ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ ಸಿಸಿಬಿ ಶಾಕ್
Team Udayavani, Sep 18, 2020, 4:27 PM IST
ಬೆಂಗಳೂರು: ಚಂದನವನದಲ್ಲಿ ನಶೆ ಧೂಮ ಗಾಢವಾಗಿ ಹಬ್ಬುತ್ತಿದೆ. ರಾಗಿಣಿಯಿಂದ ಆರಂಭವಾದ ನಶೆ ನಂಟಿನ ಜಾಲ ಈಗ ಸ್ಟಾರ್ ನಿರೂಪಕ ಅಕುಲ್ ಬಾಲಾಜಿ ವರೆಗೆ ಬಂದು ತಲುಪಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಿರೂಪಕ ಅಕುಲ್, ನಟ ಸಂತೋಷ್ ಕುಮಾರ್ ಮತ್ತು ಕಾಂಗ್ರೆಸ್ ಶಾಸಕ ಆರ್ ವಿ ದೇವರಾಜ್ ಮಗ ಯುವರಾಜ್ ಗೆ ನೋಟಿಸ್ ನೀಡಿದ್ದಾರೆ.
ಇವರುಗಳಿಗೆ ಇಂದು ವಾಟ್ಸಪ್ ಮೂಲಕ ನೋಟಿಸ್ ನೀಡಲಾಗಿದೆ. ನಾಳೆ ಸಿಸಿಬಿ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಸೂಚಿಸಿಲಾಗಿದೆ.
ಅಕುಲ್ ಬಾಲಾಜಿ ಖ್ಯಾತ ನಿರೂಪಕರಾಗಿದ್ದು, ಖಾಸಗಿ ವಾಹಿನಿಗಳಲ್ಲಿ ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದರು. ನಟ ಸಂತೋಷ್ ಕುಮಾರ್ ‘ ನೂರು ಜನ್ಮಕೂ’, ‘ಮಾತಾಡ್ ಮಾತಾಡ್ ಮಲ್ಲಿಗೆ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಜೊತೆ ಸಂತೋಷ್ ಪಾರ್ಟಿಗಳಲ್ಲಿ ಕಾಣಿಸಿಕೊಂಡಿರುವ ಫೋಟೊ ವೈರಲ್ ಆಗುತ್ತಿದೆ.
ಇದನ್ನೂ ಓದಿ: ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್ ಸಮದ್
ಚಾಮರಾಜಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ಮಗ ಯುವರಾಜ್ ಗೂ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಹೇಗೆ ಬಂತು ಎನ್ನುವುದು ಗೊತ್ತಿಲ್ಲ. ಸಿಕ್ಕಿಬಿದ್ದಿರುವ ಯಾವ ಆರೋಪಿಗಳೊಂದಿಗೆ ನನಗೆ ಸಂಪರ್ಕವಿಲ್ಲ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಈಗಾಗಲೇ ನ್ಯಾಯಾಂಗ ಬಂಧನ ಎದುರಿಸುತ್ತಿದ್ದಾರೆ. ಸ್ಟಾರ್ ದಂಪತಿ ದಿಗಂತ್ ಮತ್ತು ಐಂದ್ರಿತಾ ರೇ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ