ಅಂದಹಾಗೆ, “ಪೈಲ್ವಾನ್‌’ ಚಿತ್ರವನ್ನು ಕೃಷ್ಣ ಅವರು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಹೆಬ್ಬುಲಿ’ ಚಿತ್ರ ಮಾಡಿದ ಕೃಷ್ಣ ಈಗ ಸುದೀಪ್‌ ಅವರೊಂದಿಗೆ ಎರಡನೇ ಸಿನಿಮಾ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕಬೀರ್‌ ಸಿಂಗ್‌ ದುಹಾನ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರು ಕೂಡಾ ತಮ್ಮ ಪಾತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಇದರ ಜೊತೆಗೆ ಮತ್ತೂಬ್ಬ ದೊಡ್ಡ ಕಲಾವಿದ ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಮೇ 17 ರಿಂದ ಚಿತ್ರೀಕರಣ ಚೆನ್ನೈನಲ್ಲಿ ಆರಂಭವಾಗಲಿದೆ. 

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.